ಲಭಿಸದ ಸೀಮೆಎಣ್ಣೆ: ನಾಡದೋಣಿ ಮೀನುಗಾರಿಕೆ ಸ್ಥಗಿತ


Team Udayavani, Oct 22, 2018, 11:52 AM IST

1410kdpp7.jpg

ಕುಂದಾಪುರ: ನಾಡದೋಣಿ ಮೀನುಗಾರರಿಗೆ ಸರಕಾರದಿಂದ ಸಿಗಬೇಕಿದ್ದ ಸಬ್ಸಿಡಿ ದರದ ಸೀಮೆ ಎಣ್ಣೆ ಇನ್ನೂ ಕೂಡ ಸಿಕ್ಕಿಲ್ಲ. ಇದರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಸುಮಾರು 8,322 ನಾಡದೋಣಿಗಳ 27,118 ಮಂದಿ ಮೀನುಗಾರರು ಸಂಕಷ್ಟದಲ್ಲಿದ್ದಾರೆ. 

ಮತ್ಸಕ್ಷಾಮ, ಹವಾಮಾನ ವೈಪರೀತ್ಯದಿಂದ ಮೀನುಗಾರಿಕೆಗೆ ದೊಡ್ಡ ಹೊಡೆತ ಬಿದ್ದಿದ್ದು, ಕರಾವಳಿಯ ನಾಡದೋಣಿ ಮೀನುಗಾರರು ಈಗ ಸಬ್ಸಿಡಿ ದರದಲ್ಲಿ ಸರಕಾರದಿಂದ ಸಿಗಬೇಕಾದ ಸೀಮೆಎಣ್ಣೆ ಕೂಡದ ಸಿಗದೆ ಸಮಸ್ಯೆ ಎದುರಿಸುತ್ತಿದ್ದಾರೆ. ಸೀಮೆಎಣ್ಣೆಯಿಲ್ಲದೆ ಸ್ಥಗಿತ ನಾಡದೋಣಿ ಮೀರುಗಾರರು ಇಷ್ಟು ದಿನ ಉಳಿದಿದ್ದ ಹಾಗೂ ಸಂಗ್ರಹಿಸಿದ್ದ ಸೀಮೆಎಣ್ಣೆಯನ್ನು ಬಳಸಿ ಮೀನುಗಾರಿಕೆಗೆ ನಡೆಸಿದ್ದು, ಈಗ ಅದೂ ಖಾಲಿಯಾಗುತ್ತಿದೆ. ಈ ಕಾರಣ ಕೆಲವು ನಾಡದೋಣಿಗಳು ಮೀನುಗಾರಿಕೆಗೆ ತೆರಳದೇ ಬಂದರಿನಲ್ಲೇ ಲಂಗರು ಹಾಕಿವೆ. 

ತಲಾ 300 ಲೀಟರ್‌ ಅಗತ್ಯ
ಸರಕಾರ ಒಂದು ನಾಡದೋಣಿ ಪರ್ಮಿಟ್‌ಗೆ ಪ್ರತಿ ತಿಂಗಳಿಗೆ 300 ಲೀಟರ್‌ ಸೀಮೆಎಣ್ಣೆ ನೀಡಬೇಕು. ಆದರೆ ಈಗ ಉಡುಪಿ ಜಿಲ್ಲೆಯಲ್ಲಿರುವ 4,332 ನಾಡ ದೋಣಿಗಳ ಪೈಕಿ ಕೇವಲ 2,600 ದೋಣಿಗಳಿಗೆ ಮಾತ್ರ 300 ಲೀಟರ್‌ ನೀಡುತ್ತಿದ್ದು, ಬಾಕಿ ಉಳಿದಿದ್ದಕ್ಕೆ 200 ಲೀಟರ್‌ ಅಷ್ಟೇ ಕೊಡಲಾಗುತ್ತಿದೆ. ಪ್ರತಿ ತಿಂಗಳಿಗೆ 1 ಪರ್ಮಿಟ್‌ಗೆ ಕನಿಷ್ಠ 300 ಲೀಟರ್‌ ಆದರೂ ನೀಡಲಿ ಎನ್ನುವುದು ಮೀನುಗಾರರ ಆಗ್ರಹವಾಗಿದೆ. 

27,118 ಮೀನುಗಾರರು 
ಮಂಗಳೂರಿನಿಂದ ಕಾರವಾರದವರೆಗಿನ ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಒಟ್ಟು 27,118 ಮಂದಿ ನಾಡದೋಣಿ ಮೀನುಗಾರರಿದ್ದಾರೆ. ಈ ಪೈಕಿ ಉಡುಪಿಯಲ್ಲಿ ಅತೀ ಹೆಚ್ಚು ಅಂದರೆ 4,332 ನಾಡದೋಣಿಗಳ 15,148 ಮೀನುಗಾರರಿದ್ದಾರೆ. ದಕ್ಷಿಣ ಕನ್ನಡದ 1,416 ದೋಣಿಗಳಲ್ಲಿ ಸುಮಾರು 4,248 ಮೀನುಗಾರರು ಹಾಗೂ ಉತ್ತರ ಕನ್ನಡದ 2,574 ದೋಣಿಗಳಲ್ಲಿ ಸುಮಾರು 7,722 ಮೀನುಗಾರರು ನಾಡದೋಣಿ ಮೀನುಗಾರಿಕೆಯನ್ನು ಅವಲಂಬಿಸಿದ್ದಾರೆ.

ಈಗ ದುಡ್ಡು ಕೊಟ್ಟರೂ ಸೀಮೆಎಣ್ಣೆ ಎಲ್ಲಿಯೂ ಸಿಗುತ್ತಿಲ್ಲ. ಈಗ ಸಿಗುತ್ತಿರುವ ಮೀನಿನ ಪ್ರಮಾಣ ನೋಡಿದರೆ ಪೆಟ್ರೋಲ್‌ ದುಬಾರಿಯಾಗಿದೆ. ಸಾಮಾನ್ಯವಾಗಿ ಸೆಪ್ಟಂಬರ್‌ ತಿಂಗಳಲ್ಲಿ ಕೊಡಬೇಕಿತ್ತು. ಆದರೆ ಅದಕ್ಕೆ ಬಜೆಟ್‌ನಲ್ಲಿ ಅನುದಾನವೇ ಇಟ್ಟಿಲ್ಲ. ಅದಲ್ಲದೆ ಇದಕ್ಕಾಗಿಯೇ ಮೀನುಗಾರಿಕಾ ಇಲಾಖೆಯು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 6 ಕೋ.ರೂ. ಅನುದಾನ ಬಿಡುಗಡೆ ಮಾಡಬೇಕು. ಅದನ್ನು ಇನ್ನೂ ನೀಡಿಲ್ಲ. ಇದಕ್ಕಾಗಿ ಸರಕಾರಕ್ಕೆ ಒತ್ತಡ ತರಲಾಗುವುದು. ಅಕ್ಟೋಬರ್‌ ತಿಂಗಳದ್ದು ಇನ್ನೊಂದು ವಾರದಲ್ಲಿ ಸಿಗುವ ನಿರೀಕ್ಷೆಯಿದೆ.
ಮಂಜು ಬಿಲ್ಲವ,  ಅಧ್ಯಕ್ಷರು ನಾಡದೋಣಿ ಮೀನುಗಾರರ ಸಂಘ

ನಾಡದೋಣಿಗಳಿಗೆ ಸೀಮೆಎಣ್ಣೆ ನೀಡಬೇಕು ಎಂದು ಸರಕಾರದಿಂದ ಆದೇಶ ಬಂದಿದೆ. ಈ ಸಂಬಂಧ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೂ ಸರಕಾರದಿಂದ ನಿರ್ದೇಶನ ಬಂದಿದೆ. ಅವರು ಸೀಮೆಎಣ್ಣೆ ನಮಗೆ ನೀಡಬೇಕಿದ್ದು, ಆ ಬಳಿಕ ಅಂದರೆ, ಇನ್ನೊಂದು ವಾರದಲ್ಲಿ ಮೀನುಗಾರರಿಗೆ ಸೀಮೆಎಣ್ಣೆ ಸಿಗುವ ವ್ಯವಸ್ಥೆ ಮಾಡಲಾಗುವುದು. 
ಪಾರ್ಶ್ವನಾಥ ಹಾಗೂ ಚಿಕ್ಕವೀರ ನಾಯ್ಕ‌, ಮೀನುಗಾರಿಕಾ ಇಲಾಖಾ ನಿರ್ದೇಶಕರು

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.