ಅಮ್ಮನ ವಿರುದ್ಧ ದೂರುನೀಡಲ್ಲ ಅಂದಿದ್ದಕ್ಕೆ ಹಲ್ಲೆ
Team Udayavani, Oct 25, 2018, 11:10 AM IST
ಬೆಂಗಳೂರು: ನಟ ದುನಿಯಾ ವಿಜಯ್ ಮತ್ತು ಅವರ ಎರಡನೇ ಪತ್ನಿ ಕೀರ್ತಿ ಗೌಡ ಮತ್ತಿತರರು ತನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ದುನಿಯಾ ವಿಜಯ್ ಪುತ್ರಿ ಮೋನಿಕಾ, ಬುಧವಾರ ಮಧ್ಯಾಹ್ನ ಆಸ್ಪತ್ರೆಯಿಂದ ಡಿಸಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಮೋನಿಕಾ, “ನಾನು ಸುಳ್ಳು ದೂರು ನೀಡಿಲ್ಲ. ನನ್ನ ಮೇಲೆ ಹಲ್ಲೆ ಆಗಿರುವ ಕಾರಣ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೇನೆ. ನಾಲ್ಕು ಜನ ಸೇರಿ ನನ್ನನ್ನು ಹೊಡೆದರು. ಕೀರ್ತಿ ವಿಚಾರವಾಗಿಯೇ ಗಲಾಟೆ ನಡೆದಿರುವುದು’ ಎಂದಿರುವ ಮೋನಿಕಾ, “ನನಗೆ ಮೊದಲಿನಿಂದಲೂ ಕೀರ್ತಿ ಪರ ಮಾತನಾಡು, ನಿಮ್ಮ ಅಮ್ಮನ ವಿರುದ್ಧ ಕಂಪ್ಲೇಂಟ್ ಕೊಡು ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದರು. ನಾನು ಅದಕ್ಕೆ ಒಪ್ಪದಿದ್ದಾಗ ಎಲ್ಲರೂ ಸೇರಿ ನನ್ನ ಮೇಲೆ ಹಲ್ಲೆ ಮಾಡಿದರು,’ ಎಂದರು.
“ಆಮೇಲೆ ನನನ್ನು ಮನೆಯಿಂದ ಹೊರಗೆ ಹಾಕಿ ಬಾಗಿಲು ಹಾಕಿದ್ರು. ಆಗ ನನ್ನ ಕೋಪವನ್ನು ಬಾಗಿಲ ಮೇಲೆ ತೋರಿಸಿದೆ. ಅವರು ಬೈದ ಮಾತನ್ನೆ ತಿರುಗಿಸಿ ಅವರಿಗೆ ಬೈದಿದ್ದೇನೆ. ಅದನ್ನು ಹೊರತುಪಡಿಸಿದರೆ, ನಾನು ಯಾರ ಮೇಲೂ ಹಲ್ಲೆ ಮಾಡಿಲ್ಲ. ನನ್ನನ್ನು ಮನೆಯಿಂದ ಆಚೆ ಹಾಕಲು ಎಲ್ಲರೂ ಸೇರಿ ಈ ರೀತಿ ಪ್ಲಾನ್ ಮಾಡಿದ್ದಾರೆ’ ಎಂದು ಮೋನಿಕಾ ತನ್ನ ತಂದೆ ದುನಿಯಾ ವಿಜಯ್ ಮತ್ತು ಕೀರ್ತಿ ಗೌಡ ವಿರುದ್ಧ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ