ಭಾರತ್‌ ಬ್ಯಾಂಕ್‌ನ ಘೋಡ್‌ಬಂದರ್‌ ರೋಡ್‌ ಸ್ಥಳಾಂತರಿತ ಶಾಖೆ ಶುಭಾರಂಭ


Team Udayavani, Oct 31, 2018, 1:26 PM IST

2910mum03a.jpg

ಮುಂಬಯಿ: ಭಾರತ್‌ ಕೋ. ಆಪರೇಟಿವ್‌ ಬ್ಯಾಂಕ್‌ ಇದರ ಸ್ಥಳಾಂತರಿತ ಘೋಡ್‌ಬಂದರ್‌ ರೋಡ್‌ ಶಾಖೆಯನ್ನು ಸ್ಥಾನೀಯ ಮಾನಾ³ಡ ಚಿತಲ್‌ಸಾರ್‌ನ ದೋಸ್ತಿ ಇಂಪೇರಿಯಾ ಕಟ್ಟಡದ ತಳ ಮಹಡಿಯಲ್ಲಿ ಅ. 29 ರಂದು ಬೆಳಗ್ಗೆ ಶುಭಾರಂಭಗೊಳಿಸಲಾಯಿತು.

ಥಾಣೆ ಮೇಯರ್‌ ಮೀನಾಕ್ಷಿ ರಾಜೇಂದ್ರ ಶಿಂಧೆ ಪೂಜಾರಿ ಅವರು  ರಿಬ್ಬನ್‌ ಬಿಡಿಸಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಕನಿಷ್ಠಾವಧಿಯಲ್ಲಿ ಗರಿಷ್ಠ ಸಾಧನೆಗೈದ ಭಾರತ್‌ ಬ್ಯಾಂಕ್‌ ಭದ್ರತೆಯ ದ್ಯೋತಕವಾಗಿದೆ. ಪ್ರಗತಿಯ ಶೋಧದ ಪಥದಲ್ಲಿ ಮುನ್ನಡೆಯುವ ಈ ಬ್ಯಾಂಕ್‌ ನಮ್ಮ ಪರಿಸರದಲ್ಲಿ ಸೇವಾ ನಿರತವಾಗಿರುವುದು ಇಲ್ಲಿನ ತುಳು-ಕನ್ನಡಿಗರ ಹಾಗೂ ಅನ್ಯಭಾಷಿಗರ ಹಿರಿಮೆಯಾಗಿದೆ. ಬ್ಯಾಂಕಿನ ಸಾರ್ವಜನಿಕ ಕೊಡುಗೆ ಅನುಪಮವಾಗಿದೆ ಎಂದು ನುಡಿದು ಶುಭಹಾರೈಸಿದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ,  ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ಅವರ ಉಪಸ್ಥಿತಿಯಲ್ಲಿ  ಸ್ಥಾನೀಯ ಉದ್ಯಮಿ ಅಶೋಕ್‌ಕುಮಾರ್‌ ಹೆಗ್ಡೆ ಅವರು ದೀಪ ಬೆಳಸಿ ಶಾಖೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಜಯ ಸಿ. ಸುವರ್ಣ ಅವರು ಸೇಫ್‌ ಲಾಕರ್‌ ಸೇವೆಗೆ ಚಾಲನೆ ನೀಡಿದರೆ, ಬ್ಯಾಂಕಿನ ಉಪ ಕಾರ್ಯಾಧ್ಯಕ್ಷೆ ನ್ಯಾಯವಾದಿ ರೋಹಿಣಿ ಜೆ. ಸಾಲ್ಯಾನ್‌ ಎಟಿಎಂ ಸೇವೆ ಉದ್ಘಾಟಿಸಿ ಶುಭಹಾರೈಸಿದರು.

ಉದ್ಯಮಿ ಗಣೇಶ್‌ ಆರ್‌. ಪೂಜಾರಿ, ಪ್ರಮೀಳಾ ಜಿ. ಪೂಜಾರಿ, ಡಾ| ಸಂಜಯ್‌ ವಾಲಂಜ್‌, ಸದಾನಂದ್‌ ಆರ್‌. ಪೂಜಾರಿ, ಅನಿಲ್‌ ತಿವಾರಿ, ರಾಘವ ಕೆ. ಕುಂದರ್‌ ವಿಕ್ರೋಲಿ, ರವಿ ಆರ್‌. ಪೂಜಾರಿ, ಹರೀಶ್‌ ಡಿ. ಸಾಲ್ಯಾನ್‌ ಬಜಗೋಳಿ, ಶಂಕರ್‌ ಪೂಜಾರಿ, ಜಯಂತಿ ಆರ್‌. ಪೂಜಾರಿ, ಪ್ರೇಮಾನಂದ್‌ ಆರ್‌. ಕುಕ್ಯಾನ್‌, ಜಸ್ಮಿàನ್‌ ಜತ್ತನ್ನ, ವಿಜಯಾಕೃಷ್ಣ ಪೂಜಾರಿ, ಶಂಕರ್‌ ಕೆ. ಸುವರ್ಣ ಖಾರ್‌, ಜಗನ್ನಾಥ್‌ ಅಮೀನ್‌ ಉಪ್ಪಳ  ಮತ್ತಿತರ ಗಣ್ಯರು ಉಪಸ್ಥಿತರಿದ್ದು ಶುಭಹಾರೈಸಿದರು.
ಭಾರತ್‌ ಬ್ಯಾಂಕ್‌ನ ನಿರ್ದೇಶಕರುಗಳಾದ ಜ್ಯೋತಿ ಕೆ. ಸುವರ್ಣ, ಭಾಸ್ಕರ್‌ ಎಂ. ಸಾಲ್ಯಾನ್‌, ಗಂಗಾಧರ್‌ ಜೆ. ಪೂಜಾರಿ, ಸೂರ್ಯಕಾಂತ್‌ ಜೆ. ಸುವರ್ಣ, ನ್ಯಾಯವಾದಿ ರಾಜಾ ವಿ. ಸಾಲ್ಯಾನ್‌, ಶಾರದಾ ಸೂರು ಕರ್ಕೇರ, ದಾಮೋದರ ಸಿ. ಕುಂದರ್‌, ಪುರುಷೋತ್ತಮ ಎಸ್‌. ಕೋಟ್ಯಾನ್‌, ಪ್ರೇಮನಾಥ್‌ ಪಿ. ಕೋಟ್ಯಾನ್‌, ಮೋಹನ್‌ದಾಸ್‌ ಎ. ಪೂಜಾರಿ, ಸಿಇಒ ಮತ್ತು ಆಡಳಿತ ನಿರ್ದೇಶಕ ಸಿ. ಆರ್‌. ಮೂಲ್ಕಿ, ಮಾಜಿ ನಿರ್ದೇಶಕರಾದ ಎನ್‌. ಎಂ. ಸನೀಲ್‌, ಹರೀಶ್ಚಂದ್ರ ಮೂಲ್ಕಿ, ಅಶೋಕ್‌ ಎಂ. ಕೋಟ್ಯಾನ್‌, ಕೆ. ಜಿ. ರಘವೇಂದ್ರ ಉಪಸ್ಥಿತರಿದ್ದು ಬ್ಯಾಂಕ್‌ನ ಸರ್ವೋನ್ನತಿಗೆ ಶುಭಕೋರಿದರು.

ಶೇಖರ ಶಾಂತಿ ಉಳ್ಳೂರು ತಮ್ಮ ಪೌರೋಹಿತ್ಯದಲ್ಲಿ ಗಣಹೋಮ, ಸತ್ಯನಾರಾಯಣ ಮಹಾಪೂಜೆ, ವಾಸ್ತು ಪೂಜೆ, ನೆರವೇರಿಸಿ ಆಶೀರ್ವಚನಗೈದರು. ಗಂಗಾಧರ ಕಲ್ಲಾಡಿ ತೀರ್ಥಪ್ರಸಾದ ವಿತರಿಸಿದರು. 

ಪವಿತ್ರ ಜೆ. ಪೂಜಾರಿ ಮತ್ತು ಜಿತೇಶ್‌ ಪೂಜಾರಿ ದಂಪತಿ ಹಾಗೂ ಸಿದ್ಧಾಂತ್‌ ಜಾಧವ್‌ ಪೂಜೆಯ ಯಜಮಾನತ್ವ ವಹಿಸಿದ್ದರು. ಬ್ಯಾಂಕ್‌ನ ಪ್ರಧಾನ ಪ್ರಬಂಧಕ ನಿತ್ಯಾನಂದ ಎಸ್‌. ಕಿರೋಡಿಯನ್‌, ಉಪ ಪ್ರಧಾನ ಪ್ರಬಂಧಕರಾದ ಪ್ರಭಾಕರ್‌ ಜಿ. ಸುವರ್ಣ, ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಸುನೀಲ್‌ ಎ. ಗುಜರನ್‌, ವಿಜಯ್‌ ಪಾಲನ್‌, ವಿವಿಧ ಶಾಖೆಗಳ ಮುಖ್ಯಸ್ಥರುಗಳಾದ ಜನಾರ್ಧನ್‌ ಅಮೀನ್‌ ಥಾಣೆ, ರವಿ ಎಸ್‌. ಕೋಟ್ಯಾನ್‌ ಭಾಂಡೂಪ್‌, ರತ್ನಾಕರ್‌ ಬಿ. ಪೂಜಾರಿ ಭಿವಂಡಿ, ರತ್ನಾಕರ್‌ ಆರ್‌. ಸಾಲ್ಯಾನ್‌ ಕಲೀನಾ, ಅರ್ಚನಾ ಯು. ಸುವರ್ಣ ಕಲ್ವಾ,  ಶಾಖಾ ಸಹಾಯಕ ವ್ಯವಸ್ಥಾಪಕಿ ಕಾಂತಿ ಕರ್ಕೇರ, ಗ್ರಾಹಕರು, ಹಿತೈಷಿಗಳು  ಹಾಜರಿದ್ದರು. ಬ್ಯಾಂಕಿನ ಪ್ರಧಾನ ಪ್ರಬಂಧಕ, ಅಭಿವೃದ್ಧಿ ಇಲಾಖಾ ಮುಖ್ಯಸ್ಥರಾದ ದಿನೇಶ್‌ ಬಿ. ಸಾಲ್ಯಾನ್‌ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಕೌಶಿಕ್‌ ಸಾಲ್ಯಾನ್‌ ಪ್ರಸ್ತಾವನೆಗೈದರು. ಕು| ನೇಹಾ ಅಮೀನ್‌ ಕಾರ್ಯಕ್ರಮ ನಿರೂಪಿಸಿದರು. ಶಾಖೆಯ ಮುಖ್ಯಸ್ಥ ಮಹೇಶ್‌ ಬಿ. ಅಮೀನ್‌ ವಂದಿಸಿದರು.

ಹಣಕಾಸು ಸಂಸ್ಥೆಯ ಸ್ಥಳಾಂತರ ಅಂದರೆ ಅಭಿವೃದ್ಧಿಯ ಸಂಕೇತ. ಇದೀಗಲೇ 102 ಶಾಖೆ ಮೂಲಕ  ಸೇವಾ ನಿರತ ಭಾರತ್‌ ಬ್ಯಾಂಕ್‌ ಕೇವಲ ಬಿಲ್ಲವರ ಮಾತ್ರವಲ್ಲ  ಭಾರತೀಯರ ಹೆಮ್ಮೆಯ ಸಹಕಾರಿ ಸಂಸ್ಥೆಯಾಗಿದೆ. ಸಾವಿರಾರು ಶಾಖೆಗಳನ್ನು ತೆರೆದು ಇನ್ನೂ ಹೆಮ್ಮರವಾಗಿ ಬೆಳೆದು ಗ್ರಾಹಕರ ಪಾಲಿನ ಕಲ್ಪವೃಕ್ಷವಾಗಲಿ .
–  ಚಂದ್ರಶೇಖರ ಪೂಜಾರಿ, ಅಧ್ಯಕ್ಷರು, ಬಿಲ್ಲವರ ಅಸೋ. ಮುಂಬಯಿ

ನಾನು ಅನಿವಾಸಿ ಭಾರತೀಯನಾಗಿದ್ದು ಬ್ಯಾಂಕಿಂ ಗ್‌ ಬಗ್ಗೆ ಅರಿತಿದ್ದರೂ ಭಾರತ್‌ ಬ್ಯಾಂಕಿನ ಕಾರ್ಯ ವೈಖರಿ ಅದ್ಭುತವಾದುದು. ರಾಷ್ಟ್ರೀಕೃತ ಬ್ಯಾಂಕ್‌ಗಳಷ್ಟೇ ಸಮಾನ ಸೇವೆ ಒಂದು ಸಹಕಾರಿ ಬ್ಯಾಂಕ್‌ ನೀಡುತ್ತಿದ್ದರೆ ಅದು ಭಾರತ್‌ ಬ್ಯಾಂಕ್‌ ಎನ್ನುವುದೇ ಅಭಿಮಾನದಿಂದ ತಿಳಿಸಬಲ್ಲೆನು.
 – ಅಶೋಕ್‌ ಕುಮಾರ್‌ ಹೆಗ್ಡೆ, ಸ್ಥಳೀಯ ಉದ್ಯಮಿ

ಹೊಸರೂಪ ಪಡೆದು ಸೇವೆಗೆ ಸಜ್ಜಾಗಿ ನಿಂತ ಭಾರತ್‌ ಬ್ಯಾಂಕ್‌ ಗ್ರಾಹಕರ ಪಾಲಿನ ವಿಶ್ವಸನೀಯ ಸಂಸ್ಥೆಯಾಗಿದೆ. ತುಳು-ಕನ್ನಡಿಗರ ಸಾರಥ್ಯದ ಬೃಹತ್‌ ಬ್ಯಾಂಕ್‌ ಇದಾಗಿದ್ದು,  ಸೇವೆಯಲ್ಲಿ ಮುನ್ನಡೆದು ರಾಷ್ಟ್ರ ವ್ಯಾಪಿಯಾಗಿ ವಿಸ್ತ¤ರಿಸಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುವಂತಾಗಲಿ.
– ಗಣೇಶ್‌ ಪೂಜಾರಿ, ಸ್ಥಳೀಯ ಉದ್ಯಮಿ
  ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.