ಆರ್ಯ ಖನನ ಕನಸು


Team Udayavani, Oct 24, 2018, 11:33 AM IST

khanana.jpg

ಒಂದಲ್ಲ, ಎರಡಲ್ಲ, ಮೂರೂ ಅಲ್ಲ ಐದು ಶೇಡ್‌ ಇರುವ ಪಾತ್ರಗಳು…! ಇದು ಈಗಷ್ಟೇ ಗಟ್ಟಿನೆಲೆ ಕಾಣಬೇಕೆಂದು ಆಸೆ ಕಂಗಳಲ್ಲಿ ಗಾಂಧಿನಗರಕ್ಕೆ ಕಾಲಿಟ್ಟಿರುವ ಹೊಸ ಪ್ರತಿಭೆ ಆರ್ಯವರ್ಧನ್‌ ಮೊದಲ ಚಿತ್ರದೊಳಗಿರುವ ಐದು ವಿಭಿನ್ನ ಗೆಟಪ್‌ ಕುರಿತ ವಿಷಯ. ಹೌದು, ಆರ್ಯವರ್ಧನ್‌ಗೆ “ಖನನ’ ಮೊದಲ ಪ್ರಯತ್ನ. ಮೊದಲ ಸಿನಿಮಾದಲ್ಲೇ ಐದು ಶೇಡ್‌ ಇರುವ ಪಾತ್ರಗಳು ಸಿಕ್ಕಿವೆ.

ಅದರಲ್ಲೂ ಇದು ಕನ್ನಡ, ತೆಲುಗು ಮತ್ತು ತಮಿಳು ಈ ಮೂರು ಭಾಷೆಯಲ್ಲೂ ನಿರ್ಮಾಣಗೊಂಡು ಏಕಕಾಲದಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಚಿತ್ರದ ಮೋಷನ್‌ ಪೋಸ್ಟರ್‌ ಗಮನ ಸೆಳೆದಿದ್ದು, ಇಷ್ಟರಲ್ಲೇ ಚಿತ್ರದ ಟ್ರೇಲರ್‌ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲು ನಿರ್ದೇಶಕ ರಾಧ ನಿರ್ಧರಿಸಿದ್ದಾರೆ. ನಾಯಕ ಆರ್ಯವರ್ಧನ ಅವರಿಗೆ “ಖನನ’ ಚಿತ್ರದಲ್ಲಿ ಐದು ಶೇಡ್‌ಗಳಿವೆ ನಿಜ. ಆ ಶೇಡ್‌ನ‌ ಮಹತ್ವವೇನು?

ಅದಕ್ಕೆ “ಖನನ’ ನೋಡಬೇಕೆಂಬುದು ಚಿತ್ರತಂಡದ ಮಾತು. ಅವರಿಲ್ಲಿ, ಸೈಕೋ ಆಗಿ, ದೇಹಧಾಡ್ಯ ಪಟುವಾಗಿ, ಆರ್ಕಿಟೆಕ್ಟ್ ಆಗಿ ಕಾಣಿಸಿಕೊಂಡಿರುವ ಪಾತ್ರ ಸಿಕ್ಕಿದೆ. ಇನ್ನೂ ಎರಡು ಶೇಡ್‌ ಯಾವುದೆಂಬುದು ಸಸ್ಪೆನ್ಸ್‌ ಎನ್ನುವ ನಿರ್ದೇಶಕರು, “ಖನನ’ ಎಂಬುದು ಸಂಸ್ಕೃತ ಪದ. ಭೂಮಿ ಅಗೆಯುವುದನ್ನು ಖನನ ಎನ್ನಲಾಗುತ್ತದೆ. ಕಥೆಗೆ ಈ ಶೀರ್ಷಿಕೆ ಪೂರಕ ಅನಿಸಿದ್ದರಿಂದಲೇ ಅದನ್ನು ಇಡಲಾಗಿದೆ.

ಕಥೆ ಬಗ್ಗೆ ಹೇಳುವುದಾದರೆ, ಬದುಕಿನಲ್ಲಿ ಪ್ರತಿಯೊಬ್ಬರೂ ಒಂದಲ್ಲ, ಒಂದು ಖನನ ಮಾಡುತ್ತಲೇ ಇರುತ್ತಾರೆ. ಅದು ಬದುಕಿನ ಹೋರಾಟಕ್ಕಾಗಿರಬಹುದು, ಅಸ್ತಿತ್ವಕ್ಕಾಗಿರಬಹುದು. ಅದೊಂದು ನಿರಂತರ ಪ್ರಕ್ರಿಯೆ. ವಾಸ್ತವದಲ್ಲಿ ಪ್ರಾಣಿಗಳಲ್ಲಿ ನಿಯತ್ತು ಇದೆ, ಅದೇ ಮನುಷ್ಯನಲ್ಲಿ ಇಲ್ಲ ಎಂಬ ಅಂಶ ಚಿತ್ರದ ಹೈಲೈಟ್‌. ಚಿತ್ರದಲ್ಲಿ ನಾಯಿ ಕೂಡ ಪ್ರಮುಖ ಪಾತ್ರ ವಹಿಸಿದೆ. ಅದು “ಖನನ’ನದಲ್ಲಿ ತಿರುವಿಗೆ ಕಾರಣವಾಗಲಿದೆ. ಸಸ್ಪೆನ್ಸ್‌ ಮತ್ತು ಥ್ರಿಲ್ಲರ್‌ ಅಂಶಗಳ ಜೊತೆಗೆ ಕಮರ್ಷಿಯಲ್‌ ಆಗಿ ಚಿತ್ರ ಮೂಡಿಬಂದಿದೆ ಎಂಬುದು ನಿರ್ದೇಶಕರ ಮಾತು. 

ಚಿತ್ರಕ್ಕೆ ಬಿ.ಶ್ರೀನಿವಾಸ ರಾವ್‌ ನಿರ್ಮಾಪಕರು. ಅವರಿಗೆ “ಖನನ’ ಮೇಲೆ ವಿಶ್ವಾಸವಿದೆ. ಕಾರಣ, ಹೊಸತನದ ಚಿತ್ರಕ್ಕೆ ಸದಾ ಮೆಚ್ಚುಗೆ ಇರುತ್ತೆ ಎಂಬುದು ಬಲವಾದ ನಂಬಿಕೆ. ಬೆಂಗಳೂರು, ಚನ್ನಪಟ್ಟಣ, ಕೋಲಾರ, ಮೈಸೂರು ಮತ್ತು ಕೇರಳದಲ್ಲಿ ಚಿತ್ರೀಕರಿಸಲಾಗಿದೆ. ನಾಯಕ ಆರ್ಯವರ್ಧನ್‌ ಅವರಿಗೆ ಕರಿಷ್ಮಾ ಇಲ್ಲಿ ಇಂಡೋ ಅಮೇರಿಕನ್‌ ಹುಡುಗಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಅವಿನಾಶ್‌, ವಿನಯ ಪ್ರಸಾದ್‌, ಓಂಪ್ರಕಾಶ್‌ ರಾವ್‌, ಬ್ಯಾಂಕ್‌ ಜನಾರ್ದನ್‌, ಮೋಹನ್‌ ಜುನೇಜ ಇತರರು ಇದ್ದಾರೆ. ಚಿತ್ರಕ್ಕೆ ಕುನಿ ಗುಡಿಪಾಟಿ ಸಂಗೀತವಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.