ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡರ ಸಹಾಯಾರ್ಥ ಯಕ್ಷಗಾನ


Team Udayavani, Oct 23, 2018, 3:20 PM IST

2110mum02.jpg

ಪುಣೆ: ಯಕ್ಷಗಾನ  ವಿಶ್ವ ವಿಖ್ಯಾತಗೊಂಡಿರುವುದಕ್ಕೆ   ನಿಷ್ಠಾ ವಂತ ಹಿರಿಯ ಕಲಾವಿದರು, ಕಲಾ ಪೋಷಕರು, ಕಲಾ ಸಂಘಟಕರು ಹಾಗೂ ಕಲಾಭಿಮಾನಿಗಳ ಪ್ರೋತ್ಸಾಹ ಕಾರಣ. ಯಕ್ಷಗಾನಕ್ಕೆ ಅಳಿವಿಲ್ಲ. ಸಂಘ ಟಕರ, ಕಲಾಭಿಮಾನಿಗಳ ಕೊರತೆ ಎಂದಿಗೂ ಬರಲಾರದು. ಯಕ್ಷ ಕಲಾವಿದರ ಕೊರತೆಯೂ ಆಗದು. ಯಕ್ಷಗಾನವನ್ನೇ ನಂಬಿ ಜೀವನ ಸಾಗಿಸುವ ಕಲಾವಿದರಿದ್ದಾರೆ.  ಕೇವಲ  ಆರು ತಿಂಗಳ  ಯಕ್ಷಗಾನ ಸೇವೆಯ ಸಮಯದಲ್ಲಿ ದುಡಿದು ವರ್ಷಪೂರ್ತಿ ಜೀವನ ನಡೆಸುವ ಈ ಕಲಾವಿದರ ಜೀವನ ನಾವಂದುಕೊಂಡಷ್ಟು ಸುಖಮಯವಾಗಿಲ್ಲ. ಈ ಕಲಾವಿದರ ಕಷ್ಟಗಳಿಗೆ ನಾವೆಲ್ಲರೂ ಸಹಾಯ ನೀಡಿ ಅವರ ಬದುಕಿಗೆ ದೀಪವಾಗಬೇಕು. ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ  ಕೊಳ್ತಿಗೆ ನಾರಾಯಣ ಗೌಡರಂಥ ಕಲಾವಿದರ ಕಷ್ಟಗಳಿಗೆ ಎಲ್ಲರ ಸಹಾ ಯದ ಅಗತ್ಯವಿದೆ ಎಂದು ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಅಧ್ಯಕ್ಷ,  ಕಲಾಪೋಷಕ ಪ್ರವೀಣ್‌ ಶೆಟ್ಟಿ ನುಡಿದರು.

ಅ 20ರಂದು ಪುಣೆಯ ಕಾತ್ರಜ್‌ ದೇವಸ್ಥಾನದ ವಠಾರದಲ್ಲಿ  ಸುಮಾರು 52 ವರ್ಷಗಳ ಕಾಲ ಯಕ್ಷರಂಗದಲಿದ್ದು ಒಂಟಿ  ಸಲಗ ಎಂಬ ಬಿರುದನ್ನು ಪಡೆದ ಖ್ಯಾತ  ಯಕ್ಷಗಾನ  ಕಲಾವಿದ ಕೊಳ್ತಿಗೆ ನಾರಾಯಣ ಗೌಡ ಅವರ ಗೃಹ  ನಿರ್ಮಾಣದ  ಸಹಾಯಾರ್ಥವಾಗಿ ಆಯೋಜಿಸಲಾಗಿದ್ದ ಯಕ್ಷಗಾನ ಪ್ರದರ್ಶನದ ಸಂದರ್ಭ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು. 

ನಾರಾಯಣ ಗೌಡರ ಗೃಹ ನಿರ್ಮಾ ಣದ ಸಹಾಯಾರ್ಥ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಅವರಿಗೆ ನಮ್ಮಿಂದಾದ ಸಹಾಯವನ್ನು ಮಾಬೇಕು. ಪುಣೆಯಲ್ಲಿ ಯಕ್ಷಗಾನ ಮಂಡಳಿ ಸ್ಥಾಪಿಸಿ ಕಲಾ  ಸೇವೆ ಮಾಡುತ್ತಿದ್ದೇನೆ. ಇದಕ್ಕಾಗಿ ನನ್ನನ್ನು ಸಮ್ಮಾನಿಸಿದ್ದಕ್ಕೆ ಧನ್ಯ ಎಂದು ಅವರು ಹೇಳಿದರು. 

ನಾರಾಯಣ ಗೌಡರ  ಯಕ್ಷಗಾನ ಪ್ರದರ್ಶನಕ್ಕೆ ಉಚಿತವಾಗಿ ಸ್ಥಳ ನೀಡಿ ಜತೆಗೆ ಸುಮಾರು ಎರಡು ತಿಂಗಳ ಕಾಲ ಅಶ್ರಯ ನೀಡಿ ಸಂಪೂರ್ಣ ಸಹಕಾರ ನೀಡಿದ  ಕಾತ್ರಜ್‌ ಶ್ರೀ  ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸೇವಾ  ಸಮಿತಿಯ ಎಲ್ಲ ಸದಸ್ಯರ ಪರವಾಗಿ ಅಧ್ಯಕ್ಷರಾದ ಸುಭಾಷ್‌ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. 
ಪುಣೆ ಬಂಟರ ಸಂಘದ  ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು, ಉತ್ತರ ಪ್ರಾದೇಶಿಕ ಸಮಿತಿ ಬಂಟರ ಸಂಘ ಪುಣೆ  ಇದರ  ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು ಅವರನ್ನು ಗೌರವಿಸಲಾಯಿತು.

ಹಿಮ್ಮೇಳದಲ್ಲಿ ಯುವ ಭಾಗವತ ಯೋಗಿಶ್‌ ಶರ್ಮ, ಚೆಂಡೆ- ಮದ್ದಳೆ
ಯಲ್ಲಿ ಚಂದ್ರಶೇಖರ  ಗುರುವಾಯನ ಕೆರೆ ಮತ್ತು  ರಾಜೇಶ್‌ ಮಡಂತ್ಯಾರು, ಕಲಾವಿದರಾಗಿ ಜಬ್ಟಾರ್‌ ಸಮೋ, ಅರವಿಂದ ಬೋಳಾರ್‌, ಪೆರ್ಲ ಜಗನ್ನಾಥ್‌ ಶೆಟ್ಟಿ, ಮಾಧವ ಪಾಟಾಳಿ, ಶೇಖರ್‌ ಜಯನಗರ, ನಾರಾ ಯಣ ಗೌಡ, ಪ್ರಭಾಕರ ಶೆಟ್ಟಿ ಮೊದ ಲಾದವರು ಪಾಲ್ಗೊಂಡಿದ್ದರು. 

ಕೊನೆಯಲ್ಲಿ ಶ್ರೀ ಅಯ್ಯಪ್ಪ ಸೇವಾ ಸಂಘದ ವತಿಯಿಂದ ಅನ್ನದಾನ ನಡೆ ಯಿತು.  ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ದುಶ್ಚಟವಿಲ್ಲದೆ ಇಷ್ಟು ವರ್ಷ ಯಕ್ಷರಂಗ ದಲ್ಲಿದ್ದರೂ ಸ್ವಂತ ಮನೆ ಮಾಡಿಕೊಳ್ಳ ಲಾಗದ ನಾನು, ಗೃಹ ನಿರ್ಮಾಣ ಸಂಬಂಧ ಅರ್ಥಿಕ ಅಡಚಣೆ ಪರಿಹರಿ ಸಲು  ಪುಣೆಯಲ್ಲಿ  ಯಕ್ಷಗಾನ ಆಯೋಜಿಸಿದ್ದೇನೆ.  ಸಹಕರಿಸಿದವರಿಗೆ ಚಿರಋಣಿ. ಆದರೂ ನೀರಿಕ್ಷೆಯಷ್ಟು ಸಫ‌ಲತೆ ಪಡೆಯಲಾಗಲಿಲ್ಲ. ಪುಣೆಯ ಕಲಾಪೋಷಕರ ಸಹಾಯ ಯಾಚಿಸುತ್ತಿದ್ದೇನೆ. 
-ಕೊಳ್ತಿಗೆ ನಾರಾಯಣ ಗೌಡ, ಯಕ್ಷಗಾನ ಕಲಾವಿದ

ಚಿತ್ರ-ವರದಿ:ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.