ಲಿಂಗಾಯತ ಧರ್ಮದ ನಿಷ್ಠುರ ನಿಲುವು ಅಗತ್ಯ: ದತ್ತಾ


Team Udayavani, Oct 25, 2018, 1:04 PM IST

blore-13.jpg

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಖಚಿತ ಹಾಗೂ ಸ್ಪಷ್ಟ ನಿಲುವು ಹೊಂದಿದ್ದ ಗದುಗಿನ ತೋಂಟದಾರ್ಯ ಸ್ವಾಮೀಜಿಯರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಕೆಯಾಗಬೇಕಾದರೆ “ಲಿಂಗಾಯತ ಧರ್ಮವನ್ನು ಹಿಂದೂ ಧರ್ಮದ ಕಳಂಕಗಳಿಂದ ಮುಕ್ತ ಮಾಡುವ ಬಗ್ಗೆ
ನಿಷ್ಠುರವಾದ ನಿಲುವು ತೆಗೆದುಕೊಳ್ಳುವ ಅಗತ್ಯವಿದೆ’ ಎಂದು ಮಾಜಿ ಶಾಸಕ ವೈ.ಎಸ್‌.ವಿ.ದತ್ತಾ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಹಿತ್ಯ ಪರಿಷತ್ತಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಗದುಗಿನ ತೋಂಟದಾರ್ಯ ಸಂಸ್ಥಾನ ಮಠದ ಡಾ. ಶ್ರೀ ತೋಂಟದ ಸಿದ್ಧಲಿಂಗ ಸ್ವಾಮಿಯವರ ಶ್ರದ್ಧಾಂಜಲಿ, ನುಡಿನಮನ-ಗೀತ ನಮನ ಕಾರ್ಯಕ್ರಮದಲ್ಲಿ ಸ್ವಾಮೀಜಿಗೆ ನುಡಿ ನಮನ ಸಲ್ಲಿಸಿ ಮಾತನಾಡಿದರು. 

ಲಿಂಗಾಯತ ಧರ್ಮದ ಬಗ್ಗೆ ಸ್ವತಂತ್ರವಾದ ಮತ್ತು ಸ್ಪಷ್ಟವಾದ ಧೋರಣೆ ತೋಂಟದಾರ್ಯ ಸ್ವಾಮೀಜಿಯವರಿಗೆ ಇತ್ತು. ಅದೇ ಸ್ಪಷ್ಟತೆ ಉಳಿದವರಿಗೆ ಬಂದಿಲ್ಲ. ಈಗ ಅವರು ನಮ್ಮ ನಡುವೆ ಇಲ್ಲದ ಸಂದರ್ಭದಲ್ಲಿ ಆ ಸ್ಪಷ್ಟತೆ ಮತ್ತಷ್ಟು ಗರಿಗೆದರಬೇಕಾಗಿದೆ. ಬಸವಣ್ಣ ಮತ್ತು ಅಲ್ಲಮ ಪ್ರಭುವಿನ ಉತ್ತರಾಧಿಕಾರಿಗಳು ಅಥವಾ ವಾರಸುದಾರರು ಎಂದು ಹೇಳಿಕೊಳ್ಳುವವರು ಈ ವಿಚಾರದಲ್ಲಿ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
 
ಲಿಂಗಾಯತ ಧರ್ಮದ ಬಗ್ಗೆ ಸ್ಪಷ್ಟ ಮಾರ್ಗಸೂಚಿಗಳ ಇಟ್ಟುಕೊಂಡು ಹಿಂದೂ ಧರ್ಮದ ಅವೈಚಾರಿಕ ಮತ್ತು ಅವೈಜ್ಞಾನಿಕ ಸಂಪ್ರದಾಯಗಳನ್ನು ಸ್ಪಷ್ಟವಾಗಿ ವಿರೋಧಿಸಿ, ಧಿಕ್ಕರಿಸದೇ ಹೋದರೆ ಬಸವಣ್ಣನ ಅನುಯಾಯಿಗಳು ಎಂದು ಕರೆಸಿಕೊಳ್ಳುವ ನೈತಿಕತೆ ಇರುವುದಿಲ್ಲ. ಲಿಂಗಾಯತ ಧರ್ಮದ ಬಗ್ಗೆ ಪ್ರಗತಿಪರ ವಿಚಾರ ಹಾಗೂ ವೈಚಾರಿಕ ಚಿಂತನೆ ಇಟ್ಟುಕೊಂಡು ವೈದಿಕ ಸಂಪ್ರದಾಯವನ್ನು 12ನೇ ಶತಮಾನದಲ್ಲಿ ವಿರೋಧಿಸಿದ್ದ ಬಸವಣ್ಣನ ತತ್ವಗಳಿಗೆ ತೋಂಟದಾರ್ಯರು ಮಾದರಿಯಾಗಿದ್ದರು ಎಂದರು.
 
ದೇವರ ದಾಸಿಯ್ಯ, ಡೊಹರ ಹಕ್ಕಯ್ಯ ಮುಂತಾದ ಹೆಸರುಗಳನ್ನು ಕೇವಲ ಪ್ರಾಸಕ್ಕೆ ಹೇಳಿಕೊಳ್ಳದೇ ಶೋಷಿತ ಸಮುದಾಯಗಳನ್ನು ತಮ್ಮವರೆಂಬ ಭಾವನೆ ಬಸವಣ್ಣನ ಧರ್ಮವನ್ನು ಗುತ್ತಿಗೆ ಪಡೆದ ಜಾತಿಯವರಿಗೆ ಬರಬೇಕು. ಸನಾತನವಾದವೇ ರಾಷ್ಟ್ರಭಕ್ತಿ ಹಾಗೂ ರಾಷ್ಟ್ರೀಯತೆಯ ಅಸ್ಮಿತೆ ಎಂದು ಹೇಳಿಕೊಳ್ಳುವ ಈ ಸಂದರ್ಭದಲ್ಲಿ ಹಿಂದೂ ಧರ್ಮದ ಕಳಂಕಗಳನ್ನು ವಿರೋಧಿಸುವ ನೇರ ನಿಷ್ಟುರತೆ ಅಲ್ಲದಿದ್ದರೂ ಸಹಿಸಿಕೊಳ್ಳುವ ಹೃದಯವಂತಿಕೆ ಇರಬೇಕು ಎಂದು ತಿಳಿಸಿದರು.

ಕೂಡಲಸಂಗಮ ಕ್ಷೇತ್ರದ ಪಂಚಮಸಾಲಿ ಲಿಂಗಾಯತ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬೇಲಿಮಠದ ಶಿವರುದ್ರಮಹಾಸ್ವಾಮಿ, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್‌. ಶಂಕರ್‌, ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ, ಸಾಹಿತಿ ಡಾ. ಗೊ.ರು. ಚನ್ನಬಸಪ್ಪ, ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವರಾಜ ಸಾದರ ನುಡಿನಮನ ಸಲ್ಲಿಸಿದರು. ಗಾಯಕರಾದ ರವೀಂದ್ರ ಸೊರಗಾವಿ ಹಾಗೂ ಸಂಗೀತ ಕಟ್ಟಿ ಕುಲಕರ್ಣಿ ಗೀತ ನಮನ ಸಲ್ಲಿಸಿದರು. ಕೆ.ವಿ. ನಾಗರಾಜಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.