ವಿಳಂಬವಾದರೆ ನ್ಯಾಯ ನಿರಾಕರಿಸಿದಂತೆ: ಯೋಗಿ
Team Udayavani, Oct 31, 2018, 8:25 AM IST
ಲಕ್ನೋ: ರಾಮ ಜನ್ಮಭೂಮಿ ವಿವಾದ ಸುಪ್ರೀಂಕೋರ್ಟ್ನಲ್ಲಿದೆ. ಸಮಯಕ್ಕೆ ಸರಿಯಾಗಿ ನೀಡಿದ ನ್ಯಾಯವನ್ನು ಉತ್ತಮ ನ್ಯಾಯ ಎಂದು ಪರಿಗಣಿಸಲಾಗುತ್ತದೆ. ನ್ಯಾಯದಾನ ವಿಳಂಬವಾದರೆ ಕೆಲವು ಬಾರಿ ಇದು ಅನ್ಯಾಯವೂ ಆಗುತ್ತದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ. ರಾಮಜನ್ಮಭೂಮಿ ಪ್ರಕರಣದ ವಿಚಾರಣೆಯನ್ನು ಜನವರಿಯಲ್ಲಿ ನಡೆಸಲು ಸುಪ್ರೀಂ ಸೋಮವಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಯೋಗಿ ಈ ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ವಿವಿಧ ಹಿಂದೂ ಮುಖಂಡರು ಅಧ್ಯಾದೇಶ ಹೊರಡಿಸುವಂತೆಯೂ ಆಗ್ರಹಿಸಿದ್ದಾರೆ. ಇನ್ನೊಂದೆಡೆ ಈ ಬಗ್ಗೆ ಟ್ವೀಟ್ ಮಾಡಿದ ಹರಿಯಾಣ ಸಚಿವ ಅನಿಲ್ ವಿಜ್ ಈ ಬಗ್ಗೆ ವ್ಯಂಗ್ಯವಾಡಿದ್ದಾರೆ. 1993 ಮುಂಬಯಿ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ಗೆ ಗಲ್ಲಿಗೇರಿಸುವುದನ್ನು ವಿಳಂಬಗೊಳಿಸುವ ಅರ್ಜಿಯನ್ನು ರಾತ್ರೋರಾತ್ರಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ಗೆ ಸಾಧ್ಯವಿದೆ. ಹಾಗೆಯೇ, ಕೋಟ್ಯಂತರ ಹಿಂದೂಗಳು ಕಾಯುತ್ತಿರುವ ರಾಮ ಮಂದಿರ ವಿವಾದ ವಿಚಾರಣೆಗೆ ದಿನಾಂಕ ನಿಗದಿಪಡಿಸಬಹುದಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು