ಹುತಾತ್ಮ ಯೋಧರ ಸೌಲಭ್ಯ ಪೊಲೀಸ್‌ಗೂ ಸಿಗಲಿ


Team Udayavani, Oct 22, 2018, 3:06 PM IST

dvg-1.jpg

ದಾವಣಗೆರೆ: ಕರ್ತವ್ಯಪಾಲನೆ ಸಂದರ್ಭದಲ್ಲಿ ಮರಣವನ್ನಪ್ಪುವಂತಹ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹುತಾತ್ಮ ಸೈನಿಕರಿಗೆ ದೊರೆಯುವಂತೆ ಎಲ್ಲ ರೀತಿಯ ಸೌಲಭ್ಯ ದೊರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಆಶಿಸಿದ್ದಾರೆ.

ಭಾನುವಾರ ಜಿಲ್ಲಾ ಪೊಲೀಸ್‌ ಕಚೇರಿ ಆವರಣದಲ್ಲಿ ಪೊಲೀಸ್‌ ಹುತಾತ್ಮರ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ರಕ್ಷಣೆ ಇತರೆ ಸಂದರ್ಭದಲ್ಲಿ ಹುತಾತ್ಮರಾಗುವಂತಹ ಸೈನಿಕರ ಕುಟುಂಬಕ್ಕೆ ಮನೆ, ಆರೋಗ್ಯ, ಮಕ್ಕಳ ವಿದ್ಯಾಭ್ಯಾಸಕ್ಕೆ ಸೌಲಭ್ಯ ನೀಡಲಾಗುತ್ತದೆ. ಅದೇ ಮಾದರಿಯ ಸೌಲಭ್ಯ ದೇಶದ ಒಳಗಿನ ಸೈನಿಕರಾದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಇಲಾಖೆಯ ಹಿರಿಯ
ಅಧಿಕಾರಿಗಳು ಗಮನ ನೀಡಬೇಕು ಎಂದರು.

ನಾಗರಿಕ ಸಮಾಜದ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೆರವು ನೀಡುವವರು ಇದ್ದಾರೆ. ಸರ್ಕಾರ, ಪೊಲೀಸ್‌ ಜೊತೆಗೆ ಇತರೆ ಇಲಾಖೆ, ಸಂಘ-ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ದಾನಿಗಳಿಂದ ದೇಣಿಗೆ ಸಂಗ್ರಹಿಸಿ, ಅದನ್ನು ಕರ್ತವ್ಯಪಾಲನೆ ಸಂದರ್ಭದಲ್ಲಿ ಹುತಾತ್ಮರಾಗುವಂತಹ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬಕ್ಕೆ ಬಳಕೆ ಮಾಡುವಂತಹ ಸಾಂಸ್ಥಿಕ ಜವಾಬ್ದಾರಿ ಸಂಸ್ಥೆ ಪ್ರಾರಂಭಿಸುವತ್ತ ಸಂಬಂಧಿತರು ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಕಳೆದ ಸೆ.1 ರಿಂದ ಆ. 31ರ ವರೆಗೆ ರಾಜ್ಯದಲ್ಲಿ 15 ಜನ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಒಳಗೊಂಡಂತೆ ದೇಶದ್ಯಾಂತ 414 ಜನರು ಹುತಾತ್ಮರಾಗಿದ್ದಾರೆ. ಪೊಲೀಸ್‌ ಇಲಾಖೆ ಜೊತೆಗೆ ಸಿಆರ್‌ಪಿಎಫ್‌, ಬಿಎಸ್‌ಎಫ್‌ ಇತರೆ ರಕ್ಷಣಾ ಪಡೆಗಳ ಅಧಿಕಾರಿಗಳು, ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸಾರ್ವಜನಿಕರು, ಆಸ್ತಿ ರಕ್ಷಣೆಯ ಕರ್ತವ್ಯದಲ್ಲಿ ಹುತಾತ್ಮರಾದವರನ್ನು ಪ್ರತಿಯೊಬ್ಬರು ಸ್ಮರಿಸುವ ಮೂಲಕ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.

ಕರ್ನಾಟಕ ಹೊರತುಪಡಿಸಿದಂತೆ ಇತರೆ ರಾಜ್ಯಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಇಲಾಖೆ ಜೊತೆಗೆ ಸಿಆರ್‌ಪಿಎಫ್‌, ಬಿಎಸ್‌ ಎಫ್‌ ಇತರೆ ರಕ್ಷಣಾ ಪಡೆಗಳ ಅಧಿಕಾರಿಗಳು, ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕರ್ನಾಟಕಕ್ಕೆ ಹೋಲಿಕೆ ಮಾಡಿದಲ್ಲಿ ಇತರೆ ರಾಜ್ಯಗಳಲ್ಲಿ ಗಲಭೆ, ಮಾವೋವಾದ, ಭಯೋತ್ಪಾದಕ ಚಟುವಟಿಕೆಗಳ ಸಂಖ್ಯೆ ಹೆಚ್ಚು. ಕರ್ನಾಟಕದಲ್ಲಿ ಶಾಂತಿಯುತ ವಾತಾವರಣ ಇದೆ. ಅದಾಗ್ಯೂ ನಮ್ಮಲ್ಲಿ 15 ಅಧಿಕಾರಿಗಳು ಮತ್ತು ಸಿಬ್ಬಂದಿ ಹುತಾತ್ಮರಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿದ್ದ ಪಿಎಸ್‌ಐ ಒಬ್ಬರು ಸಾವನ್ನಪ್ಪಿದ್ದರು ಎಂದು ಸ್ಮರಿಸಿದರು.

ಯಾವುದೇ ರೀತಿಯ ಸಮಾಜಘಾತುಕ, ವಿಧ್ವಂಸಕ ಕೃತ್ಯಗಳು ನಡೆದ ಕ್ಷಣಗಳಲ್ಲಿ ರಕ್ಷಣಾ ಕಾರ್ಯಕ್ಕೆ ಬರುವರು ದೇಶದ ಒಳಗಿನ ಸೈನಿಕರಾದ ಪೊಲೀಸರು. ಕೆಲವೊಮ್ಮೆ ಘಟನೆಗೆ ಪ್ರತಿಕ್ರಿಯಿಸುವುದಕ್ಕೂ ಸಮಯವೇ ಇರುವುದಿಲ್ಲ. ಆದರೂ, ಸಾರ್ವಜನಿಕರ ರಕ್ಷಣೆಗೆ ಧಾವಿಸಬೇಕಾಗುತ್ತದೆ. ಮುಂಬೈ ದಾಳಿಯ ಸಂದರ್ಭದಲ್ಲಿ ಪೊಲೀಸ್‌ ಅಧಿಕಾರಿ ಹೇಮಂತ್‌ ಕರ್ಕರೆಗೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ ಎಂಬುದೇ ಗೊತ್ತಾಗದ ಕಾರಣಕ್ಕೆ ಸರ್ವಿಸ್‌ ಪಿಸ್ತೂಲ್‌ ನೊಂದಿಗೆ ರಕ್ಷಣಾ ಕಾರ್ಯಕ್ಕೆ ಮುಂದಾಗಿ, ಕೊನೆಗೆ ಹುತಾತ್ಮರಾದರು ಎಂದು ತಿಳಿಸಿದರು.

ಉತ್ತರ ಭಾರತದಲ್ಲಿ ದೇವಮಾನವರೊಬ್ಬರ ಬಂಧನದ ಸಂದರ್ಭದಲ್ಲಿ ಏಕಾಏಕಿ ಗಲಭೆ ಉಂಟಾಯಿತು. ಅದನ್ನು ನಿಯಂತ್ರಿಸುವ ವೇಳೆ ಅನೇಕರು ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಬಲಿಯಾಗಬೇಕಾಯಿತು. ಹಿಂದೆ ಕಾನೂನು ಮತ್ತು ಸುವ್ಯವಸ್ಥೆಗೆ ಮಾತ್ರವೇ ಇದ್ದ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಈಗ ಕಾನೂನು, ಸುವ್ಯವಸ್ಥೆ ಜೊತೆಗೆ ಪ್ರಕೃತಿ ವಿಕೋಪ ಇತರೆ ಸಂದರ್ಭದಲ್ಲೂ ಕರ್ತವ್ಯ ನಿಭಾಯಿಸಬೇಕಾಗುತ್ತದೆ. ಇಂತಹ ಘಟನೆಗಳ ಅವಲೋಕಿಸಿದರೆ ಕಾಲ ಬದಲಾವಣೆಗೆ ತಕ್ಕಂತೆ ಪೊಲೀಸ್‌ ಇಲಾಖೆ ಎದುರಿಸಬೇಕಾದ ಸವಾಲುಗಳು ಹೆಚ್ಚಾಗುತ್ತಿವೆ ಎಂಬುದು ಗೊತ್ತಾಗುತ್ತದೆ. ಅಂತಹ ಸವಾಲುಗಳನ್ನು ಪೊಲೀಸ್‌ ಇಲಾಖೆ ಅತಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಮಾತನಾಡಿ, 1959 ಅ. 21 ರಂದು ಲಡಾಖ್‌ನ ಆಸ್ಟ್ರಿಂಗ್‌ ಪ್ರದೇಶದಲ್ಲಿ ಸಿಆರ್‌ಪಿಎಫ್‌ ಡಿಎಸ್ಪಿ ಕರಣ್‌ಸಿಂಗ್‌ ಮತ್ತವರ ತಂಡ ಗಸ್ತುನಲ್ಲಿದ್ದಾಗ ಚೀನಾ ಸೈನಿಕರು ಎಕೆ-47 ಮುಂತಾದ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ಮಾಡಿದರು. ಸಾಮಾನ್ಯ ಬಂದೂಕುಗಳೊಂದಿಗೆ ಕರಣ್‌ಸಿಂಗ್‌ ಮತ್ತವರ ತಂಡ ಧೈರ್ಯ, ಸಾಹಸ, ವಿರೋಚಿತ ಹೋರಾಟ ನಡೆಸಿತು. ಆ ದಾಳಿಯಲ್ಲಿ 10 ಜನರು ವೀರಮರಣ ಹೊಂದಿದರು. 9 ಜನರನ್ನು ಚೀನಿ ಸೈನಿಕರು ಬಂಧಿಸಿದರು. ಕರ್ತವ್ಯಪಾಲನೆಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಯೋಧರ ಸ್ಮರಣೆಗಾಗಿ, ಪ್ರತಿ ವರ್ಷ ಅ. 21 ರಂದು ಪೊಲೀಸ್‌ ಹುತಾತ್ಮರ ದಿನಾಚರಣೆ ನಡೆಯುತ್ತಿದೆ ಎಂದರು.

ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಟಿ.ಎಸ್‌.ಉದೇಶ್‌ ಇತರರು ಇದ್ದರು. ನಾಗರಿಕರು, ಸ್ವಯಂ ಸೇವಾ ಸಂಸ್ಥೆ, ಸಂಘಗಳ ಪದಾಧಿಕಾರಿಗಳು, ಮಾಧ್ಯಮದವರು, ನಿವೃತ್ತರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುತ್ಛ ಸಮರ್ಪಿಸುವ ಮತ್ತು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯಿತು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.