ಸುಂಟರಗಾಳಿ ರಕ್ಷಾ ಕೇಂದ್ರ ಸ್ಥಾಪನೆ


Team Udayavani, Oct 31, 2018, 4:27 PM IST

31-october-17.gif

ಕಾಸರಗೋಡು: ಪದೇ ಪದೇ ಸಂಭವಿಸುವ ಸುಂಟರಗಾಳಿಯಿಂದ ರಕ್ಷಣೆ ಪಡೆಯಲು ಕಾಸರಗೋಡು ಜಿಲ್ಲೆಯ ಮೂರು ಕೇಂದ್ರಗಳು ಸಹಿತ ರಾಜ್ಯದ ಐದು ಕೇಂದ್ರಗಳಲ್ಲಿ ಸುಂಟರಗಾಳಿ ರಕ್ಷಾ ಕೇಂದ್ರವನ್ನು ಸ್ಥಾಪಿಸಲಾಗುವುದು.

ನ್ಯಾಶನಲ್‌ ಸೈಕ್ಲೋನ್‌ ರಿಸ್ಕ್ ಮಿಟಿಗೇಶನ್‌ ಪ್ರೊಜೆಕ್ಟ್‌ನ ಅಂಗವಾಗಿ ಸುಂಟರಗಾಳಿ ರಕ್ಷಾ ಕೇಂದ್ರವನ್ನು ತೆರೆಯಲಾಗುವುದು. ಕೇಂದ್ರ ಸರಕಾರದ ಸ್ವಾಧೀನದಲ್ಲಿ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಸ್ಥಾಪಿಸಿರುವ ಸುಂಟರಗಾಳಿ ಮುನ್ನೆಚ್ಚರಿಕೆ ಕೇಂದ್ರದ ಬೆನ್ನಲ್ಲೇ ವಿಶ್ವ ಬ್ಯಾಂಕ್‌ನ ನೆರವಿನೊಂದಿಗೆ ರಾಜ್ಯ ಸರಕಾರ ಸುಂಟರಗಾಳಿ ರಕ್ಷಾ ಕೇಂದ್ರವನ್ನು ಸ್ಥಾಪಿಸುತ್ತಿದೆ. ಈ ಮಹತ್ವದ ಯೋಜನೆಗೆ 16.93 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದ್ದು, ಯೋಜನೆಗೆ ಆಡಳಿತಾನುಮತಿ ಲಭಿಸಿದೆ. ಈ ಬಗ್ಗೆ ಅ. 26ರಂದು ಅಡಿಶನಲ್‌ ಚೀಫ್‌ ಸೆಕ್ರೆಟರಿ ಪಿ.ಎಚ್‌. ಕುರ್ಯನ್‌ ಆದೇಶ ಹೊರಡಿಸಿದ್ದಾರೆ. ಆರಂಭದಲ್ಲಿ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಐದು ಕೇಂದ್ರಗಳಲ್ಲಿ ಮಲ್ಟಿ ಪರ್ಪಸ್‌ ಸೈಕ್ಲೋನ್‌ ಶೆಲ್ಟರ್‌ (ವಿವಿಧೋದ್ದೇಶ ಸುಂಟರಗಾಳಿ ರಕ್ಷಾ ಕೇಂದ್ರಗಳು) ಸ್ಥಾಪಿಸಲಾಗುವುದು. ನ್ಯಾಶನಲ್‌ ಸೈಕ್ಲೋನ್‌ ರಿಸ್ಕ್ ಮಿಟಿಗೇಶನ್‌ ಪ್ರೊಜೆಕ್ಟ್‌ನ (ರಾಷ್ಟ್ರೀಯ ಸುಂಟರಗಾಳಿ ಶಮನ ಯೋಜನೆ) ದ್ವಿತೀಯ ಹಂತವಾಗಿ ರಾಜ್ಯ ಡಿಸಾಸ್ಟರ್‌ ಮೆನೇಜ್‌ಮೆಐಟ್‌ ಇಲಾಖೆ ಯೋಜನೆಯನ್ನು ಜಾರಿಗೊಳಿಸಲಿದೆ.

ಒಟ್ಟು ವೆಚ್ಚದ ಶೇ.75 ರಷ್ಟು ಮೊತ್ತವನ್ನು ವಿಶ್ವ ಬ್ಯಾಂಕ್‌ ವಹಿಸಿಕೊಳ್ಳಲಿದೆ. ಉಳಿದ ಶೇ.25ರಷ್ಟು ಮೊತ್ತವನ್ನು ಕೇರಳ ಸರಕಾರ ವಹಿಸಿಕೊಳ್ಳಲಿದೆ. ಸುಂಟರಗಾಳಿಯ ಬಗ್ಗೆ ಮುನ್ನೆಚ್ಚರಿಕೆ ವ್ಯವಸ್ಥೆ ಸ್ಥಾಪಿಸುವುದು, ನೌಕರರಿಗೆ, ತಜ್ಞರಿಗೆ ದುರಿತ ನಿವಾರಣೆ, ರಕ್ಷಣಾ ಕಾರ್ಯ, ಪ್ರಾಥಮಿಕ ಚಿಕಿತ್ಸೆಯ ಬಗ್ಗೆ ತರಬೇತಿ ನೀಡಲಾಗುವುದು. ಸುಂಟರ ಗಾಳಿಯಲ್ಲದೆ ನೆರೆ ಸಂದರ್ಭ, ಗುಡ್ಡ ಕುಸಿತ ಮೊದಲಾದ ಪ್ರಾಕೃತಿಕ ವಿಕೋಪಗಳಿಂದಲೂ ರಕ್ಷಣೆ ಪಡೆಯಲು ಈ ಯೋಜನೆಯಿಂದ ನೆರವಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಾಗಿ ಎಂಟು ಕೇಂದ್ರಗಳಲ್ಲಿ 11 ಸುಂಟರಗಾಳಿ ರಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಕಾಸರಗೋಡು ಜಿಲ್ಲೆಯಲ್ಲಿ ಕೂಡ್ಲು (ಮೂರು ಕೋಟಿ ರೂ.), ಕುಂಬಳೆ (2.72 ಕೋಟಿ ರೂ.) ಮತ್ತು ಹೊಸದುರ್ಗ ತಾಲೂಕಿನ ಪುಲ್ಲೂರು (3.66 ಕೋಟಿ ರೂ.), ಕಣ್ಣೂರು ಜಿಲ್ಲೆಯ ಚಾಲಾಡ್‌ (3.80 ಕೋಟಿ ರೂ.) ಮತ್ತು ತಲಶ್ಯೇರಿಯ ಕದಿರೂರು (3.75 ಕೋಟಿ ರೂ.) ನಲ್ಲಿ ಸುಂಟರಗಾಳಿ ರಕ್ಷಾ ಕೇಂದ್ರವನ್ನು ಸ್ಥಾಪಿಸಲು ನಿಧಿ ಮಂಜೂರು ಮಾಡಲಾಗಿದೆ. 

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.