ಕುಟುಂಬದ ಜಾತ್ರೆಯಂತೆ ಇತ್ತು ನಾಡ ಹಬ್ಬ ದಸರಾ
Team Udayavani, Oct 21, 2018, 6:00 AM IST
ಮೈಸೂರು: ಈ ಬಾರಿಯ ದಸರಾ ಅಪ್ಪ, ಮಕ್ಕಳು,ಹೆಂಡತಿ,ಮೊಮ್ಮಕ್ಕಳು ಪಾಲ್ಗೊಳ್ಳುವ ಜಾತ್ರೆಯಂತಿತ್ತು ಎಂದು ಕಾಂಗ್ರೆಸ್
ಶಾಸಕ ತನ್ವೀರ್ ಸೇಠ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರ ವಿರುದ್ಧ
ಹರಿಹಾಯ್ದರು. ದಸರಾ ನಾಡಹಬ್ಬವಾಗಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗದುಕೊಂಡು ಆಚರಿಸಬೇಕಿತ್ತು. ಹೀಗಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರು ದಸರಾ ತಮ್ಮ ಸ್ವತ್ತು, ತಮ್ಮ ಮನೆಯ ಕಾರ್ಯಕ್ರಮ ಎಂಬ ರೀತಿಯಲ್ಲಿ ವರ್ತಿಸಿದರು. ಹೀಗಾಗಿ, ಇದು ನಾಡಹಬ್ಬವಾಗುವ ಬದಲು ಅಪ್ಪ,ಮಕ್ಕಳು, ಹೆಂಡತಿ, ಮೊಮ್ಮಕ್ಕಳು ಪಾಲ್ಗೊಳ್ಳುವ ಜಾತ್ರೆಯಾಯಿತು. ರಾಜ್ಯದಲ್ಲಿ ಅಧಿಕಾರ ನಡೆಸುವಲ್ಲಿ ನಾವು ಒಂದಾಗಿದ್ದರೂ ಅದಕ್ಕೆ ಧಕ್ಕೆ ಬಾರದಂತೆ ಅವ್ಯವಸ್ಥೆಗಳ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಕಿಡಿ ಕಾರಿದರು.
ಜಿಲ್ಲಾಡಳಿತ ಕೂಡಾ ಜಿಲ್ಲಾ ಉಸ್ತುವಾರಿ ಸಚಿವರ ಕೈಗೊಂಬೆಯಂತೆ ವರ್ತಿಸಿತು. ದಸರಾ ವೇಳೆ ಉಂಟಾದ ಶಿಷ್ಠಾಚಾರ ಉಲ್ಲಂಘನೆ, ಪಾಸ್ಗಳ ದುರ್ಬಳಕೆ ಮತ್ತು ಪೊಲೀಸರ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ವರ್ತನೆ ಖಂಡಿಸಿ ಸ್ಥಳೀಯ ಕಾಂಗ್ರೆಸ್ ಪ್ರತಿನಿಧಿಗಳು ಈ ಬಾರಿ ದಸರಾದ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ