ಪೊಲೀಸ್ ಸಿಬ್ಬಂದಿಗೆ ಅಗತ್ಯ ಸೌಕರ್ಯ ಕಲ್ಪಿಸಿ
Team Udayavani, Oct 22, 2018, 12:24 PM IST
ಬೀದರ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸ್ ಸಿಬ್ಬಂದಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶೆ ಮನಗೂಳಿ ಪ್ರೇಮಾವತಿ ಹೇಳಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ರವಿವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದೇಶ ರಕ್ಷಣೆಯಲ್ಲಿ ಸೈನಿಕರು ಮತ್ತು ಪೊಲೀಸರ ಪಾತ್ರ ಹೆಚ್ಚಿರುತ್ತದೆ. ಸೈನಿಕರು ಗಡಿಯಲ್ಲಿ ಹೋರಾಡಿದರೆ, ಪೊಲೀಸರು ಸಮಾಜದಲ್ಲಿರುವ ದುಷ್ಟಶಕ್ತಿಗಳ ವಿರುದ್ಧ ಹೋರಾಟ ನಡೆಸುತ್ತಾರೆ. ದೇಶ ಹಾಗೂ ಸಾರ್ವಜನಿಕರ ರಕ್ಷಣೆಗಾಗಿ ಹೋರಾಡುವ ಸಂದರ್ಭದಲ್ಲಿ ವೀರಮರಣ ಹೊಂದಿರುವ ಪೊಲೀಸರನ್ನು ಎಲ್ಲರೂ ಸ್ಮರಿಸಬೇಕಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಮಾತನಾಡಿ, ದೇಶದಾದ್ಯಂತ ಹುತಾತ್ಮರಾದ ಪೊಲೀಸರ ಪಟ್ಟಿ ವಾಚಿಸಿ, ಒಂದು ವರ್ಷದ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್ ದಳದ 414 ಪೊಲೀಸರು ಸೇವೆಯಲ್ಲಿ ವೀರಮರಣ ಹೊಂದಿದ್ದಾರೆ. ಅದರಲ್ಲಿ ರಾಜ್ಯದ 15 ಜನರು ಸೇರಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು, ಸಾರ್ವಜನಿಕರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದರು. ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಕವಾಯತು ತಂಡದಿಂದ ಮೂರು ಸುತ್ತು ಗುಂಡು ಹಾರಿಸಲಾಯಿತು. ಬೀದರ ಏರ್ ಫೋರ್ಸ್ ಸ್ಟೇಷನ್ನ ವಿಂಗ್ ಕಮಾಂಡರ್ ಎಂ.ಕೆ.ಮಿಶ್ರಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಶಿವಶರಣಪ್ಪ ವಾಲಿ, ಮುಖಂಡರಾದ ಗುರುನಾಥ ಕೊಳ್ಳೂರ್, ಬಾಬು ವಾಲಿ, ಶಾಹೀನ್ ಪಟೇಲ್, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ