ಭಜಂತ್ರಿ ಸಮಾಜ ಏಳ್ಗೆಗೆ ಶ್ರಮಿಸುವೆ: ಮನಗೂಳಿ


Team Udayavani, Oct 26, 2018, 11:06 AM IST

ray-3.jpg

ಸಿಂದಗಿ: ಭಜಂತ್ರಿ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತೋಟಗಾರಿಕೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ ಹೇಳಿದರು.

ಗುರುವಾರ ವಿದ್ಯಾನಗರದ 4ನೇ ಕ್ರಾಸ್‌ ನಲ್ಲಿರುವ ಭಜಂತ್ರಿ ಲೇಔಟ್‌ನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ರಾಂಪುರ ಪಿ.ಎ., ಎಸ್‌ ಸಿಪಿ ಯೋಜನೆ ಅಡಿಯಲ್ಲಿ ನಿರ್ಮಿಸಲಾಗುವ ಭಜಂತ್ರಿ (ಕೊರಮ) ಸಮಾಜದ ಗುರು ಶರಣ ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಭಜಂತ್ರಿ ಸಮಾಜ ಕಾಯಕ ಜೀವಿಗಳು. ಎಲ್ಲ ಶುಭ ಕಾರ್ಯಕ್ರಮಗಳಿಗೆ ಭಜಂತ್ರಿ ಸಮುದಾಯ ಪ್ರಮುಖರಾಗಿರುತ್ತಾರೆ. 

ಎಲ್ಲ ಸಮುದಾಯದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಜೀವನ ಸಾಗಿಸುವ ಸಮುದಾಯವಾಗಿದೆ. ಈ ಸಮುದಾಯಕ್ಕೆ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡ ಗುಣಮಟ್ಟದಿಂದ ಮತ್ತು ಶೀಘ್ರದಲ್ಲಿ ಪೂರ್ಣಗೊಳ್ಳಬೇಕು. ಸರಕಾರದಿಂದ ಈಗಾಗಲೇ 50 ಲಕ್ಷ ಅನುದಾನ ನೀಡಲಾಗಿದ್ದು, ಇನ್ನೂ ಹೆಚ್ಚಿಗೆ ಬೇಕಾದಲ್ಲಿ ಅನುದಾನ ಬಿಡುಗಡೆ ಮಾಡುತ್ತೇನೆ ಎಂದರು.

ನೀವು ನನಗೆ ಮತ ನೀಡಿದ ಫಲವಾಗಿ ನಾನು ಮಂತ್ರಿಯಾಗಿದ್ದೇನೆ. ಈ ಮಂತ್ರಿ ಸ್ಥಾನ ನನ್ನ ಮನೆತನಕ್ಕೆ ಮತ್ತು ಮಕ್ಕಳಿಗಲ್ಲ. ಏನೇ ಇದ್ದರು ಜನರ ಸೇವೆಗಾಗಿ. ಆನರ ಅಭಿವೃದ್ಧಿಗಾಗಿದೆ. ಆದ್ದರಿಂದ ಸಮುದಾಯದ ಅಭಿವೃದ್ಧಿಗಾಗಿ ಹೇಳಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಸಮಾಜದ ಹಿರಿಯ ಎಸ್‌.ಬಿ. ಭಜಂತ್ರಿ ಮಾತನಾಡಿ, ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡದ ಸರಕಾರ ನೀಡಿದ ಅನುದಾನ ಸಾಲದು, ಹೆಚ್ಚಿನ ಅನುದಾನ ನೀಡಬೇಕು. ಪರಿಶಿಷ್ಟ ಜಾತಿಯಲ್ಲಿ ಬರುವ ನಮ್ಮ ಸಮುದಾಯ ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ. ಆದ್ದರಿಂದ ಸರಕಾರಿ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ನಮ್ಮ ಸಮುದಾಯಕ್ಕೂ ಪ್ರಾಧಾನ್ಯತೆ ನೀಡಬೇಕು ಎಂದರು.

ಇದೇ ಸಂದರ್ಬಧಲ್ಲಿ ಭಜಂತ್ರಿ (ಕೊರಮ) ಸಮಾಜದ ಅಭಿವೃದ್ಧಿಗೆ ಬೇಕಾದ ಬೇಡಿಕೆಗಳ ಈಡೇರಿಕೆಗೆ ಸಮುದಾಯದ ಮುಖಂಡರು ತೋಟಗಾರಿಕೆ ಸಚಿವರಿಗೆ ಮನವಿ ಸಲ್ಲಿಸಿದರು. ಭೂಸೇನಾ ಅಭಿಯಂತರ ಗಂಗಾಧರ ಮಾತನಾಡಿ, ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡದ ನಿರ್ಮಾಣ ಮಾಡುವಲ್ಲಿ ಸಮುದಾಯದ ಜನರ ಸಹಕಾರ ಅಗತ್ಯ ಎಂದರು. ಶಿವಮೂರ್ತಯ್ಯ ಮಠಪತಿ, ಭೀಮಣ್ಣ ಇಂಚಗೇರಿ, ಮೋಹನದಾಸ ಭಜಂತ್ರಿ, ಅಧ್ಯಕ್ಷತೆ ವಹಿಸಿದ ಸಮಾಜದ ಅಧ್ಯಕ್ಷ ನರಸಪ್ಪ ಭಜಂತ್ರಿ ಇತರರು ಇದ್ದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.