ಆಸೀಸ್‌, ಇಂಗ್ಲೆಂಡ್‌, ಪಾಕ್‌ ಕ್ರಿಕೆಟ್‌ ತಂಡಗಳಿಂದ ಫಿಕ್ಸಿಂಗ್‌!


Team Udayavani, Oct 23, 2018, 6:00 AM IST

26.jpg

ದೋಹಾ: ಈ ವರ್ಷಾರಂಭದಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆದ ಕ್ರಿಕೆಟ್‌ ಪಂದ್ಯಗಳಲ್ಲಿ ಫಿಕ್ಸಿಂಗ್‌ ಆರೋಪ ಮಾಡಿ ಸಂಚಲನ ಸೃಷ್ಟಿಸಿದ್ದ “ಅಲ್‌ಜಜೀರಾ’ ವಾಹಿನಿ ಈಗ ಮತ್ತೂಂದು ಆರೋಪ ಮಾಡಿದೆ. ಆಸ್ಟ್ರೇಲಿಯ, ಇಂಗ್ಲೆಂಡ್‌ ಮತ್ತು ಪಾಕಿಸ್ಥಾನಿ ಕ್ರಿಕೆಟಿಗರು 2011-12ರ ಅವಧಿಯಲ್ಲಿ ನಡೆದ 15 ಪಂದ್ಯಗಳಲ್ಲಿ 26 ಬಾರಿ ಸ್ಪಾಟ್‌ ಫಿಕ್ಸಿಂಗ್‌ ಮಾಡಿದ್ದಾರೆಂದು ಅದು ಹೇಳಿದೆ. ಅಲ್ಲದೇ ಗುರುತಿಗೆ ಸಿಗದ ಇನ್ನೊಂದು ತಂಡವೂ ಫಿಕ್ಸಿಂಗ್‌ ಮಾಡಿದೆ ಎಂದು ವಾಹಿನಿ ಹೇಳಿಕೊಂಡಿದೆ. ಈ ಆರೋಪವನ್ನು ಆಸ್ಟ್ರೇಲಿಯ, ಇಂಗ್ಲೆಂಡ್‌ ಮಂಡಳಿಗಳು ಪೂರ್ಣವಾಗಿ ಅಲ್ಲಗಳೆದಿವೆ.

ಈ ವರ್ಷಾರಂಭದಲ್ಲಿ ಹಲವಾರು ಬುಕ್ಕಿಗಳನ್ನು ರಹಸ್ಯ ಕಾರ್ಯಾಚರಣೆಯಲ್ಲಿ ಮಾತನಾಡಿಸಿ ಆರೋಪ ಮಾಡಿದ್ದ ಅಲ್‌ಜಜೀರಾ, ಭಾರತ ಮತ್ತು ಶ್ರೀಲಂಕಾದಲ್ಲಿ ನಡೆದ ಪಂದ್ಯಗಳಲ್ಲಿ ಫಿಕ್ಸಿಂಗ್‌ ನಡೆದಿದೆ. ಆ ಪಂದ್ಯಗಳಲ್ಲಿ ಇಂಗ್ಲೆಂಡ್‌, ಆಸ್ಟ್ರೇಲಿಯಗಳು ಭಾಗವಹಿಸಿದ್ದವು ಎಂದು ಹೇಳಿತ್ತು. ಇದಕ್ಕೆ ಸಂಬಂಧಪಟ್ಟಂತೆ ಹಲವು ವೀಡಿಯೋಗಳನ್ನು ಬಿಡುಗಡೆ ಮಾಡಿತ್ತು. ಈ ಸಂಬಂಧ ಈಗಾಗಲೇ ಐಸಿಸಿ ವಿಚಾರಣೆ ನಡೆಸುತ್ತಿದ್ದು, ಕೆಲವು ಆರೋಪಗಳಲ್ಲಿ ಸತ್ಯವಿಲ್ಲ ಎಂದೂ ಹೇಳಿದೆ.  ಅಷ್ಟರಲ್ಲೇ ಜಜೀರಾ ಇನ್ನೊಂದು ಆರೋಪ ಮಾಡಿದೆ. ಕೆಲವು ಪ್ರಕರಣಗಳಲ್ಲಿ ಎರಡೂ ತಂಡಗಳು ಕೂಡಿಕೊಂಡೇ ಫಿಕ್ಸ್‌ ಮಾಡಿದ್ದು ಗಮನಕ್ಕೆ ಬಂದಿದೆ ಎಂದಿರುವ ವಾಹಿನಿ, ಇದಕ್ಕೆ ಸಂಬಂಧಪಟ್ಟಂತೆ ಕೆಲವು ದಾಖಲೆ ಬಿಡುಗಡೆ ಮಾಡಿದೆ. ಅದರಲ್ಲಿ ಪಂದ್ಯ ಫಿಕ್ಸ್‌ ಮಾಡಿದ್ದ ವ್ಯಕ್ತಿ ಭಾರತದ ಕುಖ್ಯಾತ ಬುಕ್‌ವೆುಕರ್‌ರೊಂದಿಗೆ ಮಾತನಾಡಿರುವ ಧ್ವನಿಮುದ್ರಣವಿದೆ.

ಯಾವ್ಯಾವ ಪಂದ್ಯಗಳು ಫಿಕ್ಸ್‌?
ಲಾರ್ಡ್ಸ್‌ನಲ್ಲಿ ಭಾರತ-ಇಂಗ್ಲೆಂಡ್‌ ನಡುವೆ ನಡೆದ ಪಂದ್ಯ, ಕೇಪ್‌ಟೌನ್‌ನಲ್ಲಿ ಆಸ್ಟ್ರೇಲಿಯ-ದಕ್ಷಿಣ ಆಫ್ರಿಕಾ ನಡುವೆ ನಡೆದ ಪಂದ್ಯ ಹಾಗೂ ಯುಎಇಯಲ್ಲಿ ಪಾಕಿಸ್ಥಾನ-ಇಂಗ್ಲೆಂಡ್‌ ನಡುವೆ ನಡೆದ ಹಲವು ಪಂದ್ಯಗಳಲ್ಲಿ ಫಿಕ್ಸಿಂಗ್‌ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಐಸಿಸಿ ನಾವು ತನಿಖೆ ನಡೆಸುತ್ತೇವೆ, ಯಾವುದೇ ಆರೋಪಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದಿದೆ.

ಆದರೆ ಕ್ರಿಕೆಟ್‌ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿಗಳು ಸಂಪೂರ್ಣವಾಗಿ ಆರೋಪವನ್ನು ನಿರಾಕರಿಸಿವೆ. ಅಲ್‌ಜಜೀರಾ ವಾಹಿನಿ ಪೂರ್ಣಪ್ರಮಾಣದ ಸಾಕ್ಷಿ ನೀಡಿಲ್ಲ. ಆರೋಪಗಳಿಗೆ ಸರಿಯಾದ ಸಾಕ್ಷ್ಯವಿಲ್ಲ. ದಾಖಲೆಗಳನ್ನು ಸರಿಯಾಗಿ ಸಿದ್ಧಪಡಿಸಿಲ್ಲ, ಸ್ಪಷ್ಟತೆಯೂ ಇಲ್ಲ ಎಂದು ಹೇಳಿವೆ. ತಮ್ಮ ಆಟಗಾರರ ಬಗ್ಗೆ ಪೂರ್ಣ ನಿಗಾ ಇಟ್ಟಿದ್ದೇವೆ. ಅಂತಹ ಯಾವುದೇ ಬೆಳವಣಿಗೆಗಳು ಕಾಣಿಸಿಲ್ಲ ಎಂದು ಎರಡೂ ಮಂಡಳಿಗಳು ಸಮರ್ಥಿಸಿಕೊಂಡಿವೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.