ಲೋಕಸಭಾ ಚುನಾವಣೆಗೂ ಮೈತ್ರಿ ಮುಂದುವರಿಕೆ: ಸಿದ್ದರಾಮಯ್ಯ
Team Udayavani, Oct 25, 2018, 6:00 AM IST
ಮಂಡ್ಯ: ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಕೇವಲ ಉಪ ಚುನಾವಣೆಗೆ ಮಾತ್ರ ಸೀಮಿತವಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆ. ಇದರ ಬಗ್ಗೆ ಈಗಾಗಲೇ ಮಾತುಕತೆ ನಡೆಸಿ ನಿರ್ಧಾರ ಮಾಡಿ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರು ಯಾವ ಪಕ್ಷಕ್ಕೂ ಬಹುಮತ ಕೊಡಲಿಲ್ಲ. ಕೋಮುವಾದಿ ಬಿಜೆಪಿ ಪಕ್ಷವನ್ನು ಹೊರಗಿಡಲು ಸಮ್ಮಿಶ್ರ ಸರ್ಕಾರ ರಚನೆ ಮಾಡಿದೆವು.
ಹೀಗಾಗಿ ನಾವು ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಈ ಹೊಂದಾಣಿಕೆ ಕೇವಲ ಉಪ ಚುನಾವಣೆಗೆ ಮಾತ್ರ ಸೀಮಿತವಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆ. ಇದರ ಬಗ್ಗೆ ಈಗಾಗಲೇ ಮಾತುಕತೆ ನಡೆಸಿ ನಿರ್ಧಾರ ಮಾಡಿ ಆಗಿದೆ. ಈ ವಿಷಯವಾಗಿ ಯಾರಲ್ಲೂ ಗೊಂದಲ, ಅಸಮಾಧಾನವಿಲ್ಲ. ಹಿಂದೆ ಆಗಿರುವುದನ್ನೆಲ್ಲಾ ಮರೆತಿದ್ದೇವೆ. ಮೈತ್ರಿ ಮಾಡಿಕೊಂಡ ಕಾರಣಕ್ಕೆ ಕಾಂಗ್ರೆಸ್ ದುರ್ಬಲ ಆಗೋಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಬಲಿಷ್ಠವಾಗಿದೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ನಾವೂ ಜೆಡಿಎಸ್ ವಿರುದ್ಧ ಕಠಿಣವಾಗಿ ಮಾತನಾಡಿದ್ದೇವೆ. ಅವರೂ ಕಠಿಣವಾಗಿ ಮಾತನಾಡಿದ್ದಾರೆ. ಅದೆಲ್ಲವನ್ನೂ ಮರೆಯಬೇಕು. ಜೆಡಿಎಸ್ ವಿರೋಧಿ ಮನಸ್ಥಿತಿಗಳನ್ನು ಒಗ್ಗೂಡಿಸುವ ಕೆಲಸ ಇಂದಿನಿಂದಲೇ ಆರಂಭವಾಗಲಿದೆ.
– ಸಿದ್ದರಾಮಯ್ಯ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!