ಒಪ್ಪಂದ; ಇನ್ಮುಂದೆ ರಿಲಯನ್ಸ್ ಡಿಜಿಟಲ್ ಮಳಿಗೆಯಲ್ಲೂ ಒನ್ ಪ್ಲಸ್ ಲಭ್ಯ


Team Udayavani, Oct 25, 2018, 4:35 PM IST

oneplus.jpg

ಮುಂಬೈ: ದೇಶದ ನಂ. ಒನ್ ಹಾಗೂ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕನ್ಸ್ಯೂಮರ್ ಇಲೆಕ್ಟ್ರಾನಿಕ್ಸ್ ಮಾರಾಟ ಸಂಸ್ಥೆ ರಿಲಯನ್ಸ್ ಡಿಜಿಟಲ್  ಜೊತೆಗೆ ಅಧಿಕ ಮೌಲ್ಯದ (ಪ್ರೀಮಿಯಂ) ಸ್ಮಾರ್ಟ್‌ಫೋನುಗಳ ನಿರ್ಮಾತೃ ಒನ್‌ಪ್ಲಸ್ ಒಪ್ಪಂದ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಇನ್ಮುಂದೆ ರಿಲಯನ್ಸ್ ಡಿಜಿಟಲ್ ಮಳಿಗೆಯಲ್ಲೂ ಒನ್ ಪ್ಲಸ್ ಲಭ್ಯವಾಗಲಿದೆ.

ಗ್ರಾಹಕರು ದೇಶದೆಲ್ಲೆಡೆಯ ನಗರಗಳಲ್ಲಿ ಒನ್‌ಪ್ಲಸ್ ಮೊಬೈಲ್ ಫೋನುಗಳನ್ನು ಬಳಸಿ ನೋಡಲು ಹಾಗೂ ಕೊಂಡುಕೊಳ್ಳಲು, ಒನ್‌ಪ್ಲಸ್ ಹಾಗೂ ರಿಲಯನ್ಸ್ ಡಿಜಿಟಲ್ ಸಂಸ್ಥೆಗಳು ಈ ಸಹಭಾಗಿತ್ವದ ಮೂಲಕ ಹೆಚ್ಚಿನ ಸಂಖ್ಯೆಯ ಕೇಂದ್ರಗಳನ್ನು ಒದಗಿಸುತ್ತಿವೆ.

ಆಫ್‌ಲೈನ್ ಚಾನೆಲ್ ಪಾರ್ಟ್‌ನರ್ ರೂಪದಲ್ಲಿ ರಿಲಯನ್ಸ್ ಡಿಜಿಟಲ್‌ನ ಪ್ರವೇಶದೊಡನೆ, ಅನುಕೂಲಕರ ಸ್ಥಳಗಳಲ್ಲಿರುವ ಮಳಿಗೆಗಳಲ್ಲಿ ಒನ್‌ಪ್ಲಸ್ ಉತ್ಪನ್ನಗಳನ್ನು ಬಳಸಿ ನೋಡುವ, ಆನ್‌ಲೈನ್‌ನಷ್ಟೇ ಬೆಲೆಯಲ್ಲಿ ಕೊಳ್ಳುವ ಅವಕಾಶ ಗ್ರಾಹಕರಿಗೆ ದೊರಕಲಿದೆ. ಇದರ ಜೊತೆಗೆ ಅವರು ರಿಲಯನ್ಸ್ ಡಿಜಿಟಲ್ ಮಳಿಗೆಗಳಲ್ಲಿ ನಡೆಸಲಾಗುವ ಪ್ರಚಾರ ಅಭಿಯಾನಗಳ ಲಾಭವನ್ನೂ ಪಡೆದುಕೊಳ್ಳಬಹುದಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಒನ್‌ಪ್ಲಸ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕ ವಿಕಾಸ್ ಅಗರ್‌ವಾಲ್, “ಭಾರತದಲ್ಲಿ ಅಧಿಕ ಮೌಲ್ಯದ (ಪ್ರೀಮಿಯಂ) ಸ್ಮಾರ್ಟ್‌ಫೋನುಗಳ ಮಾರುಕಟ್ಟೆ ಏಕಪ್ರಕಾರವಾಗಿ ಬೆಳೆಯುತ್ತಿದ್ದು, ಆನ್‌ಲೈನ್ ಮತ್ತು ಆಫ್‌ಲೈನ್ ವೇದಿಕೆಗಳೆರಡನ್ನೂ ಪರಿಣಾಮಕಾರಿಯಾಗಿ ಬಳಸಿಕೊಂಡು ಗ್ರಾಹಕರನ್ನು ತಲುಪುವ ಮೂಲಕ ಒನ್‌ಪ್ಲಸ್ ಈ ಮಾರುಕಟ್ಟೆಯಲ್ಲಿ ಬೆಳೆಯಲು ಬಯಸುತ್ತದೆ. ರಿಲಯನ್ಸ್ ಡಿಜಿಟಲ್ ಜೊತೆಗಿನ ಈ ಸಹಭಾಗಿತ್ವದಿಂದಾಗಿ, ಹಲವು ನಗರಗಳಲ್ಲಿ ಬೆಳೆಯುತ್ತಿರುವ ತನ್ನ ಗ್ರಾಹಕ ಸಮುದಾಯವನ್ನು ಹೆಚ್ಚು ಸಶಕ್ತವಾದ ಭೌತಿಕ ಅಸ್ತಿತ್ವದೊಡನೆ ತಲುಪುವುದು ಒನ್‌ಪ್ಲಸ್‌ಗೆ ಸಾಧ್ಯವಾಗುತ್ತದೆ. ಗ್ರಾಹಕರಿಗೆ ಅತ್ಯುತ್ತಮ ಅನುಭವವನ್ನು ಮಾತ್ರ ನೀಡುವ ರಿಲಯನ್ಸ್ ಡಿಜಿಟಲ್‌ನ ಗುರಿ ಹಾಗೂ ಒನ್‌ಪ್ಲಸ್‌ನ ಗ್ರಾಹಕಪರ ಸಿದ್ಧಾಂತಕ್ಕೆ ಉತ್ತಮ ಹೊಂದಾಣಿಕೆ ಇದೆ.” ಎಂದರು.

ಈ ಸಹಭಾಗಿತ್ವ ಕುರಿತು ವಿವರಿಸಿದ ರಿಲಯನ್ಸ್ ಡಿಜಿಟಲ್‌ನ ಸಿಇಓ ಬ್ರಿಯಾನ್ ಬೇಡ್, “ಒನ್‌ಪ್ಲಸ್ ಜೊತೆಗೆ ನಮ್ಮ ಸಹಭಾಗಿತ್ವವನ್ನು ಘೋಷಿಸಲು ರಿಲಯನ್ಸ್ ಡಿಜಿಟಲ್ ಸಂತೋಷಿಸುತ್ತದೆ. ನಾವು ಮಾರಾಟ ಮಾಡುವ ಉತ್ಪನ್ನಗಳ ಸಾಲಿಗೆ ಒನ್‌ಪ್ಲಸ್ 6Tಯನ್ನು ಸೇರಿಸಿಕೊಳ್ಳುವ ಮೂಲಕ, ಗ್ರಾಹಕರು ತಮ್ಮ ತಂತ್ರಜ್ಞಾನದ ಅಗತ್ಯಗಳನ್ನು ಪೂರೈಸಿಕೊಳ್ಳಲು ಅವರಿಗೆ ವಿಶ್ವದರ್ಜೆಯ ರೀಟೇಲ್ ಅನುಭವ ನೀಡುವ ನಮ್ಮ ನಿರಂತರ ಪ್ರಯತ್ನದ ಕುರಿತು ಮತ್ತೊಮ್ಮೆ ಹೇಳಲು ಬಯಸುತ್ತಿದ್ದೇವೆ.” ಎಂದು ಹೇಳಿದರು.

ಭಾರತೀಯ ಮಾರುಕಟ್ಟೆಯ ಕುರಿತು ತನ್ನ ಬದ್ಧತೆಯನ್ನು ಪುನರುಚ್ಚರಿಸಿರುವ ಒನ್‌ಪ್ಲಸ್ ಪಾಲಿಗೆ ರಿಲಯನ್ಸ್ ಡಿಜಿಟಲ್ ಜೊತೆಗಿನ ಈ ಒಪ್ಪಂದವು ಮತ್ತೊಂದು ಜಾಗತಿಕ ಪ್ರಥಮ ಸಾಧನೆಯಾಗಿದೆ. ಕೌಂಟರ್‌ಪಾಯಿಂಟ್‌ ಮಾರ್ಕೆಟ್ ಮಾನಿಟರ್ ಸರ್ವಿಸ್‌ನ 2018ರ ಎರಡನೇ ತ್ರೈಮಾಸಿಕ ವರದಿಯ ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಶೇ. 40ಕ್ಕೂ ಹೆಚ್ಚಿನ ಪಾಲಿನೊಡನೆ ಅಧಿಕ ಮೌಲ್ಯದ (ಪ್ರೀಮಿಯಂ) ಸ್ಮಾರ್ಟ್‌ಫೋನುಗಳ ಅತಿದೊಡ್ಡ ನಿರ್ಮಾತೃ ಎಂಬ ಹೆಗ್ಗಳಿಕೆಗೆ ಒನ್‌ಪ್ಲಸ್ ಪಾತ್ರವಾಗಿದೆ.

ಈ ಸಹಭಾಗಿತ್ವದ ಅನ್ವಯ, ಒನ್‌ಪ್ಲಸ್ ಹಾಗೂ ರಿಲಯನ್ಸ್ ಡಿಜಿಟಲ್ ಸಂಸ್ಥೆಗಳು ಗ್ರಾಹಕರ ಅನುಕೂಲಕ್ಕಾಗಿ ಲೈವ್ ಡೆಮೋ ಫೋನುಗಳೊಡನೆ ಪ್ರತ್ಯೇಕ ಎಕ್ಸ್‌ಪೀರಿಯೆನ್ಸ್ ಜೋನ್‌ಗಳನ್ನು ರೂಪಿಸಲಿವೆ. ಈ ಕೇಂದ್ರಗಳಲ್ಲಿ ತರಬೇತಿ ಹೊಂದಿದ ಸಿಬ್ಬಂದಿ ಕೂಡ ಇರಲಿದ್ದು ಗ್ರಾಹಕರು ಒನ್‌ಪ್ಲಸ್ ಸಾಧನಗಳನ್ನು ಕುರಿತ ತಮ್ಮ ಪ್ರಶ್ನೆಗಳಿಗೆ ಅವರಿಂದ ನೇರವಾಗಿ ಉತ್ತರ ಪಡೆದುಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.