ಕೆರೆಗೆ ಮಾರಕವಾದ ಬಳ್ಳಾರಿ ಜಾಲಿ!


Team Udayavani, Oct 22, 2018, 4:59 PM IST

cta-1.jpg

ಚಳ್ಳಕೆರೆ: ಕಳೆದ ಮೂರ್‍ನಾಲ್ಕು ದಿನಗಳಿಂದ ಹಿಂದೆ ಸುರಿದ ಮಳೆಯಿಂದ ತಾಲೂಕಿನ ಬಹುತೇಕ ಕೆರೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿದೆ. ಆದರೆ ಕೆರೆಗಳಲ್ಲಿ ಜಾಲಿ ಗಿಡಗಳು ತುಂಬಿ ಹೋಗಿದೆ. ಇದರಿಂದ ಕೆರೆ ಏರಿ ಒಡೆದು ನೀರು ಪೋಲಾಗುವ ಭೀತಿ ಎದುರಾಗಿದೆ.

ಮಳೆ ವೈಫಲ್ಯದಿಂದ ಕೆರೆಗಳ ಅಭಿವೃದ್ಧಿ ಬಗ್ಗೆ ಸಣ್ಣ ನೀರಾವರಿ ಇಲಾಖೆ ಅಷ್ಟೊಂದು ಗಮನ ನೀಡಿಲ್ಲ. ಸರ್ಕಾರ ಕೆರೆ ಸಂಜೀವಿನಿ ಯೋಜನೆಯಡಿ ಹಲವಾರು ಕೆರೆಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿದೆ. ಆದರೆ ಬಹುತೇಕ ಕೆರೆಗಳಲ್ಲಿ ದುರಸ್ತಿ ಕಾರ್ಯ ಕೈಗೊಳ್ಳದೇ ಇರುವುದರಿಂದ
ನೀರು ವ್ಯರ್ಥವಾಗುತ್ತಿದೆ. ಇದರಿಂದ ಕೆರೆ ಏರಿ ಒಡೆದುಹೋಗುವ ಅಪಾಯ ಸೃಷ್ಟಿಯಾಗಿದೆ. 

ಮಳೆಯಿಂದ ಕೆಲವು ಕೆರೆಗಳಲ್ಲಿ ನೀರಿದ್ದರೂ ಸೋರಿಕೆಯಿಂದಾಗಿ ವ್ಯರ್ಥವಾಗಿ ಹರಿಯುತ್ತಿದೆ. ಹತ್ತು ವರ್ಷಗಳಿಂದ ಬತ್ತಿ ಹೋಗಿದ್ದ ಚಳ್ಳಕೆರೆ ನಗರದ ಅಜ್ಜಯ್ಯನಗುಡಿ ಕೆರೆಯಲ್ಲೂ ನೀರು ಕಾಣಿಸಿಕೊಂಡಿದೆ. ಆದರೆ ಕೆರೆ ಏರಿಯಲ್ಲಿ ನೀರು ಸೋರಿಕೆಯಾಗುತ್ತಿರುವುದರಿಂದ ಜನರಲ್ಲಿ ಆತಂಕ ಮೂಡಿದೆ. ತಾಲೂಕಿನ ಬಹುತೇಕ ಕೆರೆಗಳಲ್ಲಿ ಇದೇ ಪರಿಸ್ಥಿತಿ ಇದೆ. ದೊಡ್ಡೇರಿ, ಎನ್‌. ಉಪ್ಪಾರಹಟ್ಟಿ, ರಾಣಿಕೆರೆ, ಚಿಕ್ಕಮಧುರೆ ಕೆರೆ, ನಗರಂಗೆರೆ ಕೆರೆ, ತಳಕು ಕೆರೆ, ಬೆಳೆಗೆರೆ ಕೆರೆ ಮುಂತಾದ ಕೆರೆಗಳಲ್ಲಿ ಜಾಲಿ ಗಿಡಗಳು ಮಿತಿ ಮೀರಿ ಬೆಳೆದಿವೆ.

ಗಿಡಗಳ ಬೇರು ಆಳವಾಗಿ ಬೇರೂರಿದ್ದು, ಅವುಗಳಿಂದ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ತುರ್ತಾಗಿ ಕೆರೆಗಳನ್ನು ದುರಸ್ತಿ ಮಾಡಿಸಿದಲ್ಲಿ ಜಾನುವಾರುಗಳಿಗೆ ಮತ್ತು ಕುಡಿಯುವ ನೀರಿನ ಸಮಸ್ಯೆ ಅಲ್ಪ ಪ್ರಮಾಣದಲ್ಲಾದರೂ ಬಗೆಹರಿಯಬಹುದು. ಸುಮಾರು ನಾಲ್ಕು ದಿನಗಳಿಂದ ನೀರು ಸೋರಿ ಹೋಗುತ್ತಿದ್ದರೂ ತಡೆಗಟ್ಟಲು ಇಲಾಖೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ಷೇಪಿಸಿದ್ದಾರೆ.

ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.  ಐತಿಹಾಸಿಕ ಕೆರೆಗಳನ್ನು ಉಳಿಸಲು ಕೆರೆ ಏರಿ ದುರಸ್ತಿಗೊಳಿಸಬೇಕು. ಕೆರೆಯ ಒಳ ಭಾಗದಲ್ಲಿ ಬೆಳೆದ ಜಾಲಿಯನ್ನು ತೆರವು ಮಾಡಬೇಕು. ಈ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ ಸಲ್ಲದು. ಕೆರೆಗಳ ಸಂರಕ್ಷಣೆಗೆ ಹೋರಾಟ ನಡೆಸಲು ನಾವು ಸಿದ್ಧರಿದ್ದೇವೆ. 
 ಮೀರಾಸಾಬಿಹಳ್ಳಿ ಮೋಹನ್‌, ಯುವ ಮುಖಂಡ.

ತಾಲೂಕಿನ ಹಲವಾರು ಕೆರೆಗಳಲ್ಲಿ ಮಿತಿ ಮೀರಿ ಬೆಳೆದ ಬಳ್ಳಾರಿ ಜಾಲಿಯಿಂದ ಮೀನುಗಾರರಿಗೆ ಮೀನು ಹಿಡಿಯಲಾಗುತ್ತಿಲ್ಲ, ಜಾನುವಾರುಗಳಿಗೂ ನೀರು ಕುಡಿಯಲು ಆಗುತ್ತಿಲ್ಲ. ಗ್ರಾಮಸ್ಥರು ಕೆರೆ ನೀರನ್ನು ಬಳಸಿಕೊಳ್ಳಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು.
 ಎನ್‌. ವೀರಣ್ಣ ಉಪ್ಪಾರಹಟ್ಟಿ, ರೈತ.

„ಕೆ.ಎಸ್‌. ರಾಘವೇಂದ್ರ

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.