ನಿಮ್ಹಾನ್ಸ್‌ ಅಂದ್ರೆ ನಗೆಪಾಟಲಲ್ಲ!


Team Udayavani, Oct 23, 2018, 12:37 PM IST

nimhans.jpg

ಬೆಂಗಳೂರು: ಸಾರ್ವಜನಿಕರು ತನ್ನ ಬಗ್ಗೆ ಹೊಂದಿರುವ ಅಪನಂಬಿಕೆ, ತನ್ನ ಮೇಲೆ ಹೊರಿಸಿರುವ ಕಳಂಕಗಳನ್ನೆಲ್ಲಾ ತೊಡೆದುಹಾಕಿ, ಜನರಿಗೆ ಹತ್ತಿರವಾಗುವ ನಿಟ್ಟಿನಲ್ಲಿ “ವಾಕಿಂಗ್‌ ಟೂರ್‌ ಆಫ್ ನಿಮ್ಹಾನ್ಸ್‌’ ಎಂಬ ವಿಶೇಷ ಅಭಿಯಾನ ಒಂದನ್ನು ನಿಮ್ಹಾನ್ಸ್‌ ಸಂಸ್ಥೆ ಆರಂಭಿಸಿದೆ. ಅದರ ಮೊದಲ ಪ್ರವಾಸ ಅ.27ರಂದು ನಡೆಯಲಿದೆ.

ಮಾನಸಿಕ ಚಿಕಿತ್ಸಾ ಕೇಂದ್ರ ಎಂದರೆ ಜನರಲ್ಲಿ ಭಯ ಅಥವಾ ತಮಾಷೆ ರೀತಿಯ ಭಿನ್ನ, ತಾತ್ಸಾರ ಭಾವನೆಗಳಿವೆ. ಅಲ್ಲಿನ ರೋಗಿಗಳನ್ನಷ್ಟೇ ಅಲ್ಲ, ವೈದ್ಯರನ್ನೂ ಜನ ವಿಚಿತ್ರ ಭಾವದಿಂದಲೇ ನೋಡುತ್ತಾರೆ. ಇತ್ತೀಚೆಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್‌) “ಮಾನಸಿಕ ರೋಗಿಗಳ ಚಿಕಿತ್ಸಾ ಕೇಂದ್ರದ ಕುರಿತು ಜನರ ಅಭಿಪ್ರಾಯ’ ಎಂಬ ಸಂಶೋಧನೆ ಕೈಗೊಂಡಿತ್ತು.

ಮಾನಸಿಕ ರೋಗಿಗಳ ಆಸ್ಪತ್ರೆ ಕುರಿತು ಜನರು ಸಾಕಷ್ಟು ತಪ್ಪು ಕಲ್ಪನೆಗಳನ್ನು ಹೊಂದಿರುವುದು ಸಂಶೋಧನೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಜಾಗೃತಿ ಮೂಡಿಸಲು ನಿರ್ಧರಿಸಿದ ಸಂಸ್ಥೆಯ ವೈದ್ಯರು, ಈ ವಿಶೇಷ ಅಭಿಯಾನ ಹಮ್ಮಿಕೊಂಡಿದ್ದಾರೆ.

ನಿಮ್ಹಾನ್ಸ್‌ ಸುತ್ತಾಡಲು ಬನ್ನಿ: ಈ ಅಭಿಯಾನದ ಅಡಿಯಲ್ಲಿ ಒಂದು ದಿನದ ಮಟ್ಟಿಗೆ ನಿಮ್ಹಾನ್ಸ್‌ ಆಸ್ಪತ್ರೆಯ ಆವರಣವನ್ನು ಒಂದು ಸುತ್ತಲು ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ. “ಹುಚ್ಚರ ಆಸ್ಪತ್ರೆ’ ಎಂದರೆ ಅದೊಂದು ಕತ್ತಲ ಕೋಣೆಯಲ್ಲ. ಇಲ್ಲಿ ಎಲ್ಲಾ ರೋಗಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌ ಕೊಡುವುದಿಲ್ಲ. ಮಾನಸಿಕ ರೋಗಿಗಳು ಸಾಮಾನ್ಯರಂತೆ ಸ್ವತಂತ್ರವಾಗಿ ಓಡಾಡಿಕೊಂಡು ಇರುತ್ತಾರೆ ಎಂಬ ಅಂಶವನ್ನು ಮನದಟ್ಟು ಮಾಡಿಕೊಡಲು ಒಟ್ಟು 300 ಎಕರೆ ವಿಸ್ತೀರ್ಣದ ಆಸ್ಪತ್ರೆಯನ್ನು ತೋರಿಸಲಾಗುತ್ತದೆ.

ಆಸ್ಪತ್ರೆಯ ಸುಸಜ್ಜಿತ ಕಟ್ಟಡ, 26 ಚಿಕಿತ್ಸಾ ವಿಭಾಗಗಳು, ಸಾಮಾನ್ಯ ಆಸ್ಪತ್ರೆಗಳಲ್ಲಿರುವಂತ ವಾರ್ಡ್‌ಗಳು ಜತೆಗೆ ಆಸ್ಪತ್ರೆ ಸೌಂದರ್ಯ ಹೆಚ್ಚಿಸಿರುವ ಬ್ರಿಟೀಷರ ಕಾಲದ ನೊರೋನಾ ಉದ್ಯಾನ, ಇಲ್ಲಿ ಸಾಕಲಾಗಿರುವ ವಿವಿಧ ಪ್ರಭೇದಗಳ ಪ್ರಾಣಿ, ಪಕ್ಷಿಗಳನ್ನು ತೋರಿಸಲಾಗುವುದು. ಆಸ್ಪತ್ರೆಯ ಅತ್ಯಮೂಲ್ಯ ಸಂಶೋಧನೆಗಳು, ಆಸ್ಪತ್ರೆಯ ಇತಿಹಾಸದ ಕುರಿತು ಸಿನಿಮಾ, ಕಲಾ ಕೇಂದ್ರಗಳ ಭೇಟಿ ಸೇರಿದಂತೆ ಸಂಪೂರ್ಣ ಮಾಹಿತಿ ನೀಡಿ ಭೇಟಿಕೊಟ್ಟವರ ಅಪನಂಬಿಕೆಗಳನ್ನು ದೂರವಾಗಿಸುವ ಪ್ರಯತ್ನ ಮಾಡಲಾಗುದು ಎಂದು ಮಾನಸಿಕ ಆರೋಗ್ಯ ಶಿಕ್ಷಣ ವಿಭಾಗದ ಪೊ›.ಕೆ.ಎಸ್‌.ಮೀನಾ ತಿಳಿಸಿದರು.

ಹೆಸರು ನೋಂದಣಿಗೆ 100 ರೂ.: ಈ ಅಭಿಯಾನದಲ್ಲಿ ಭಾಗವಹಿಸಿ ಆಸ್ಪತ್ರೆಯನ್ನು ನೋಡಲು 100 ರೂ. ನೀಡಿ ಇ-ಮೇಲ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಅ.27ರಂದು ನಡೆಯಲಿರು ಅಭಿಯಾನದ ಮೊದಲ ಪ್ರವಾಸಕ್ಕೆ 200ಕ್ಕೂ ಹೆಚ್ಚು ಜನ ನೋಂದಣಿ ಮಾಡಿಕೊಂಡಿದ್ದಾರೆ. ಆ ಪೈಕಿ ಮೊದಲ ಬಾರಿ 50 ಜನರಿಗೆ ಅವಕಾಶ ಮಾಡಿಕೊಡಲಾಗುತ್ತಿದ್ದು, ಬೆಳಗ್ಗೆ 9.30 ಹಾಗೂ 10.30ಕ್ಕೆ ಎರಡು ತಂಡಗಳಲ್ಲಿ ಆಸ್ಪತ್ರೆ ತೋರಿಸಲಾಗುತ್ತದೆ. ಮುಂದುವರಿದಂತೆ ವಾರಕ್ಕೆ ಒಮ್ಮೆ ಅಥವಾ ತಿಂಗಳಿಗೆ ಎರಡು ಬಾರಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರಿಗೆ ಆಸ್ಪತ್ರೆ ತೋರಿಸಲಾಗುವುದು ಎಂದು ನಿಮ್ಹಾನ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹೆಸರು ನೋಂದಾಯಿಸಲು…: [email protected]ಗೆ ಇ-ಮೇಲ್‌ ಮಾಡುವ ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 080 -26995157 ಸಂಪರ್ಕಿಸಬಹುದು.

ಬುದ್ಧಿಮಾಂದ್ಯ ಮಕ್ಕಳ ಕೆಫೆಯಲ್ಲಿ ಆತಿಥ್ಯ: ಅಭಿಯಾನದಡಿ ಸುತ್ತಾಟಕ್ಕೆ ಆಗಮಿಸುವ ಸಾರ್ವಜನಿಕರಿಗೆ ನಿಮ್ಹಾನ್ಸ್‌ನಲ್ಲಿರುವ ಬುದ್ಧಿಮಾಂದ್ಯ ಮಕ್ಕಳೇ ಮಾರ್ಗದರ್ಶಕರ ಸಹಾಯದಿಂದ ನಡೆಸುವ ಕೆಫೆಯಲ್ಲಿ ಆಥಿತ್ಯ ನೀಡುವ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು ಸಿದ್ಧಪಡಿಸುವ ವಿವಿಧ ಬಗೆಯ ಕೇಕ್‌, ಬಿಸ್ಕೇಟ್‌, ಬ್ರೆಡ್‌ಗಳು, ಜ್ಯೂಸ್‌ಗಳು ಲಭ್ಯವಿರುತ್ತವೆ. ನೋಂದಣಿ ಶುಲ್ಕ ಪಡೆದಿರುವುದರಿಂದ ಒಂದಿಷ್ಟು ತಿನಿಸು ಹಾಗೂ ಕಾಫಿಯನ್ನು ಉಚಿತವಾಗಿ ನೀಡಲಾಗುವುದು. ಜತೆಗೆ ಮಕ್ಕಳು ತಮ್ಮ ಕೈಯಾರೆ ಮಾಡಿರುವ ಮೇಣದ ಬತ್ತಿ, ಇತರೆ ಕಲಾಕೃತಿಗಳು, ತಿನಿಸುಗಳನ್ನು ಖರೀದಿಸಿ ಮನೆಗೆ ಕೊಂಡೋಯ್ಯಬಹುದು ಎಂದು ನಿಮ್ಹಾನ್ಸ್‌ ವೈದ್ಯರು ತಿಳಿಸಿದ್ದಾರೆ.

ಮಾನಸಿಕ ರೋಗ ಒಂದು ವಿಸ್ಮಯಕಾರಿ ಸಂಗತಿಯಲ್ಲ. ಸಮಾಜ ಬಹಿಷ್ಕರಿಸುತ್ತೆ ಎಂಬ ಭಯವೂ ಬೇಡ. ಎಲ್ಲ ರೋಗಿಗಳಂತೆಯೇ ಇಲ್ಲಿನ ಮಾನಸಿಕ ರೋಗಿಗಳು ಚಿಕಿತ್ಸೆ ಪಡೆದು ಗುಣವಾಗುತ್ತಾರೆ ಎಂಬ ಕಲ್ಪನೆಯನ್ನು ಜನರಲ್ಲಿ ಮೂಡಿಸಲು ಈ ಅಭಿಮಾನ ಹಮ್ಮಿಕೊಂಡಿದ್ದೇವೆ. ಮೊದಲ ಸುತ್ತಾಟ ಯಶಸ್ವಿಯಾದ ಕೂಡಲೇ ಸಾಲು ಸಾಲು ಪ್ರವಾಸಗಳನ್ನು ಆಯೋಜಿಸಲಾಗುವುದು.
-ಡಾ.ಗಂಗಾಧರ್‌, ನಿಮ್ಹಾನ್ಸ್‌ ನಿರ್ದೇಶಕರು

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.