ಸಿದ್ದರಾಮಯ್ಯ ಧರ್ಮ ಒಡೆಯುವ ಕೆಲಸ ಮಾಡಿಲ್ಲ: ಮಾತೆ
Team Udayavani, Oct 28, 2018, 6:00 AM IST
ಬೀದರ್: ಮಾಜಿ ಸಿಎಂ ಸಿದ್ದರಾಮಯ್ಯ ಶರಣರ ಆದರ್ಶಗಳನ್ನು ಅಳವಡಿಸಿಕೊಂಡು ಲಿಂಗಾಯತ ಸಮುದಾಯಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಹಾಗೂ ನಮ್ಮ ಹೋರಾಟಕ್ಕೆ ಸ್ಪಂದಿಸಿ ಪ್ರತ್ಯೇಕ ಧರ್ಮದ ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದಾರೆ. ಧರ್ಮ ಒಡೆಯುವ ಕೆಲಸ ಮಾಡಿಲ್ಲ ಎಂದು ಡಾ. ಮಾತೆ ಮಹಾದೇವಿ ಹೇಳಿದರು.
ಬಸವ ಕಲ್ಯಾಣದ ಮಹಾಮನೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿಲ್ಲ. ಇದೀಗ ಲಿಂಗಾಯತ ಧರ್ಮದ ಚೆಂಡು ಕೇಂದ್ರದ ಅಂಗಳದಲ್ಲಿದೆ. ಆದರೆ, ಎಬಿಸಿಡಿ ಗೊತ್ತಿಲ್ಲದ ವ್ಯಕ್ತಿಗಳು ಕೇಂದ್ರಕ್ಕೆ ತಪ್ಪು ಮಾಹಿತಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈವರೆಗೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಡಿಸೆಂಬರ್ನಲ್ಲಿ ಮೂರು ದಿನ ನಿರಂತರ ಹೋರಾಟ ನಡೆಸುವ ಮೂಲಕ ಕೇಂದ್ರದ ಗಮನ ಸೆಳೆಯುವುದಾಗಿ ತಿಳಿಸಿದರು.
ಲಿಂಗಾಯತ ಹೋರಾಟದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿಲ್ಲ. ಬೀದರ ಜಿಲ್ಲೆಯಿಂದ ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ಪ್ರಾರಂಭ ಮಾಡಲಾಗಿತ್ತು. ಬೀದರ ಜಿಲ್ಲೆಯಲ್ಲಿ ಅತಿಹೆಚ್ಚು ಕಾಂಗ್ರೆಸ್ ಶಾಸಕರಿದ್ದಾರೆ. ಅಲ್ಲದೆ, ಹೈಕ ಹಾಗೂ ಉತ್ತರ ಕರ್ನಾಟಕದಲ್ಲಿ ಹೋರಾಟದ ಪರಿಣಾಮ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಈ ಮಧ್ಯೆ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿರುವುದು ಖಂಡನೀಯ. ರಾಜಕೀಯಕ್ಕಾಗಿ ಹೇಳಿಕೆ ನೀಡಿ ಮತ ಪಡೆಯುವ ಉದ್ದೇಶ ಅವರದ್ದಾಗಿದೆ ಎಂದರು.
ಅನುಭವ ಮಂಟಪ:
ಬಸವ ಕಲ್ಯಾಣದಲ್ಲಿನ ಮೂಲ ಅನುಭವ ಮಂಟಪದ ಸಂಶೋಧನೆ ನಡೆಸಿ, ಶರಣರ ಚಿನಂತನೆ ಪರಿಕಲ್ಪನೆಯ ಹೊಸ ಅನುಭವ ಮಂಟಪವನ್ನು ಸರ್ಕಾರ ನಿರ್ಮಿಸಬೇಕು. ಈಗಿರುವ ಮಂಟಪ ಮೂಲ ಅನುಭವ ಮುಂಟಪ ಅಲ್ಲ. ಪುರಾತನ ಮೂಲ ಅನುಭವ ಮಂಟಪ ಎಲ್ಲಿದೆ ಎಂಬುದು ಕಲ್ಯಾಣದ ಜನರಿಗೆ ಗೊತ್ತಿದೆ. ಅಲ್ಲದೆ, ಹೈದ್ರಾಬಾದ್ ಮೂಲದ ವ್ಯಕ್ತಿ ಆ ಭೂಮಿಯನ್ನು ಮಾರಾಟ ಮಾಡಲು ಸಿದ್ಧವಿದ್ದು, ಸರ್ಕಾರ ಮುಂದೆ ಬಂದು ಆ ಭೂಮಿ ಖರೀದಿಸಿ 12ನೇ ಶತಮಾನದ ಶರಣರ ಚಿಂತನೆಯ ಅನುಭವ ಮಂಟಪ ನಿರ್ಮಿಸಬೇಕಿದೆ. ಈ ನಿಟ್ಟಿನಲ್ಲಿ 17ನೇ ಕಲ್ಯಾಣ ಪರ್ವದಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಂಡು ಸರ್ಕಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ