24 ಮಂದಿ  ಪ್ರಾಣ ಉಳಿಸಿ ಹುತಾತ್ಮನಾದ ಗೋಕಾಕ ಯೋಧ


Team Udayavani, Oct 22, 2018, 6:50 AM IST

warrior.jpg

ಬೆಳಗಾವಿ/ಗೋಕಾಕ: ಮಣಿಪುರನ ಇಂಫಾಲ್‌ ನಗರದ ಮಾರುಕಟ್ಟೆಯಲ್ಲಿ ಹೊರಟಿದ್ದ ವಾಹನದಲ್ಲಿ ನಕ್ಸಲರು ಇಟ್ಟ ಗ್ರೆನೈಡ್‌ ಸ್ಫೋಟ ತಪ್ಪಿಸಿ 24 ಜನರ ಜೀವ ಉಳಿಸಿದ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಯೋಧ ಹುತಾತ್ಮನಾಗಿದ್ದಾನೆ.

ಗೋಕಾಕನ ಅಲೆಮಾರಿ ಸಮುದಾಯದ ಸಿಆರ್‌ಪಿಎಫ್‌ ಯೋಧ ಉಮೇಶ ಮಹಾನಿಂಗ ಹೆಳವರ(25) ಹುತಾತ್ಮ ಯೋಧ. ಮಣಿಪುರದ ಸಿಆರ್‌ಪಿಎಫ್‌ 143 ಬಟಾಲಿನ್‌ನಲ್ಲಿ 6 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಉಮೇಶ ಶನಿವಾರವಷ್ಟೇ ತವರಿಗೆ ಆಗಮಿಸುವ ಸಿದ್ಧತೆ ನಡೆಸಿದ್ದ. ಆದರೆ ವಿಧಿಯಾಟದಿಂದಾಗಿ ಹುತಾತ್ಮನಾಗಿ ಮರಳುತ್ತಿರುವುದು ದುರ್ದೈವವೇ ಸರಿ.

ಗೋಕಾಕ ಅಂಬೇಡ್ಕರ್‌ ನಗರದ ನಿವಾಸಿ ಉಮೇಶ ಅವರ ತಂದೆ ಮಹಾನಿಂಗ ಕೆಎಸ್‌ಆರ್‌ಟಿಸಿಯಲ್ಲಿ ಚಾಲಕರಾಗಿದ್ದಾರೆ. ಮಗ ಸೈನ್ಯ ಸೇರಿ ದೇಶ ಸೇವೆ ಮಾಡುವುದನ್ನು ತಂದೆ ಮಹಾನಿಂಗ ಅಭಿಮಾನದಿಂದ ಹೇಳಿಕೊಳ್ಳುತ್ತಿದ್ದರು. ನೌಕರಿ ಸೇರಿದ ಬಳಿಕ ಗೋಕಾಕದಲ್ಲಿ ಹೊಸ ಮನೆ ನಿರ್ಮಾಣ ಮಾಡಲಾಗಿದೆ. ಗೃಹಪ್ರವೇಶ ಇದ್ದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ರೈಲು ಮೂಲಕ ತವರಿಗೆ ಆಗಮಿಸುವ ಸಿದ್ಧತೆ ನಡೆಸಿದ್ದ.

1993ರಲ್ಲಿ ಅಲೆಮಾರಿ ಸಮುದಾಯದಲ್ಲಿ ಜನಿಸಿದ ಉಮೇಶ ಸರ್ಕಾರಿ ಪಿಯು ಕಾಲೇಜಿನಲ್ಲಿ ಶಿಕ್ಷಣ ಮುಗಿಸಿದ್ದು, 2012ರಲ್ಲಿ ಸಿಆರ್‌ಪಿಎಫ್‌ ಯೋಧನಾಗಿ ಸೈನ್ಯಕ್ಕೆ ಸೇರಿದ್ದ. ಇಬ್ಬರು ಸಹೋದರರು ಪದವಿ ಮುಗಿಸಿದ್ದು, ನೌಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಉಮೇಶನೇ ಮನೆಯ ಹಿರಿಯ ಮಗ. ಮಗನನ್ನು ಕಳೆದುಕೊಂಡಿರುವ ಸುದ್ದಿ ಕುಟುಂಬಕ್ಕೆ ಬರ ಸಿಡಿಲಿನಂತೆ ಅಪ್ಪಳಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಯೋಧನ ಪಾರ್ಥಿವ ಶರೀರ ಗೋಕಾಕ ನಗರಕ್ಕೆ ಸೋಮವಾರ ಬೆಳಗ್ಗೆ ಆಗಮಿಸಲಿದ್ದು, ವಾಲ್ಮೀಕಿ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ಅಂತ್ಯಕ್ರಿಯೆ ನಗರದಲ್ಲಿ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಯೋಧನ ಸಾವಿನ ಸುದ್ದಿ ತಿಳಿದು ತಹಶೀಲ್ದಾರ್‌ ಜಿ.ಎಸ್‌. ಮಳಗಿ, ಪೌರಾಯುಕ್ತ ಎಂ.ಎಚ್‌. ಅತ್ತಾರ, ನಗರಸಭೆ ಸದಸ್ಯೆ ವೆಂಕವ್ವ ಶಾಸ್ತ್ರಿಗೊಲ್ಲರ ಸೇರಿದಂತೆ ಅನೇಕರು ಯೋಧನ ಮನೆಗೆ ಭೇಟಿ ನೀಡಿ ಸ್ವಾಂತನ ಹೇಳಿದ್ದಾರೆ.
ಸರ್ಕಾರಿ ಜಾಗದಲ್ಲಿಯೇ ಅಂತ್ಯಕ್ರಿಯೆಗೆ ಆಗ್ರಹ: ಯೋಧನ ಅಂತ್ಯಕ್ರಿಯೆ ಸರ್ಕಾರಿ ಜಾಗದಲ್ಲಿಯೇ ಮಾಡಬೇಕೆಂದು ಕುಟುಂಬಸ್ಥರು ಹಾಗೂ ನಗರದ ಹಲವು ಸಂಘಟನೆಗಳು ಆಗ್ರಹಿಸಿವೆ. ಆದರೆ ಇದನ್ನು ನಿರಾಕರಿಸಿರುವ ತಾಲೂಕಾಡಳಿತ, ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಆಗುವುದಿಲ್ಲ. ಸದ್ಯ ಖಾಸಗಿ ಜಾಗದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. 

ನಂತರ ತಾವು ಹೇಳಿದ ಜಾಗದಲ್ಲಿ ಯೋಧನ ಪ್ರತಿಮೆ ಸ್ಥಾಪಿಸಿ ಗೌರವ ಸಲ್ಲಿಸುವ ಕೆಲಸ ಮಾಡಲಾಗುವುದು. ಇದಕ್ಕೆ ಎಲ್ಲರೂ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ತಹಶೀಲ್ದಾರ್‌ ಮಾತಿಗೆ ಒಪ್ಪದ ಸಂಘಟನೆಗಳು ರಾತ್ರಿವರೆಗೂ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದವು. ಆದರೆ ಕೆಲವು ಕಿಡಿಗೇಡಿಗಳು ಮಿನಿವಿಧಾನಸೌಧ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಕಿಟಕಿ ಗಾಜು ಒಡೆದಿದ್ದು, ಜತೆಗೆ ಓರ್ವ ಪತ್ರಕರ್ತನ ಕಾಲಿಗೂ ಕಲ್ಲೇಟು ಬಿದ್ದಿದೆ.

ಸದಾ ಹಸನ್ಮುಖೀಯಾಗಿದ್ದ ನನ್ನ ಗೆಳೆಯ ಎಲ್ಲರೊಂದಿಗೂ ಬೆರೆಯುತ್ತಿದ್ದ. ಆತನ ಸಾವಿನ ಸುದ್ದಿ ನಮಗೆ ನಂಬಲಾಗುತ್ತಿಲ್ಲ, ಕಳೆದ ತಿಂಗಳು ರಜೆ ಮೇಲೆ ಬಂದಿದ್ದ. ಅವನ ಜನ್ಮದಿನವನ್ನು ಗೆಳೆಯರೆಲ್ಲರೂ ಸೇರಿ ಆಚರಿಸಿ ಸಂಭ್ರಮಿಸಿದ್ದೇವು. ಗೆಳೆಯ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ್ದು ಆತ ಅಜರಾಮವಾಗಲಿ ಎನ್ನುತ್ತಾರೆ ಯೋಧ ಉಮೇಶನ ಸ್ನೇಹಿತ ಸಿದ್ಧಾರೂಢ ಖಾನಪ್ಪನವರ.

– ಭೈರೋಬಾ ಕಾಂಬಳೆ/ಮಲ್ಲಪ್ಪ ದಾಸಪ್ಪಗೋಳ

ಟಾಪ್ ನ್ಯೂಸ್

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

5-health

Female health: ಸ್ತ್ರೀ ದೇಹ ಮತ್ತು ಆರೋಗ್ಯ

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

41

MLC Election: ಮೇಲ್ಮನೆಯಲ್ಲಿ ಏಳು ಸ್ಥಾನಗಳು ಕಾಂಗ್ರೆಸ್‌ನಲ್ಲಿ 70 ಆಕಾಂಕ್ಷಿಗಳು

Ultrasound room: ಅಲ್ಟ್ರಾಸೌಂಡ್‌ ಕೊಠಡಿಗೆ ಗರ್ಭಿಣಿ ಹೊರತು ಅನ್ಯರಿಗೆ ಪ್ರವೇಶವಿಲ್ಲ

Ultrasound room: ಅಲ್ಟ್ರಾಸೌಂಡ್‌ ಕೊಠಡಿಗೆ ಗರ್ಭಿಣಿ ಹೊರತು ಅನ್ಯರಿಗೆ ಪ್ರವೇಶವಿಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.