RBI ಸ್ವಾಯತ್ತೆ ಮುಖ್ಯ ಎಂದ ಸರಕಾರ: Sensex 550 ಅಂಕ ಭರ್ಜರಿ ಜಂಪ್‌


Team Udayavani, Oct 31, 2018, 4:45 PM IST

sensex-musings1-700.jpg

ಮುಂಬಯಿ :  ”ಆರ್‌ಬಿಐ ಸ್ವಾಯತ್ತೆ ಮುಖ್ಯ;ಆದರೆ ಅದರ ಕಾರ್ಯನಿರ್ವಹಣೆಗೆ ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಆರ್ಥಿಕತೆಯ ಮಾರ್ಗದರ್ಶನ ಅಗತ್ಯವಿರುತ್ತದೆ” ಎಂಬ ಸಮನ್ವಯದ ನಿಲುವನ್ನು ಕೇಂದ್ರ ಸರಕಾರ ಪ್ರಕಟಿಸಿದ ಬೆನ್ನಿಗೇ ಮುಂಬಯಿ ಶೇರು ಪೇಟೆ ಇಂದು ಬೆಳಗ್ಗಿನ ತನ್ನ ಎಲ್ಲ ನಷ್ಟವನ್ನು ನೀಗಿಸಿಕೊಂಡು ದಿನಾಂತ್ಯಕ್ಕೆ 550.92 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿ 34,442.05 ಅಂಕಗಳ ಮಟ್ಟಕ್ಕೆ ಏರಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 188.20 ಅಂಕಗಳ ಮುನ್ನಡೆಯನ್ನು ದಾಖಲಿಸಿದ ದಿನದ ವಹಿವಾಟನ್ನು 10,386.60 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ದೇಶದ ಹಣಕಾಸು ವ್ಯವಸ್ಥೆಯ ಮತ್ತು ಎನ್‌ ಬಿ ಎಫ್ ಸಿ ಗಳ  ನಗದು ಲಭ್ಯತೆಯನ್ನು ಸುಧಾರಿಸಲು, ದುರ್ಬಲ ಬ್ಯಾಂಕುಗಳಿಗೆ ಅಗತ್ಯ ಬಂಡವಾಳ ಪೂರೈಸಲು ಮತ್ತು ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳಿಗೆ ಸಾಲ ನೆರವು ನೀಡಲು ಕೇಂದ್ರ ಸರಕಾರ, ಆರ್‌ಬಿಐ ಕಾಯಿದೆಯ ಸೆ.7ನ್ನು ಪ್ರಯೋಗಿಸಲು ಮುಂದಾಗಿದೆ ಎಂದೂ, ಸರಕಾರ ಹಾಗೆ ಮಾಡಿದಲ್ಲಿ ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡುವರೆಂದೂ ದಿನಪೂರ್ತಿ ವಾಣಿಜ್ಯ ಟಿವಿ ವಾಹಿನಿಗಳು ಗುಲ್ಲೆಬ್ಬಿಸಿದ್ದವು. 

ಆದರೆ ಮಧ್ಯಾಹ್ನದ ಬಳಿಕ ಕೇಂದ್ರ ಸರಕಾರ ಆರ್‌ಬಿಐ ಸ್ವಾಯತ್ತೆಯನ್ನು ಎತ್ತಿ ಹಿಡಿದು ಮಾರ್ಗದರ್ಶಿ ಸೂತ್ರಗಳನ್ನು ಆರ್‌ಬಿಐ ಸಾರ್ವಜನಿಕ ಹಿತಾಸಕ್ತಿಯಲ್ಲಿ ಪಾಲಿಸಬೇಕಾಗಿದೆ ಎಂಬ ಸಮನ್ವಯದ ನಿಲುವನ್ನು ಪ್ರಕಟಿಸಿದಾಗ ಮುಂಬಯಿ ಶೇರು ಪೇಟೆಯಲ್ಲಿ ಏಕ್‌ದಂ ಜಿಗಿತ ಕಂಡು ಬಂತು. 

ಕೇವಲ ಎಚ್‌ ಡಿ ಎಫ್ ಸಿ ಶೇರು 162.28 ಅಂಕಗಳ ಮುನ್ನಡೆಯನ್ನು (ಶೇ.6ರಷ್ಟು) ಸೆನ್ಸೆಕ್ಸ್‌ಗೆ ದೊರಕಿಸಿಕೊಟ್ಟದ್ದು ಇಂದಿನ ವಿಶೇಷವೆನಿಸಿತು. ಇದೇ ವೇಳೆ ಇಂಡಸ್‌ ಇಂಡ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ಎಹ್‌ಬಿಐ ಮತ್ತು ಐಸಿಐಸಿಐ ಬ್ಯಾಂಕ್‌ ಶೇ.4 ಏರಿಕೆಯನ್ನು ದಾಖಲಿಸಿದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,698 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,613 ಶೇರುಗಳು ಮುನ್ನಡೆ ಸಾಧಿಸಿದವು; 941 ಶೇರುಗಳು ಹಿನ್ನಡೆ ಕಂಡವು; 144 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಕೇಂದ್ರ ಸರಕಾರ ಈಚಿನ ವಾರಗಳಲ್ಲಿ ಆರ್‌ಬಿಐ ಗವರ್ನರ್‌ಗೆ ಪತ್ರ ಬರೆದು ಆರ್‌ಬಿಐ ಕಾಯಿದೆ ಸೆ.7ನ್ನು ಪ್ರಯೋಗಿಸಿದೆ. ತನ್ಮೂಲಕ ಬ್ಯಾಂಕೇತರ ಹಣಕಾಸು ಕಂಪೆನಿಗಳಿಗೆ (ಎನ್‌ಬಿಎಫ್ಸಿ) ನಗದು ಲಭ್ಯತೆ, ದುರ್ಬಲ ಬ್ಯಾಂಕುಗಳಿಗೆ ಅಗತ್ಯ ಬಂಡವಾಳದ ಪೂರೈಕೆ ಮತ್ತು ಸಣ್ಣ ಹಾಗೂ ಮಧ್ಯಮ ಕಂಪೆನಿಗಳಿಗೆ ಸಾಲ ನೀಡುವಿಕೆಯ ನಿಟ್ಟಿನಲ್ಲಿ ಸೂಚನೆಗಳನ್ನು ನೀಡಿತ್ತು ಎನ್ನಲಾಗಿದೆ. 

ಭಾರತಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕದಲ್ಲಿ ಈ ತನಕ ಕೇಂದ್ರ ಸರಕಾರ, ಆರ್‌ಬಿಐ ಕಾಯಿದೆಯ ಸೆ.7ನ್ನು ಪ್ರಯೋಗಿಸಿದ್ದೇ ಇಲ್ಲ ಎಂದು ಇಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. 

ಡಾಲರ್‌ ಎದುರು ರೂಪಾಯಿ ಅ.15ರಂದು 74.04 ರೂ. ಮಟ್ಟಕ್ಕೆ ಕುಸಿದ ತರುವಾಯ ನಿನ್ನೆ ಮಂಗಳವಾರ 73.99 ರೂ. ಮಟ್ಟಕ್ಕೆ ಜಾರಿದೆ. ಹತ್ತು ವರ್ಷದ ಸರಕಾರಿ ಬಾಂಡುಗಳು ಇಳುವರಿ ಶೇ.7.87ಕ್ಕೆ ಏರಿದೆ.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.