ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ
Team Udayavani, Oct 21, 2018, 4:54 PM IST
ಯಾದಗಿರಿ: ಧಾರ್ಮಿಕ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ದೊರೆಯಲು ಸಾಧ್ಯ ಎಂದು ಹೆಡಗಿಮದ್ರದ ಶಾಂತ ಶಿವಯೋಗಿ ಮಠದ ಪೂಜ್ಯ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.
ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ನವರಾತ್ರಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬಂಗಾರಮ್ಮ ದೇವಿ ಪುರಾಣ ಮಂಗಳ ಮತ್ತು ಉಡಿ ತುಂಬುವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಮಾನವರು ಭೂಮಿ ಮೇಲೆ ಸಂಪಾದಿಸಿದ್ದು, ಯಾವುದೂ ಶಾಶ್ವತವಲ್ಲ. ಇದನ್ನು ಅರಿತು ಜೀವನದಲ್ಲಿ ಕೆಲ ಹೊತ್ತು ಧಾರ್ಮಿಕ ಕಾರ್ಯಗಳಿಗಾಗಿ ಮೀಸಲಿರಿಸಬೇಕು ಎಂದು ಹೇಳಿದರು.
ಆಧುನಿಕ ದಿನಗಳ ಜೀವನ ಶೈಲಿಯಲ್ಲಿ ಭಗವಂತನ ನಾಮ ಸ್ಮರಣೆ ಮರೆಯಬಾರದು. ಪ್ರತಿ ಕಣ ಕಣದಲ್ಲಿಯೂ ಭಗವಂತನಿದ್ದಾನೆ. ಗ್ರಾಮಸ್ಥರೆಲ್ಲರೂ ಸೇರಿ ಬಂಗಾರಮ್ಮ ದೇವಿ ಪುರಾಣ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಷಯ.
ಇಂದಿನ ಪೀಳಿಗೆಗೆ ಧಾರ್ಮಿಕ ವಿಚಾರಗಳು ತಲೆ ಹೊಕ್ಕುವ ರೀತಿಯಲ್ಲಿ ತಿಳಿಸುವ ಅವಶ್ಯಕತೆ ಇದೆ. ನವರಾತ್ರಿ ಆಚರಣೆ ವಿಶೇಷತೆಗಳನ್ನು ವಿವರಿಸಿದರು. ಶಾಸಕ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಆಚರಣೆಗಳಿಂದಲೇ ನಮ್ಮ ದೇಶದ ಸಂಸ್ಕೃತಿ ಅಚ್ಚಳಿಯದೇ ತನ್ನತನವನ್ನು ಉಳಿಸಿಕೊಂಡಿದ್ದು, ಬೆಳೆಯುತ್ತಿರುವ ನಗರ ಪ್ರದೇಶಗಳ ಜನರಲ್ಲಿ ಭಯ ಭಕ್ತಿ ಕುಂಠಿತಗೊಳ್ಳುತ್ತಿರುವುದನ್ನು ಕಾಣುತ್ತಿದ್ದೇವೆ. ಆದರೇ ಹಳ್ಳಿಗಳಿಂದಲೇ ನಮ್ಮ ಸಂಸ್ಕಾರ ಉಳಿಯಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ವೀರಭದ್ರಯ್ಯ ಹಿರೇಮಠ, ಶರಣಗೌಡ, ಬಂಗಾರಪ್ಪ ಜೀವನ್ನೋರ, ಚಂದಪ್ಪ, ಮಹಾದೇವಪ್ಪ ಜಲ್ಲಪ್ಪನೋರ, ಸಿದ್ದಲಿಂಗಪ್ಪ, ಬಾಬುಗೌಡ ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಗ್ರಾಮದ ಮುತ್ತೆದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು