ಅಸಿಡಿಟಿ ಸಮಸ್ಯೆಗೆ ಮನೆ ಔಷಧ
Team Udayavani, Oct 8, 2020, 1:10 PM IST
ಹೊಟ್ಟೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದ ಆಮ್ಲದ ಉತ್ಪಾದನೆಯಿಂದ ಆಸಿಡಿಟಿ (ಪಿತ್ತ) ಕಾಣಿಸಿಕೊಳ್ಳುತ್ತದೆ. ನಾವು ಸೇವಿಸಿದ ಆಹಾರವು ಹೊಟ್ಟೆಯಲ್ಲಿ ಆಮ್ಲೀಯವಾಗಿ ಪರಿವರ್ತನೆ ಹೊಂದಿ ಸುಲಭವಾಗಿ ಜೀರ್ಣವಾಗುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ಆಮ್ಲದ ಪ್ರಮಾಣ ಹೆಚ್ಚಾದರೆ ಅಸಿಡಿಟಿಗೆ ಕಾರಣವಾಗುತ್ತದೆ. ಪಿತ್ತ ಹೆಚ್ಚಾದಾಗ ಎದೆಯಲ್ಲಿ ಉರಿ, ಉದ್ವೇಗ ಹಾಗೂ ನೋವು ಕಾಣಿಸಿಕೊಳ್ಳುತ್ತದೆ. ಅನ್ನನಾಳದ ಕೋಶದ ವೈಫಲ್ಯದಿಂದ ಆಮ್ಲವು ಅನ್ನನಾಳಕ್ಕೆ ಹೋಗದಂತೆ ತಡೆ ಉಂಟಾಗುವುದರಿಂದ ಅಸಿಡಿಟಿ ಹೆಚ್ಚಾಗುತ್ತದೆ. ಅಸಿಡಿಟಿಗೆ ನಾವು ಸೇವಿಸುವ ಆಹಾರವೇ ಮುಖ್ಯ ಕಾರಣ.
ಮನೆ ಔಷಧಗಳು
ಜೀರಿಗೆ
ಒಂದು ಲೋಟ ನೀರಿಗೆ ಒಂದು ಚಮಚ ಜೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ, ಸೋಸಿ ಕುಡಿಯಬೇಕು ಅಥವಾ ಸ್ವಲ್ಪ ಪ್ರಮಾಣದ ಹುರಿದ ಜೀರಿಗೆಯನ್ನು ಅರೆದು ಒಂದು ಲೋಟ ನೀರಿಗೆ ಬೆರೆಸಿ ಊಟವಾದ ಬಳಿಕ ಕುಡಿದರೂ ಸಮಸ್ಯೆಯಿಂದ ಪರಿಹಾರವಾಗುತ್ತದೆ.
ಎಳನೀರು ಸೇವನೆ
ಅಸಿಡಿಟಿ ನಿವಾರಣೆಗೆ ಎಳನೀರು ಉತ್ತಮ ಔಷಧವಾಗಿದೆ. ಹೊಟ್ಟೆಯಲ್ಲಿ ಲೋಳೆ ಪ್ರಮಾಣವನ್ನು ಹೆಚ್ಚಿಸಿ ಪಿತ್ತವನ್ನು ಇದು ಕಡಿಮೆ ಮಾಡುತ್ತದೆ.
ಬಾಳೆಹಣ್ಣು
ಅತಿಯಾದ ಅಸಿಡಿಟಿಯಿಂದ ನೀವು ಬಳಲುತ್ತಿದ್ದಲ್ಲಿ, ಚೆನ್ನಾಗಿ ಕಲಿತ ಬಾಳೆ ಹಣ್ಣು ಸೇವಿಸಿ. ಅಂಟಾಸಿಡ್ ಗುಣಗಳಿಂದ ತುಂಬಿರುವ ಬಾಳೆಹಣ್ಣು ನೈಸರ್ಗಿಕವಾಗಿ ಪಿತ್ತ ಶಮನ ಮಾಡುವ ಗುಣಗಳನ್ನು ಹೊಂದಿದೆ.
ಪುದೀನಾ
ಕೆಲ ಪುದೀನಾ ಎಲೆಗಳನ್ನು ಸಣ್ಣದಾಗಿ ಹೆಚ್ಚಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ಆರಿಸಿದ ಅನಂತರ ಕುಡಿಯಬೇಕು. ಪಿತ್ತ ನಿವಾರಣೆಯಲ್ಲಿ ಪುದೀನಾ ಪ್ರಮುಖ ಪಾತ್ರ ವಹಿಸುತ್ತದೆ. ಪುದೀನಾ ಅಜೀರ್ಣವನ್ನು ನಿವಾರಿಸಿ, ದೇಹಕ್ಕೆ ತಂಪು ನೀಡುತ್ತದೆ.
ಮಜ್ಜಿಗೆ
ಪಿತ್ತವನ್ನು ಶೀಘ್ರವಾಗಿ ನಿವಾರಣೆ ಮಾಡುವ ಗುಣ ಮಜ್ಜಿಗೆಗೆ ಇದೆ. ಸ್ವಲ್ಪ ಕರಿಮೆಣಸಿನ ಪುಡಿಯನ್ನು ಮಜ್ಜಿಗೆಗೆ ಸೇರಿಸಿ ಕುಡಿಯುವುದು ಪಿತ್ತ ನಿವಾರಣೆಗೆ ಪರಿಣಾಮಕಾರಿಯಾಗಿದೆ.
ಲವಂಗ
ಬಾಯಲ್ಲಿ ಲವಂಗವನ್ನಿಟ್ಟುಕೊಂಡು ಅದು ರಸ ಬಿಡುವವರೆಗೂ ಚೆನ್ನಾಗಿ ಜಗಿಯಬೇಕು. ಇದರಿಂದಲೂ ಪಿತ್ತವನ್ನು ನಿವಾರಿಸಬಹುದು. ಸಮಪ್ರಮಾಣದಲ್ಲಿ ಲವಂಗ ಹಾಗೂ ಏಲಕ್ಕಿ ಪುಡಿ ಮಿಕ್ಸ್ ಮಾಡಿ ಸೇವಿಸುವುದು ಸಹ ಒಳ್ಳೆಯದು.
ಶುಂಠಿ
ಶುಂಠಿ ಚೂರುಗಳನ್ನು ಒಂದು ಲೋಟ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಬಳಿಕ ಸೇವಿಸಿ. ಒಂದಿಷ್ಟು ಶುಂಠಿಯನ್ನು ಚೆನ್ನಾಗಿ ಅರೆದು ಇದರ ರಸ ತೆಗೆದು ಸೇವಿಸುವುದು ಕೂಡ ಪರಿಣಾಮಕಾರಿಯಾಗಿದೆ.
ದಾಲ್ಚಿನ್ನಿ
ಒಂದು ಲೋಟ ನೀರನ್ನು ಚೆನ್ನಾಗಿ ಕುದಿಸಿ ಇದಕ್ಕೆ ಒಂದು ಚಮಚ ದಾಲಿcನ್ನಿ ಹುಡಿ ಹಾಕಿ. ದಾಲ್ಚಿನ್ನಿ ತನ್ನ ರಸ ಬಿಟ್ಟ ಅನಂತರ ಈ ನೀರನ್ನು ಕುಡಿಯಬೇಕು. ಇದು ಪಿತ್ತಶಮನ ಮಾಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!