ಇತಿಹಾಸದಲ್ಲೇ ಮೊದಲು; ಸಿಬಿಐನ ಟಾಪ್ 3 ಅಧಿಕಾರಿಗಳಿಗೆ ರಜೆ !
Team Udayavani, Oct 24, 2018, 9:51 AM IST
ಹೊಸದಿಲ್ಲಿ: ಸಿಬಿಐನ ಇಬ್ಬರು ಮುಖ್ಯ ಅಧಿಕಾರಿಗಳ ಗುದ್ದಾಟ ತೀವ್ರಗೊಂಡ ವೇಳೆಯಲ್ಲಿ ಇತಿಹಾದಲ್ಲೇ ಮೊದಲ ಬಾರಿಗೆ ಎನ್ನುವ ಹಾಗೆ ಅತ್ಯುನ್ನತಾ ತನಿಖಾ ಸಂಸ್ಥೆಯ ಪ್ರಮುಖ ಮೂವರು ಅಧಿಕಾರಿಗಳಿಗೆ ರಜೆ ನೀಡಲಾಗಿದೆ.
ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ,ಸಂಸ್ಥೆಯ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಮತ್ತು ಜಂಟಿ ನಿರ್ದೇಶಕ ಎ.ಕೆ.ಶರ್ಮಾ ಅವರನ್ನು ಕೇಂದ್ರ ಸರಕಾರ ಮಂಗಳವಾರ ರಜೆ ನೀಡಿ ಕಳುಹಿಸಿದೆ.
ಹಂಗಾಮಿ ಮುಖ್ಯಸ್ಥರನ್ನಾಗಿ ಹಾಲಿ ಸಹಾಯಕ ನಿರ್ದೇಶಕರಾಗಿದ್ದ ಎಂ.ನಾಗೇಶ್ವರ್ ರಾವ್ ಅವರನ್ನು ನೇಮಿಸಲಾಗಿದೆ.
ಮಂಗಳವಾರ ರಾತ್ರಿ ಸಂಪುಟದ ನೇಮಕಾತಿ ಸಮಿತಿಯ ವಿಶೇಷ ಸಭೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಗೇಶ್ವರ್ ರಾವ್ ಅವರನ್ನು ಹುದ್ದೆಗೆ ನೇಮಕ ಮಾಡಿದ್ದಾರೆ.
ಮಾಂಸ ರಫ್ತುದಾರ ಮೊಯಿನ್ ಖುರೇಶಿ ಪ್ರಕರಣದ ತನಿಖೆ ಯಲ್ಲಿನ ಅಕ್ರಮಕ್ಕೆ ಸಂಬಂಧಿಸಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ದೂರು ದಾಖಲಿಸಲಾಗಿದ್ದರೆ, ಸೋಮವಾರ ಡೆಪ್ಯುಟಿ ಎಸ್ಪಿ ದೇವೇಂದ್ರ ಕುಮಾರ್ರನ್ನು ಬಂಧಿಸ ಲಾಗಿತ್ತು.
ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಹಾಗೂ ನಿರ್ದೇಶಕ ಅಲೋಕ್ ಕುಮಾರ್ರನ್ನು ಪ್ರಧಾನಿ ಕಚೇರಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಸಮನ್ಸ್ ನೀಡಿದ್ದರು.
ಅಸ್ತಾನಾ ಮತ್ತು ಅಲೋಕ್ ಕುಮಾರ್ ಅವರ ನಡುವಿನ ಹೋರಾಟ ದೆಹಲಿ ಹೈಕೋರ್ಟ್ ಮೆಟ್ಟಿಲನ್ನೂ ಏರಿದ್ದು ಇಬ್ಬರೂ ಎಫ್ಐಆರ್ ರದ್ದು ಮಾಡಲು ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ