ಬರಗಾಲಕ್ಕೆ ಬೆದರಿ ಗ್ರಾಮ ಬಿಡಬೇಡಿ


Team Udayavani, Oct 26, 2018, 3:09 PM IST

gul-6.jpg

ಆಳಂದ: ಸಕಾಲದಲ್ಲಿ ಮಳೆ ಬಾರದೆ ಬಿತ್ತಿದ ಬೆಳೆ ಕಳೆದುಕೊಂಡ ರೈತರು ನಿರಾಶರಾಗಿ ಕೂಲಿ ಕೆಲಸಕ್ಕೆ ಗ್ರಾಮ ತೊರೆಯಬಾರದು. ಉದ್ಯೋಗ ಖಾತ್ರಿ ಯೋಜನೆಯಡಿ ನೀಡುವ ಕೂಲಿ ಕೆಲಸದ ಲಾಭ ಪಡೆಯಬೇಕು ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಾಬುಗೌಡ ಪಾಟೀಲ ಕಾರ್ಮಿಕರಲ್ಲಿ ಮನವಿ ಮಾಡಿದರು.

ತಾಲೂಕಿನ ಮಾಡಿಯಾಳ ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ನಿರ್ವಹಣೆ ಉಸ್ತುವಾರಿ ವಹಿಸಿ ಅವರು ಮಾತನಾಡಿದರು. ಕೂಲಿ ಕೆಲಸಕ್ಕಾಗಿ ಪುಣೆ, ಮುಂಬೈ ಹಾಗೂ ಇನ್ನಿತರ ವಾಣಿಜ್ಯ ನಗರಗಳಿಗೆ ವಲಸೆ ಹೋಗುವುದು ಬೇಡ, ಗ್ರಾಮದಲ್ಲಿ ಇರುವ ಸರ್ಕಾರದ ಕೆಲಸದಲ್ಲಿ ತೊಡಗಿ ಅನುಕೂಲ ಮಾಡಿಕೊಳ್ಳಿ. ಇಟ್ಟಿಗೆ ಕೆಲಸಕ್ಕಾಗಿ ಕುಟುಂಬ ಸಮೇತ ಕೆಲವರು ವಲಸೆ ಹೋಗುತ್ತಾರೆ. 

ಹೀಗಾಗಬಾರದು ಎಂದೇ ರಾಜ್ಯ ಸರ್ಕಾರ ವರ್ಷದಲ್ಲಿ ಒಂದು ಕುಟುಂಬಕ್ಕೆ ನೂರು ದಿನಗಳ ಕಾಲ ಕೂಲಿ ಕೆಲಸ ನೀಡುತ್ತದೆ. ಹೆಣ್ಣು ಗಂಡು ಇಬ್ಬರಿಗೂ ಸಮಾನ ವೇತನ ನೀಡಲಾಗುವುದು. ಕಾಮಗಾರಿ ಮುಗಿದ ವಾರದಲ್ಲಿ ಆಯ ಕಾರ್ಮಿಕರ ಖಾತೆಗೆ ಕೂಲಿ ಹಣ ಜಮಾ ಮಾಡಲಾಗುವುದು. ಆತ್ಮವಿಶ್ವಾಸದೊಂದಿಗೆ ಕಾಮಗಾರಿ ನಿರ್ವಹಿಸಲು ಮುಂದಾಗಿ ಎಂದು ಹೇಳಿದರು.

ಗ್ರಾಮದಲ್ಲಿ 1288 ಜನ ಕೂಲಿ ತಮ್ಮ ಹೆಸರು ನೊಂದಾಯಿಸಿದ್ದಾರೆ. ಸದ್ಯ 300 ಜನರು ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದಾರೆ. ಇದಕ್ಕೆ ಗ್ರಾಪಂ ಸದಸ್ಯರು, ತಾಪಂ ಸದಸ್ಯರು, ಗ್ರಾಮಸ್ಥರ ಸಂಪೂರ್ಣ ಸಹಕಾರ ದೊರೆಯುತ್ತಿದೆ. 5ರಿಂದ 6 ಸಾವಿರ ಮಾನವ ದಿನಗಳನ್ನು ಪೂರೈಸಲು ಚಿಂತನೆ ನಡೆದಿದೆ. ಆದರೆ, ಈಗಾಗಲೇ ಅರ್ಧ ವರ್ಷ ಪೂರ್ಣಗೊಂಡಿದ್ದರಿಂದ ಅವಕಾಶ ಕಡಿಮೆ ಇದೆ. ಇದ್ದ ಅವಧಿ ಯಲ್ಲಿ ಎಲ್ಲ ಬಡ ಕಾರ್ಮಿಕರಿಗೆ ಕೆಲಸ ದೊರಕಿಸಿಕೊಡಲು ಪ್ರಯತ್ನಿಸಲಾಗವುದು ಎಂದರು.

ಗ್ರಾಪಂ ಅಧ್ಯಕ್ಷ ಪ್ರಭಾಕರ ರಾಮಜಿ, ರಾಜ್ಯ ಸರ್ಕಾರ ನೂರು ದಿನಗಳ ಬದಲಿಗೆ ಒಂದು ಕುಟುಂಬಕ್ಕೆ 150 ದಿನಗಳ ಕಾಲ ಕೂಲಿ ಕೆಲಸ ನೀಡಬೇಕು. ಇದರಿಂದ ಗ್ರಾಮಸ್ಥರ ಗುಳೆ ತಡೆಯಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
 
ತಾಪಂ ಸದಸ್ಯ ಪ್ರಭು ಸರಸಂಬಿ, ಗ್ರಾಪಂ ಸದಸ್ಯರಾದ ಸೈಫಾನ್‌ ಶೇಖ, ಸಿದ್ದಣ್ಣ ಬಂಡಿ, ರೇವಣಸಿದ್ದ ಖೈನ, ಪ್ರಭು ಮದರಿ ಹಾಗೂ ಪ್ರಮುಖರಾದ ಇಸ್ರು ಚವ್ಹಾಣ, ಪ್ರಭಾಕರ ಬೆಳಮಗಿ, ದತ್ತಾತ್ರೆಯ ಶಿರೂರ, ಬಾಬು ಮಾಶಾಳ ಹಾಜರಿದ್ದರು.

ಟಾಪ್ ನ್ಯೂಸ್

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.