ಅಸ್ಸಾಂ: ಶಾಲೆಯಲ್ಲಿ ದನದ ಮಾಂಸ ಬೇಯಿಸಿದ ಆರೋಪ: ಶಿಕ್ಷಕ ಅರೆಸ್ಟ್
Team Udayavani, Oct 24, 2018, 5:26 PM IST
ಗುವಾಹಟಿ : ಶಾಲೆಯ ಅಡುಗೆ ಕೋಣೆಯಲ್ಲಿ ದನದ ಮಾಂಸ ಬೇಯಿಸಿದರೆಂಬ ಆರೋಪದ ಮೇಲೆ ಅಸ್ಸಾಂ ಮೂಲದ ಶಾಲಾ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ದರಾಂಗ್ ಜಿಲ್ಲೆಯ ದಳಗಾಂವ್ ಪಟ್ಟಣದಲ್ಲಿನ ದಾಖೀನ್ ದೂಲಿಪಾರಾ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ನಸೀರುದ್ದೀನ್ ಅಹ್ಮದ್ ಬಂಧಿತ ಶಿಕ್ಷಕ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟಕ್ಕಾಗಿ ಇವರು ದನದ ಮಾಂಸ ಬೇಯಿಸಿದರೆಂಬ ಆರೋಪಕ್ಕೆ ಗುರಿಯಾಗಿದ್ದಾರೆ.
ಕೆಲವು ಆರೋಪಿಸಿರುವ ಶಿಕ್ಷಕ ಅಹ್ಮದ್ ಅವರು ಕೆಲವು ಮಕ್ಕಳಿಗೆ ದನದ ಮಾಂಸದಡುಗೆಯನ್ನು ಬಡಿಸಿದ್ದಾರೆ. ಆದರೆ ಶಾಲಾಧಿಕಾರಿಗಳು ಈ ವಿಷಯವನ್ನು ಇನ್ನಷ್ಟೇ ದೃಢೀಕರಿಸಬೇಕಿದೆ.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಣಾಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಮಾಲಕ ವಿವಿಧ ಸಮುದಾಯಗಳಲ್ಲಿ ದ್ವೇಷವನ್ನು ಉತ್ತೇಜಿಸಲು ಶಿಕ್ಷಕ ಅಹ್ಮದ್ ಯತ್ನಿಸಿರುವುದಾಗಿ ಎಫ್ಐಆರ್ನಲ್ಲಿ ದೂರಲಾಗಿದೆ.
ದೇಶದ ಕೆಲವು ಭಾಗಗಳಲ್ಲಿ ಗೋಮಾಂಸ ನಿಷೇಧವಿದ್ದು ಈ ಬಗ್ಗೆ ಭಾರೀ ಹುಯಿಲೆಬ್ಬಿಸಲಾಗಿದೆ. ಇದನ್ನು ಉಲ್ಲೇಖೀಸಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಈ ವರ್ಷದ ಆದಿಯಲ್ಲಿ, “ದನದ ಮಾಂಸವನ್ನು ಯಾರೂ ತಿನ್ನಬಹುದು; ಆದರೆ ಅದರ ಸಂಭ್ರಮಾಚರಣೆಯ ಅಗತ್ಯ ಇಲ್ಲ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್