ಸಾಹಿತ್ಯ ಸಮ್ಮೇಳನ ಸಿದ್ಧತೆಗೆ ಸೂಚನೆ


Team Udayavani, Oct 31, 2018, 5:33 PM IST

31-october-21.gif

ಧಾರವಾಡ: ನಗರದ ಕೆಸಿಡಿ ಮೈದಾನದಲ್ಲಿ ಜ. 6,7, ಮತ್ತು 8ರಂದು ಆಯೋಜಿಸುತ್ತಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಚುರುಕುಗೊಳಿಸಲು ಜಿಲ್ಲಾಧಿಕಾರಿ ದೀಪಾ ಚೋಳನ್‌ ಅವರು ಅಧಿಕಾರಿಗಳಿಗೆ ಮತ್ತು ಜಿಲ್ಲಾ ಕಸಾಪ ಘಟಕಕ್ಕೆ ಸೂಚಿಸಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಮ್ಮೇಳನದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಹಿತ್ಯ ಸಮ್ಮೇಳನದ ಸ್ವಾಗತ, ಧ್ವಜಾರೋಹಣ, ಮೆರವಣಿಗೆ, ವಿಚಾರ ಸಂಕಿರಣ, ಕವಿಗೋಷ್ಠಿ, ಪುಸ್ತಕ ಮಳಿಗೆ ಸೇರಿದಂತೆ ಎಲ್ಲವೂ ಅಚ್ಚುಕಟ್ಟಾಗಿ ಆಯೋಜಿಸಬೇಕು. ಸಮ್ಮೇಳನಕ್ಕೆ ಆಗಮಿಸುವ ಅತಿಥಿಗಳಿಗೆ ಮತ್ತು ಸಾರ್ವಜನಿಕರಿಗೆ ಊಟ, ವಸತಿ, ಪಾರ್ಕಿಂಗ್‌ ವ್ಯವಸ್ಥೆಗಳು ಯಾವ ತೊಂದರೆ ಇಲ್ಲದಂತೆ ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ, ಹೋಟೆಲ್‌ ಮಾಲೀಕರ, ಶಿಕ್ಷಣ ಸಂಸ್ಥೆಗಳ, ನಗರ ಸ್ಥಳೀಯ ಸಂಸ್ಥೆಗಳ ಮತ್ತು ವಿವಿಧ ಸಾಹಿತ್ಯ ಸಂಘಟನೆಗಳ ಸಭೆಗಳನ್ನು ಪ್ರತ್ಯೇಕವಾಗಿ ಆಯೋಜಿಸಿ ಅವರಿಗೆ ಜವಾಬ್ದಾರಿ ನೀಡಿ, ಸಹಕಾರ ಕೋರುವುದಾಗಿ ತಿಳಿಸಿದರು.

ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಸಮ್ಮೇಳನದ ಯಶಸ್ವಿಗೆ ಪ್ರತಿಯೊಬ್ಬರೂ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು. ತಮಗೆ ನೀಡಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಬೇಕು. ಸಮ್ಮೇಳನಕ್ಕೆ ಲಕ್ಷಾಂತರ ಜನ ಆಗಮಿಸುವುದರಿಂದ ಸಮ್ಮೇಳನದ ಸ್ಥಳವಾದ ಕೆಸಿಡಿ ಸುತ್ತಮುತ್ತ ಟ್ರಾಫಿಕ್‌ ಸಮಸ್ಯೆಯಾಗದಂತೆ ನಗರಕ್ಕೆ ಬಂದು ಸೇರುವ ಎಲ್ಲಾ ರಸ್ತೆಗಳಿಗೆ ನಿರ್ದಿಷ್ಟ ಸ್ಥಳ ಗುರುತಿಸಿ, ಅಲ್ಲಿಯೇ ಸಾರ್ವಜನಿಕರ ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಬೇಕು. ಅಲ್ಲಿಂದ ಸಮ್ಮೇಳನದ ಸ್ಥಳದವರೆಗೆ ಉಚಿತವಾಗಿ ನಗರ ಸಾರಿಗೆ ಬಸ್‌ ಸೇವೆ ನೀಡಬೇಕು ಎಂದು ಸಲಹೆ ನೀಡಿದರು.

ಡಿಸಿಪಿ ಬಿ.ಎಸ್‌. ನೇಮಗೌಡ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಆಹಾರ ಇಲಾಖೆ ಹಿರಿಯ ಉಪನಿರ್ದೇಶಕ ಡಾ| ಸದಾಶಿವ ಮರ್ಜಿ, ರಂಗಾಯಣದ ಆಡಳಿತಾ ಧಿಕಾರಿ ಕೆ.ಎಸ್‌. ಚೆನ್ನೂರ, ಕವಿವಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಉಡಕೇರಿ, ಹಿರಿಯ ಸಾಹಿತಿ ಮೋಹನ ನಾಗಮ್ಮನವರ, ವಿಶ್ವೇಶ್ವರಿ ಬಸಲಿಂಗಯ್ಯ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಕೆ. ರಂಗಣ್ಣವರ ಮೊದಲಾದವರು ಸಲಹೆ-ಸೂಚನೆ ನೀಡಿದರು.

ಡಿಎಸ್‌ಪಿ ಬಿ.ಪಿ. ಚಂದ್ರಶೇಖರ, ಎಸಿಪಿ ಎಂ.ಎನ್‌. ರುದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮುನಿರಾಜು, ಡಾ| ಆರ್‌.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಜೆ.ಎಂ. ನಾಗಯ್ಯ, ಜಿಲ್ಲಾ ಕಸಾಪ ಕಾರ್ಯದರ್ಶಿ ಪ್ರೊ| ಕೆ.ಎಸ್‌. ಕೌಜಲಗಿ, ಡಾ| ಜಿನದತ್ತ ಹಡಗಲಿ, ಕೋಶಾಧಿಕಾರಿ ಡಾ|ಎಸ್‌.ಎಸ್‌. ದೊಡ್ಡಮನಿ ಇನ್ನಿತರರಿದ್ದರು.

16 ಸಮಿತಿಗಳ ರಚನೆ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಲಿಂಗರಾಜ ಅಂಗಡಿ ಮಾತನಾಡಿ, ಬಹಳ ವರ್ಷಗಳ ನಂತರ ಧಾರವಾಡ ಜಿಲ್ಲೆಗೆ ಸಿಕ್ಕಿರುವ ಸಮ್ಮೇಳನದ ಆತಿಥ್ಯವನ್ನು ನಿರ್ವಹಿಸಲು ಪ್ರತಿಯೊಬ್ಬರ ಸಹಕಾರ ಮುಖ್ಯ. ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸ್ವಾಗತ ಸಮಿತಿ ಸೇರಿದಂತೆ ಸುಮಾರು 16ಕ್ಕೂ ಹೆಚ್ಚು ಸಮಿತಿಗಳ ರಚನೆ ಅಗತ್ಯವಿದೆ. ಇದರಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾಹಿತ್ಯ, ಸಾಂಸ್ಕೃತಿಕ, ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಬೇಕು ಎಂದರು.

ಧಾರವಾಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತ್ಯೇಕ ಲಾಂಛನದ ಅಗತ್ಯವಿದೆ. ಆ ಕುರಿತು ಹಾಗೂ ವಿವಿಧ ಸಮಿತಿಗಳ ರಚನೆ, ಸಮ್ಮೇಳನಕ್ಕೆ ಅಗತ್ಯವಿರುವ ಬಜೆಟ್‌ ಕುರಿತು ಚರ್ಚಿಸಲು ಸದ್ಯದಲ್ಲಿಯೇ ಮತ್ತೊಂದು ಸಭೆ ಕರೆಯಲಾಗುವುದು.
ದೀಪಾ ಚೋಳನ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.