ಕಾರ್ಮಿಕರ 8 ತಿಂಗಳ ಹೋರಾಟ ಅಂತ್ಯ


Team Udayavani, Oct 24, 2018, 4:06 PM IST

24-october-17.gif

ಗಂಗಾವತಿ: ಕೆಲಸ ಕಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಕಳೆದ 8 ತಿಂಗಳಿಂದ ನಗರಸಭೆ ಎದುರು ನಿರಂತರ ಪ್ರತಿಭಟನೆ ನಡೆಸುತ್ತಿದ್ದ 162 ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಜಿಲ್ಲಾಧಿಕಾರಿ ಕ್ರಮ ಕೈಗೊಂಡಿದ್ದರಿಂದ ಧರಣಿ ಅಂತ್ಯಗೊಂಡಿದೆ.

ಕಳೆದ 8 ತಿಂಗಳಿಂದ ಹೊರಗುತ್ತಿಗೆ ಪೌರಕಾರ್ಮಿಕರು ನಗರಸಭೆ ಎದುರು ಅನಿರ್ದಿಷ್ಟ ಧರಣಿ ನಡೆಸುತ್ತಿದ್ದರು. ಹಲವು ಬಾರಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಧಿಕಾರಿ ಸಹಾಯಕ ಆಯುಕ್ತರು, ನಗರಸಭೆ ಕೋಶಾಧಿಕಾರಿ ಸೇರಿ ಹಲವು ಅಧಿಕಾರಿಗಳು ಕಾರ್ಮಿಕರ ಹೋರಾಟ ಅಂತ್ಯಗೊಳಿಸಲು ಯತ್ನ ನಡೆಸಿದರೂ ಸಫಲವಾಗಿರಲಿಲ್ಲ. ಜಿಲ್ಲೆಗೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ಸುನೀಲಕುಮಾರ ಕಾರ್ಮಿಕ ಕಡತ ಹಾಗೂ ಹಲವು ದಾಖಲೆ ಪರಿಶೀಲನೆ ನಡೆಸಿ ಎಲ್ಲ 162 ಹೊರಗುತ್ತಿಗೆ ಪೌರಕಾರ್ಮಿಕರನ್ನು ಕಾಯಂ ಮಾಡಿ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಾರ್ಮಿಕರ ಹುದ್ದೆಗಳಿಗೆ ನಿಯೋಜನೆ ಮಾಡುವ ಆದೇಶ ಹೊರಡಿಸಿದ್ದು, ಇದಕ್ಕೆ ಸೂಕ್ತ ದಾಖಲೆ ಸಲ್ಲಿಸಲು ಅನುಕೂಲ ಮಾಡಿಕೊಡಲು ತೀರ್ಮಾನ ಕೈಗೊಂಡಿರುವುದು ಕಾರ್ಮಿಕ ಹಿತ ಕಾಪಾಡಿದಂತಾಗಿದೆ.

ಸಮಸ್ಯೆ ಪರಿಹಾರಕ್ಕೆ ಯತ್ನ: ಸತತ ಮೂರು ವರ್ಷಗಳಿಂದ ಕಾರ್ಮಿಕರು ಪ್ರಗತಿಪರ ಪೌರಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಹೋರಾಟ ನಡೆಸಿ ಬೇಡಿಕೆ ಈಡೇರಿಸುಂತೆ ಒತ್ತಾಯ ಹೇರಿದ್ದರು. ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಹಲವು ಬಾರಿ ಮಾತುಕತೆ ನಡೆದರೂ ಸಮಸ್ಯೆಗೆ ಪರಿಹಾರ ದೊರಕಿರಲಿಲ್ಲ. ಇತ್ತೀಚೆಗೆ ಪ್ರಭಾರಿ ಪೌರಾಯುಕ್ತರಾಗಿ ಆಗಿಮಿಸಿದ್ದ ಪ್ರೊಬೇಷನರಿ ಜಿಲ್ಲಾಧಿಕಾರಿ ಅಕ್ಷಯ್‌ ಶ್ರೀಧರ್‌ ಕಾರ್ಮಿಕರ ಸಮಸ್ಯೆ ಬಗೆಹರಿಸಲು ತೀವ್ರ ಯತ್ನ ನಡೆಸಿ ಜಿಲ್ಲಾಧಿಕಾರಿಗಳ ಜತೆ ಸತತ ಸಂಪರ್ಕ ನಡೆಸಿ ದಾಖಲಾತಿಗಳೊಂದಿಗೆ ಕಾರ್ಮಿಕ ಸಂಘಟನೆ ಜತೆ ಮಾತನಾಡಿ ಕೊನೆಗೂ 162 ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಲು ಜಿಲ್ಲಾಡಳಿತ ನಿರ್ಧಾರ ಮಾಡಿ ಆದೇಶ ಹೊರಡಿಸಿದೆ.

ನಗರಸಭೆ 162 ಹೊರಗುತ್ತಿಗೆ ಪೌರ ಕಾರ್ಮಿಕರನ್ನು ಪುನಃ ನೇಮಕ ಮಾಡಿಕೊಳ್ಳುವ ನಿರ್ಧಾರದಿಂದ ಸಂತೋಷವಾಗಿದೆ. 2016ರಲ್ಲಿ ಆಡಳಿತ ಮಂಡಳಿ 162 ಜನ ಗುತ್ತಿಗೆ ಪೌರಕಾರ್ಮಿಕರನ್ನು ಕೆಲಸದಿಂದ ಬಿಡಿಸಿ, ಬೀದಿಪಾಲು ಮಾಡಿ ಹೊಸಬರನ್ನು ಕೆಲಸಕ್ಕೆ ತೆಗೆದುಕೊಳ್ಳಲು ಹುನ್ನಾರ ನಡೆಸಿತ್ತು. ಆಗ ಮಾಜಿ ಸಚಿವ ಶಿವರಾಜ ತಂಗಡಗಿ ಕಾರ್ಮಿಕರ ಸಮಸ್ಯೆಗಳನ್ನು ಅಂದಿನ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದು ರಾಜ್ಯದ 32 ಸಾವಿರ ಹೊರಗುತ್ತಿಗೆ ಪೌರಕಾರ್ಮಿಕರಿಗೆ ನೇರವಾಗಿ ಸರಕಾರದಿಂದ ವೇತನ ಪಾವತಿಯಾಗುವಂತೆ ಐತಿಹಾಸಿಕ ಆದೇಶ ಮಾಡಿಸಿದ್ದರು. ಈ ಸಂದರ್ಭದಲ್ಲಿ ಕೆಲ ರಾಜಕೀಯ ಧುರೀಣರು ಗಂಗಾವತಿಯಲ್ಲಿ 162 ಕಾರ್ಮಿಕರ ವಿಷಯದಲ್ಲಿ ಮಲತಾಯಿ ಧೋರಣೆ ನಡೆಸಿ ಅನ್ಯಾಯ ಮಾಡಿದ್ದರು. ಈಗ ಸಮಸ್ಯೆ ಬಗೆಹರಿದಿದೆ.
 ಪರಶುರಾಮ, ಅಧ್ಯಕ್ಷರು
 ಪ್ರಗತಿಪರ ಕಾರ್ಮಿಕರ ಸಂಘ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.