ದುರಹಂಕಾರ ಹುತ್ತದಿಂದ ಹೊರ ಬನ್ನಿ


Team Udayavani, Oct 25, 2018, 1:19 PM IST

blore-15.jpg

ಕಲಬುರಗಿ: ಜಗತ್ತಿನಲ್ಲಿ ಭಾರತವನ್ನು ರಾಮಾಯಣ ಹಾಗೂ ಮಹಾಭಾರತ ಮಹಾಕಾವ್ಯಗಳಿಂದಲೇ ಇಂದಿಗೂ ಗುರುತಿಸಲಾಗುತ್ತಿದ್ದು, ಮಹರ್ಷಿ ವಾಲ್ಮೀಕಿ ರಾಮಾಯಣ ರಚಿಸದೆ ಹೋಗಿದ್ದರೆ ದೇಶದಲ್ಲಿ ರಾಮರಾಜ್ಯ ಹಾಗೂ ಬಂಧುತ್ವದ ಪರಿಕಲ್ಪನೆಯೇ ಇರುತ್ತಿರಲಿಲ್ಲ ಎಂದು ರಾಷ್ಟ್ರೋತ್ಥಾನ ಶಾಲೆ ಆಡಳಿತಾಧಿಕಾರಿ ಕೃಷ್ಣ ಜೋಷಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಡಾ| ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. 

ರತ್ನಾಕರನಾಗಿದ್ದ ವಾಲ್ಮೀಕಿ ಜ್ಞಾನ ಸಂಪಾದನೆಗಾಗಿ ತಪಸ್ಸು ಕುಳಿತಾಗ ವಾಲ್ಮೀಕ (ಹುತ್ತ)ಬೆಳೆಯಿತು. ಆದ್ದರಿಂದ ಆತನ ಹೆಸರು ವಾಲ್ಮೀಕಿ ಆಯಿತು. ನಂತರ ಹುತ್ತದಿಂದ ಹೊರಬಂದ ವಾಲ್ಮೀಕಿ ನಾರದ ಮುನಿಯಿಂದ ಜ್ಞಾನ ಪಡೆದು 24 ಸಾವಿರ ಶ್ಲೋಕಗಳನ್ನು ಹೊಂದಿರುವ ರಾಮಾಯಣ
ಮಹಾಕಾವ್ಯ ರಚಿಸಿದ ಎಂದರು.

ರಾಮಾಯಣದ ಮೂಲಕ ಸಮಾಜಕ್ಕೆ ಸಭ್ಯ ಸಂಸ್ಕಾರವನ್ನು ವಾಲ್ಮೀಕಿ ನೀಡಿದ್ದು, ಸ್ವಾರ್ಥ, ದುರಹಂಕಾರವೆಂಬ ಹುತ್ತದಿಂದ ಜನತೆ ಹೊರ ಬರಬೇಕು. ಕೊಲೆ, ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಾದ ಇಂತಹ ಪರಿಸ್ಥಿತಿಯಲ್ಲಿ ರಾಮಯಾಣವನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.

ದೇಶದಲ್ಲಿ ಮಾತ್ರವಲ್ಲದೇ ರಾಜ್ಯದಲ್ಲೂ ವಾಲ್ಮೀಕಿ ಸಮುದಾಯದ ವೀರರು, ರಾಜ, ಮಹಾರಾಜರು ಆಳ್ವಿಕೆ ಮಾಡಿರುವ ಉದಾಹರಣೆಗಳಿವೆ. ಸ್ವಾತಂತ್ರ್ಯ ಹೋರಾಟದಲ್ಲೂ ವಾಲ್ಮೀಕಿ ಸಮುದಾಯ ಮಹತ್ವದ ಪಾತ್ರ ವಹಿಸಿದೆ. ವಾಲ್ಮೀಕಿ ಜನಾಂಗದ ವಂಶಾವಳಿಯಲ್ಲಿಯೆ ವೀರತ್ವ, ಶೂರತ್ವವಿದೆ. ದೇಶ ಸೇವೆಯಲ್ಲಿ ಸಮುದಾಯದ ಯುವಕರು ತೊಡಗಿಕೊಳ್ಳಲು ವಿಶೇಷ ಅವಕಾಶ ಮಾಡಿಕೊಡಬೇಕು ಹಾಗೂ ಸೇನೆಯಲ್ಲಿ ಸಿಖ್‌ ರೆಜಿಮೆಂಟ್‌ನಂತೆ ನಾಯಕ ರೆಜಿಮೆಂಟ್‌ ಸ್ಥಾಪಿಸಬೇಕೆಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ರಾಮಾಯಾಣ ಮಹಾಕಾವ್ಯದ ಮೂಲಕ ಶ್ರೀರಾಮನ ದರ್ಶನ ಮಾಡಿಸಿದ ಹಾಗೂ ರಾಮರಾಜ್ಯದ ಕಲ್ಪನೆ ನೀಡಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ಮಹರ್ಷಿ ವಾಲ್ಮೀಕಿ ಚಿಂತನೆಗಳನ್ನು ಎಲ್ಲರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.

ವಾಲ್ಮೀಕಿ ಸಮಾಜದ ಬೇಡಿಕೆಯಾದ ಮೀಸಲಾತಿ ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ನಗರದಲ್ಲಿ ವಾಲ್ಮೀಕಿ ಪ್ರತಿಮೆ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು. ಇದಕ್ಕೆ ಬೇಕಾದ ಸಹಕಾರವನ್ನು ನೀಡುತ್ತೇನೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಮೇಯರ್‌ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ ಉದ್ಘಾಟಿಸಿದರು. ಇದೇ ವೇಳೆ ಲೇಖಕ ಡಾ| ಎಚ್‌.ಕೆ. ನರಸಿಂಹಮೂರ್ತಿ ಅವರ “ಕುವೆಂಪು ಕಂಡ ವಾಲ್ಮೀಕಿ’ ಪುಸ್ತಕವನ್ನು ಗಣ್ಯರು ಬಿಡುಗಡೆಗೊಳಿಸಿದರು. ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ, ಪಾಲಿಕೆ ಆಯುಕ್ತ ಪೆದ್ದಪ್ಪಯ್ಯ ಆರ್‌. ಎಸ್‌., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ.ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕಲಬುರಗಿ ಜಿಲ್ಲಾ ವಾಲ್ಮೀಕಿ ನೌಕಕರ ಸಂಘದ ಗೌರವಾಧ್ಯಕ್ಷ ಅಮರೇಶ ಜಾಗಿರದಾರ, ಹೈ.ಕ ವಾಲ್ಮೀಕಿ ಸಮಾಜದ ಅಧ್ಯಕ್ಷ ನಂದಕುಮಾರ ಮಾಲಿಪಾಟೀಲ ಹಾಜರಿದ್ದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್‌. ಸತೀಶ ಸ್ವಾಗತಿಸಿದರು, ರಾಜಶೇಖರ ನಿರೂಪಿಸಿದರು. ಇದಕ್ಕೂ ಮುನ್ನ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ರಂಗಮಂದಿರದವರೆಗೆ ಜರುಗಿದ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಭವ್ಯ ಮೆರವಣಿಗೆಗೆ ಜಿಪಂ ಅಧ್ಯಕ್ಷೆ ಸುವರ್ಣಾ
ಹಣಮಂತರಾಯ ಮಲಾಜಿ ಚಾಲನೆ ನೀಡಿದರು.  

ಟಾಪ್ ನ್ಯೂಸ್

RCB (2)

IPL Eliminator ಪಂದ್ಯ; ಅಭ್ಯಾಸವನ್ನು ಕೈಬಿಟ್ಟ ಆರ್ ಸಿಬಿ: ಉಗ್ರ ಬೆದರಿಕೆ ಕಾರಣವೇ?

Hemant

Supreme Court ತಪರಾಕಿ: ಬಂಧನದ ವಿರುದ್ಧದ ಮನವಿ ಹಿಂಪಡೆದ ಹೇಮಂತ್ ಸೊರೇನ್!

8-rishab-3

Rishab Shetty: ಇತಿಹಾಸ ಪ್ರಸಿದ್ಧ ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ

EC

BJP,Congress ಸೇರಿ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಚುನಾವಣ ಆಯೋಗ

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

kejriwal

Kejriwal ಕುರಿತು ವಿವಿಧ ಗೀಚುಬರಹ: ಬ್ಯಾಂಕ್‌ ಮ್ಯಾನೇಜರ್ ಬಂಧಿಸಿದ ಪೊಲೀಸರು

isrel netanyahu

Palestine ‘ರಾಷ್ಟ್ರ’: ಐರ್ಲೆಂಡ್, ನಾರ್ವೆ, ಸ್ಪೇನ್ ನಿಂದ ಇಸ್ರೇಲ್ ರಾಯಭಾರಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

RCB (2)

IPL Eliminator ಪಂದ್ಯ; ಅಭ್ಯಾಸವನ್ನು ಕೈಬಿಟ್ಟ ಆರ್ ಸಿಬಿ: ಉಗ್ರ ಬೆದರಿಕೆ ಕಾರಣವೇ?

ಮಂಗಳೂರು: ನಗರದ ನಡುವೆಯೇ ಸೃಷ್ಟಿಯಾಗಿದೆ ದಟ್ಟ ಅರಣ್ಯ!

ಮಂಗಳೂರು: ನಗರದ ನಡುವೆಯೇ ಸೃಷ್ಟಿಯಾಗಿದೆ ದಟ್ಟ ಅರಣ್ಯ!

Hemant

Supreme Court ತಪರಾಕಿ: ಬಂಧನದ ವಿರುದ್ಧದ ಮನವಿ ಹಿಂಪಡೆದ ಹೇಮಂತ್ ಸೊರೇನ್!

8-rishab-3

Rishab Shetty: ಇತಿಹಾಸ ಪ್ರಸಿದ್ಧ ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ

EC

BJP,Congress ಸೇರಿ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.