ದುರ್ಗಾಮಾತೆ ಜಂಬೂ ಸವಾರಿ
Team Udayavani, Oct 20, 2018, 5:14 PM IST
ಹರಿಹರ: ವಿಜಯ ದಶಮಿ ನಿಮಿತ್ತ ಶುಕ್ರವಾರ ಸಂಜೆ ನಗರದಲ್ಲಿ ನಡೆದ ಅದ್ಧೂರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಾವಿರಾರು ಜನರು ಶ್ರದ್ಧಾ ಭಕ್ತಿಯಿಂದ ಬನ್ನಿ ಮುಡಿದರು.
ನಗರದ ಶ್ರೀ ಹರಿಹರೇಶ್ವರ ದೇವಸ್ಥಾನದ ಆವರಣದಲ್ಲಿ ಉಜ್ಜಯಿನಿ ಪೀಠದ ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಶ್ರೀಗಳ ಸಾನ್ನಿಧ್ಯದಲ್ಲಿ ಆರಂಭವಾದ ಮೆರವಣಿಗೆಗೆ ಶಾಸಕ ಎಸ್.ರಾಮಪ್ಪ ಚಾಲನೆ ನೀಡಿದರು. ನಂತರ ನಗರದ ಪ್ರಮು ಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿತು.
ಅಂಬಾರಿಯಲ್ಲಿ ದುರ್ಗಾ ಮಾತೆ ಮೂರ್ತಿ ಹೊತ್ತು ಅಲಂಕೃತ ಆನೆ ಬರುತ್ತಿದ್ದಂತೆ ಇಕ್ಕೆಲಗಳಲ್ಲಿ ನಿಂತ ಜನರು ಬಾಗಿ ಕೈ ಮುಗಿದು ನಮಿಸಿದರು. ಮೆರವಣಿಗೆ ನಗರದ ದೇವಸ್ಥಾನ ರಸ್ತೆ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಮುಖ್ಯ ರಸ್ತೆ, ಗಾಂಧಿ ವೃತ್ತ, ಹಳೆ ಪಿ.ಬಿ ರಸ್ತೆ ಮೂಲಕ ಸಾಗಿ, ಹಳೆ ನೀರು ಸರಬರಾಜು ಕೇಂದ್ರದ ಬಳಿಯ ಜೋಡು ಬಸವೇಶ್ವರ ದೇವಸ್ಥಾನ ತಲುಪಿತು.
ಅಲ್ಲಿ ಬನ್ನಿ ಮಂಟಪಕ್ಕೆ ಪೂಜೆ ಸಲ್ಲಿಸಿ, ದೇವಸ್ಥಾನದ ಆವರಣದಲ್ಲಿರುವ ಬನ್ನಿ ವೃಕ್ಷದಿಂದ ಒಂದೆಸಳು ಪತ್ರೆ ತೆಗೆಯುವ ಮೂಲಕ ಸಾಮೂಹಿಕ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ತಹಶೀಲ್ದಾರ್ ರೆಹಾನ್ ಪಾಷಾ ಚಾಲನೆ ನೀಡಿದರು.
ಮನಸೂರೆಗೊಂಡ ಮೆರವಣಿಗೆ: ನಂದಿಕೋಲು, ಗೊರವಪ್ಪರ ಕುಣಿತ, ಬೊಂಬೆ ಕುಣಿತ, ಸಮಾಳ ಕುಣಿತ, ಕೋಲು ಕುಣಿತ, ಬಗೆಬಗೆಯ ವೇಷಧಾರಿಗಳು, ಡೊಳ್ಳು ತಂಡ, ಬ್ಯಾಂಡ್ ಸೆಟ್, ಶಿವ ತಾಂಡವ ನೃತ್ಯ ತಂಡ, ಬೆದರು ಬೊಂಬೆ, ಮಂಗಳ ವಾದ್ಯ ಸೇರಿದಂತೆ ಮೆರವಣಿಗೆಯಲ್ಲಿದ್ದ ವಿವಿಧ ಕಲಾ ತಂಡಗಳು ಜನಮನ ಸೂರೆಗೊಂಡವು.
ವಿವಿಧ ಸಮಾಜದ ದೇವಸ್ಥಾನಗಳ ಉತ್ಸವ ಮೂರ್ತಿಗಳು, ಒಂಟೆಗಳು ಮೆರವಣಿಗೆಯಲ್ಲಿದ್ದವು. ಎತ್ತಿನ ಬೆಲ್ಲದ ಬಂಡಿಯಲ್ಲಿ ಜನರಿಗೆ ಪಾನಕ ವಿತರಿಸಲಾಯಿತು.
ಜನಪ್ರತಿನಿಧಿಗಳ ಕುಣಿತ: ಮೆರವಣಿಗೆಯಲ್ಲಿ ಡಿಜೆ ಸಂಗೀತಕ್ಕೆ ನೂರಾರು ಯುವಕರು ಗುಂಪಾಗಿ ಕುಣಿದು ಕುಪ್ಪಳಿಸಿದರು. ಶಾಸಕ ಎಸ್. ರಾಮಪ್ಪ, ಮಾಜಿ ಶಾಸಕ ಬಿ.ಪಿ.ಹರೀಶ್ ಕೂಡ ಸಂಗೀತಕ್ಕೆ ಹೆಜ್ಜೆ ಹಾಕಿ ಯುವಕರಿಗೆ ಉತ್ಸಾಹ ತುಂಬಿದರು.
ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ನಗರಸಭಾಧ್ಯಕ್ಷೆ ಸುಜಾತಾ ರೇವಣಸಿದ್ದಪ್ಪ, ಮಹೋತ್ಸವ ಸಮಿತಿ ಅಧ್ಯಕ್ಷ ಶಂಕರ್ ಖಟಾವ್ಕರ್, ನಗರದ ಗಣ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ