ಪ್ರೇಯಸಿ ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ
Team Udayavani, Oct 28, 2018, 11:35 AM IST
ಬೆಂಗಳೂರು: ಎಂಟು ವರ್ಷಗಳ ಹಿಂದೆ ಹೈಕೋರ್ಟ್ ಆವರಣದಲ್ಲೇ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಆರೋಪಿಗೆ 62ನೇ ಸಿಸಿಎಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಢ ವಿಧಿಸಿ ಆದೇಶಿಸಿದೆ.
ವಕೀಲ ರಾಜಪ್ಪ ಶಿಕ್ಷೆಗೆ ಒಳಗಾದವ ಆರೋಪಿ. ತಾನು ಪ್ರೀತಿಸಿದ ಯುವತಿ ಬೇರೆ ಯಾರಿಗೂ ಸಿಗಬಾರದು ಎಂಬ ಉದ್ದೇಶದಿಂದ ಆಯೋಪಿಯು, 2010ರ ಜುಲೈ 8ರಂದು ಮಧ್ಯಾಹ್ನ ಹೈಕೋರ್ಟ್ ಆವರಣದಲ್ಲೇ ನ್ಯಾಯವಾದಿ ನವೀನಾ ಎಂಬುವವರನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ವಿಧಾನಸೌಧ ಠಾಣೆ ಪೊಲೀಸರು ಆರೋಪಿ ರಾಜಪ್ಪನನ್ನು ಬಂಧಿಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ 62ನೇ ಸಿಸಿಎಚ್ ನ್ಯಾಯಾಲಯ, ಆರೋಪಿಗೆ ಕೊಲೆ ಪ್ರಕರಣದಲ್ಲಿ ಅಜೀವ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ಸಾಧ್ಯವಾಗದಿದ್ದಲ್ಲಿ 3 ತಿಂಗಳ ಸೆರೆವಾಸ ಅನುಭವಿಸಬೇಕು. ಆತ್ಮಹತ್ಯೆಗೆ ಯತ್ನಿಸಿದ ಆರೋಪದಲ್ಲಿ 500 ರೂ. ದಂಡ ವಿಧಿಸಿದ್ದು, ಒಂದು ವೇಳೆ ದಂಡ ಪಾವತಿಸಲು ವಿಫಲನಾದಲ್ಲಿ 10 ದಿನಗಳ ಸಾಮಾನ್ಯ ಕಾರಾಗೃಹ ವಾಸ ಅನುಭವಿಸಬೇಕೆಂದು ಆದೇಶಿಸಿದೆ. ಇದೇ ವೇಳೆ 5 ಸಾವಿರ ರೂ. ದಂಡ ಮೊತ್ತವನ್ನು ಹತ್ಯೆಗೀಡಾದ ನವೀನಾರ ಪೋಷಕರಿಗೆ ಪರಿಹಾರವಾಗಿ ನೀಡಬೇಕು ಎಂದು ಸೂಚಿಸಿದೆ.
ಘಟನೆ ಏನು?: ಆರೋಪಿ ರಾಜಪ್ಪ ಹಾಗೂ ನವೀನಾ ಇಬ್ಬರು ವಕೀಲರಾಗಿದ್ದು, ಹಿರಿಯ ನ್ಯಾಯವಾದಿ ಒಬ್ಬರ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಮದುವೆಗೂ ನಿರ್ಧರಿಸಿದ್ದರು. ಈ ಮಧ್ಯೆ ನವೀನಾ, ಆಕೆಯ ಹಿರಿಯ ವಕೀಲರ ಜತೆ ಸಂಬಂಧ ಹೊಂದಿದ್ದಾರೆ ಎಂದು ಸಂದೇಹ ಪಟ್ಟು, ಆಕೆಯ ಜತೆ ರಾಜಪ್ಪ ಮನಸ್ತಾಪ ಮಾಡಿಕೊಂಡಿದ್ದ.
ಈ ಹಿನ್ನೆಲೆಯಲ್ಲಿ 2010 ಜುಲೈ 8ರಂದು ಮಧ್ಯಾಹ್ನ 1.45ರ ಸುಮಾರಿಗೆ ಹೈಕೋರ್ಟ್ನ 1ನೇ ಮಹಡಿಯ ಹಾಲ್ ಬಳಿ ಬಂದ ಆರೋಪಿ, ಹಿರಿಯ ವಕೀಲರ ಜತೆ ಆಕೆ ಅತಿ ಸಲುಗೆಯಿಂದ ಮಾತನಾಡುತ್ತಿದ್ದುದನ್ನು ತಪ್ಪಾಗಿ ಅರ್ಥೈಸಿಕೊಂಡು, ಆಕೆಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದ. ಬಳಿಕ ಕೋರ್ಟ್ ಆವರಣದಲ್ಲಿರುವ ಶೌಚಾಲಯಕ್ಕೆ ಹೋಗಿ ವಿಷ ವಿಶ್ರಿತ ಮದ್ಯ ಸೇವಿಸಿದ್ದ. ಅಲ್ಲದೆ, ಚಾಕುವಿನಿಂದ ತನ್ನ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ