ದಿ ವಿಲನ್ಗೆ ವ್ಯಾಪಕ ಟೀಕೆ; ಠಾಣೆ ಮೆಟ್ಟಿಲೇರಿದ ನಿರ್ದೇಶಕ ಪ್ರೇಮ್
Team Udayavani, Oct 23, 2018, 11:46 AM IST
ಬೆಂಗಳೂರು: ದಿ ವಿಲನ್ ಚಿತ್ರದ ಕುರಿತು ವ್ಯಾಪಕವಾಗಿ ಟೀಕೆಗಳು, ಪುಕಾರುಗಳನ್ನು ಹಬ್ಬಿಸಿ ವಿವಾದ ಹುಟ್ಟು ಹಾಕುತ್ತಿರುವವರ ವಿರುದ್ಧ ನಿರ್ದೇಶಕ ಪ್ರೇಮ್ ಅವರು ಠಾಣೆಯ ಮೆಟ್ಟಿಲೇರಿದ್ದಾರೆ.
ಮಂಗಳವಾರ ಡಿಸಿಪಿ ರವಿ ಡಿ. ಚೆನ್ನಣ್ಣನವರ್ ಅವರ ಕಚೇರಿಗೆ ಆಗಮಿಸಿದ ನಿರ್ದೇಶಕ ಪ್ರೇಮ್ ಪುಕಾರು ಹಬ್ಬಿಸಿ, ಚಿತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರು ಮತ್ತು ವೈಯಕ್ತಿಕವಾಗಿ ಕೀಳು ಮಟ್ಟದ ಟೀಕೆಗಳನ್ನು ಮಾಡುತ್ತಿರುವವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಡಿಸಿಪಿ ರವಿ ಡಿ. ಚೆನ್ನಣ್ಣನವರ್ ಅವರು ಪ್ರೇಮ್ ಅವರು ನೀಡಿರುವ ದೂರನ್ನು ಸ್ವೀಕರಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಪೊಲೀಸ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಈಗಾಗಲೇ ಮೂವರನ್ನು ಪತ್ತೆ ಹಚ್ಚಲಾಗಿದ್ದು , ಇನ್ನುಳಿದವರನ್ನು ವಿಚಾರಿಸುವುದಾಗಿ ತಿಳಿಸಿದ್ದಾರೆ.
ಚಿತ್ರ ಬಿಡುಗಡೆಯಾದ ಬಳಿಕ ದೃಶ್ಯವೊಂದನ್ನು ಆಕ್ಷೇಪಿಸಿ ಶಿವರಾಜ್ ಕುಮಾರ್ ಅವರ ಅಭಿಮಾನಿಗಳೆಂದು ಹೇಳಿಕೊಂಡಿದ್ದ ಹಲವರು ವ್ಯಾಪಕ ಆಕ್ರೋಶ ಹೊರ ಹಾಕಿದ್ದರು. ನಿರ್ದೇಶಕ ಪ್ರೇಮ್,ರಕ್ಷಿತಾ, ನಟ ಸುದೀಪ್ ವಿರುದ್ಧ ಅವಾಚ್ಯ ಶಬ್ಧಗಳಿಂದಲೂ ವೈಯಕ್ತಿಕ ನಿಂದನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು
Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್ ಲಾಂಚ್
MUST WATCH
ಹೊಸ ಸೇರ್ಪಡೆ
Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?
Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್ ದರ ದುಪ್ಪಟ್ಟು
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…