ಮಳೆ ಭೀತಿ ಮಧ್ಯೆ ಚುರುಕುಗೊಂಡ ಭತ್ತದ ಕಟಾವು ಕಾರ್ಯ


Team Udayavani, Oct 23, 2018, 6:20 AM IST

1910tke2.jpg

ತೆಕ್ಕಟ್ಟೆ: ಭತ್ತದ ಪೈರು ಕಟಾವಿಗೆ ಸಿದ್ಧಗೊಂಡಿರುವ ಹಿನ್ನೆಲೆಯಲ್ಲಿ ಕುಂಭಾಸಿ, ಕೊರವಡಿ, ಕೊಮೆ, ತೆಕ್ಕಟ್ಟೆ ಸುತ್ತಮುತ್ತಲಿನ ಕೃಷಿಭೂಮಿಯಲ್ಲಿ ಯಂತ್ರದ ಸಹಾಯದಿಂದ ಕಟಾವು ಕಾರ್ಯ ಚುರುಕುಗೊಂಡಿದೆ.

ಮಳೆ ಭೀತಿ 
ಕೃಷಿ ಚಟುವಟಿಕೆಗೆ ಎದುರಾದ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ, ಅನಿರೀಕ್ಷಿತವಾಗಿ ಮಳೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರಾವಳಿಯ ಸಾಂಪ್ರದಾಯಿಕ ಕೃಷಿ ಕುಟುಂಬಿಕರು ಯಾಂತ್ರಿಕೃತ ಕೃಷಿ ಚಟುವಟಿಕೆಯೆಡೆಗೆ ಆಸಕ್ತಿ ತಳೆಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಬರದೇ ಇದ್ದಲ್ಲಿ ಕಟಾವು ಕಾರ್ಯ ಇನ್ನು 15 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಬಾಡಿಗೆ ದರ ಗೊಂದಲ
ಹೊರ ಜಿಲ್ಲೆಗಳಿಂದ ಬಂದಿರುವ ಯಾಂತ್ರಿಕ ಕಟಾವು ಯಂತ್ರಗಳು ಅಲ್ಲಲ್ಲಿ ಬೀಡು ಬಿಟ್ಟಿದ್ದು ಈ ನಡುವೆ ಮಧ್ಯವರ್ತಿಗಳ ಮೂಲಕ ಕೆಲವೊಂದು ಕಡೆಗಳಲ್ಲಿ ಯಂತ್ರಗಳ ಸದ್ದು ಶುರುವಾಗಿದೆ. ಆದರೆ ಭತ್ತದ ಕಟಾವಿಗೆ ಪ್ರತಿ ಗಂಟೆಯ ಬಾಡಿಗೆ ಒಂದೊಂದು ಕಡೆಗಳಲ್ಲಿ ಒಂದೊಂದು ರೀತಿಯಲ್ಲಿ ತೆಗೆದುಕೊಳ್ಳುವುದರಿಂದ ರೈತರಲ್ಲಿ ಗೊಂದಲ ಏರ್ಪಟ್ಟಿದೆ. 

ಮಧ್ಯವರ್ತಿಗಳ ಹಾವಳಿಗೆ ಕಡಿವಾಣಕ್ಕೆ ಆಗ್ರಹ  
ಕೃಷಿ ಇಲಾಖೆಯಲ್ಲಿ ಕಟಾವು ಯಂತ್ರಗಳ ಬಾಡಿಗೆ ಕಡಿಮೆ ಇದ್ದರೂ ಕೂಡಾ ಖಾಸಗಿ ಕಟಾವು ಯಂತ್ರಗಳ ದರ್ಬಾರ್‌ ಜೋರಾಗಿದೆ, ಈ ನಡುವೆ ಗ್ರಾಮೀಣ ಭಾಗದಲ್ಲಿನ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವ ಪರಿಣಾಮ ಈ ಹಿಂದೆ ಇಲಾಖೆಯಿಂದ ಕಟಾವು ಯಂತ್ರಗಳ ಬಾಡಿಗೆ ರೂ. 1,800 ಇದ್ದದ್ದು ಏಕಾಏಕಿ ಸ್ಫರ್ಧಾತ್ಮಕವಾಗಿ ಬೆಲೆ ಗಗನಕ್ಕೆ ಏರಿಕೆಯಾಗುತ್ತಿದೆ. ಮಧ್ಯವರ್ತಿಗಳ ಹಾವಳಿ ನಿಯಂತ್ರಿಸುವ ನಿಟ್ಟಿನಿಂದ ಕೃಷಿ ಇಲಾಖೆ ಹಾಗೂ ಸಂಬಂಧಪಟ್ಟ ಸ್ಥಳಿಯಾಡಳಿತ ರೈತರ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎನ್ನುವುದು ಗ್ರಾಮೀಣ ರೈತರ ಆಗ್ರಹ.

ಗಗನಕ್ಕೆ ಏರಿದ ಡೀಸೆಲ್‌ ದರ
ದಿನಕ್ಕೆ ಸುಮಾರು  10 ಗಂಟೆಗಳ ಕಾಲ ಸುಮಾರು 4 ಎಕರೆಗೂ ಅಧಿಕ ಕೃಷಿ ಭೂಮಿಯನ್ನು ಕಟಾವು ಮಾಡಬೇಕಾದ ಅನಿವಾರ್ಯತೆ ಇದೆ. ಅಲ್ಲದೆ ಯಂತ್ರಗಳು ಹಾಗೂ ಕಾರ್ಮಿಕರ ನಿರ್ವಹಣೆ  ವೆಚ್ಚ ಹೆಚ್ಚಾಗಿರುವುದರಿಂದ ಅಷ್ಟೇನೂ ಲಾಭ ತರುವಂತದಲ್ಲ . ಡೀಸೆಲ್‌ ದರ ಗಗನಕ್ಕೆ ಏರಿಕೆಯಾದ್ದರಿಂದ ಈ ಬಾರಿಯೂ ಕೂಡಾ ಭತ್ತದ ಕಟಾವಿಗೆ ಪ್ರತಿ ಗಂಟೆಗೆ  2,200ರೂ.ಗಳಿಂದ 2,400 ರೂ. ಬೆಲೆ ನಿಗದಿಪಡಿಸಿದ್ದೇವೆ.  
– ಪ್ರಸಾದ್‌ , ಕಟಾವು ಯಂತ್ರದ ಮಾಲಕರು

ರೈತರಿಗೆ ಗಾಯದ ಮೇಲೆ ಬರೆ !
ಕರಾವಳಿಗೆ ಹೊರ ಜಿಲ್ಲೆಗಳಿಂದ ಬಂದಿರುವ ಕಟಾವು ಯಂತ್ರಗಳ ಸಂಖ್ಯೆ ಬಹುತೇಕ ಹೆಚ್ಚಾಗಿದೆ. ಅಕಾಲಿಕ ಮಳೆಯಿಂದಾಗಿ ಗದ್ದೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಬೆಳೆದು ನಿಂತ ಭತ್ತದ ತೆನೆಗಳು ಉದುರಿಗೆ ಭೂಮಿಯ ಪಾಲಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಭತ್ತ ಕಟಾವು ಕಾರ್ಯವನ್ನು ಚುರುಕುಗೊಳಿಸಿದ್ದೇವೆ. ಕಳೆದ ಬಾರಿಗಿಂತಲೂ ಈ ಬಾರಿ ಕಟಾವಿನ ಯಂತ್ರದ ಬಾಡಿಗೆ ಪ್ರತಿ ಗಂಟೆಗೆ ಸುಮಾರು ರೂ. 300 ರಿಂದ ರೂ. 400 ಹೆಚ್ಚಳವಾಗಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಗ್ರಾಮೀಣ ರೈತರು ನೇರವಾಗಿ ಯಂತ್ರಗಳ ಮಾಲಕರನ್ನು ಸಂಪರ್ಕಿಸಿ ಬದಲಾಗಿ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ .
– ಕೆ. ಜಗದೀಶ್‌ ರಾವ್‌ ಕುಂಭಾಸಿ,  
ಕುಂದಾಪುರ ಕಿಸಾನ್‌ ಸಂಘದ ಸದಸ್ಯರು (ಕೋಟೇಶ್ವರ ವಲಯ) 

– ಟಿ. ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.