ಡಿಕೆಶಿ ಚೆಕ್,ಬಿಜೆಪಿಗೆ ಶಾಕ್;ರಾಮನಗರದಲ್ಲಿ ಹಿಂದೆ ಸರಿದ ಅಭ್ಯರ್ಥಿ!
Team Udayavani, Nov 1, 2018, 10:22 AM IST
ರಾಮನಗರ: ರಾಜಕೀಯದಲ್ಲಿ ಏನೂ ಬೇಕಾದರೂ ಆಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ರಾಮನಗರ ಉಪಚುನಾವಣಾ ಕಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದು ಶಾಕ್ ನೀಡಿದ್ದಾರೆ.
ಗುರುವಾರ ಬೆಳಗ್ಗೆ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಜೆಡಿಎಸ್ ಅಭ್ಯರ್ಥಿಯಾಗಿರುವ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.
ಇವರನ್ನು ಹೇಗೆ ನಂಬಲಿ…!
ಆವತ್ತು ನನ್ನ ಕೈಗೆ ಬಾವುಟ ಕೊಟ್ಟು ಹೋದವರು ಏನಾಯಿತು ಎಂದು ನೋಡಲು ಬರಲಿಲ್ಲ, ಇನ್ನು ನಾನು ಗೆಲ್ಲುವುದು ಹೇಗೆ ಎಂದು ಚಂದ್ರಶೇಖರ್ ಹೇಳಿದ್ದಾರೆ.
ಕೇಂದ್ರ ಸಚಿವ ಸದಾನಂದ ಗೌಡ ಅವರನ್ನು ಕಂಡರೆ ಯೋಗೇಶ್ವರ್ ಅವರಿಗೆ ಆಗುವುದಿಲ್ಲ. ಸದಾನಂದ ಗೌಡರು ಬಂದರು, ಸ್ವಲ್ಪ ನಕ್ಕರು ಹೋದರು ಎಂದಿದ್ದಾರೆ.
ಮಂಡ್ಯಕ್ಕೆ ಬಿಜೆಪಿ ಪ್ರಮುಖ ನಾಯಕರೆಲ್ಲರೂ ಪ್ರಚಾರಕ್ಕೆ ತೆರಳುತ್ತಿದ್ದಾರೆ. ಯಾರೂ ಇಲ್ಲಿ ಕಾರು ನಿಲ್ಲಿಸಿ ಸ್ವಲ್ಪ ಪ್ರಚಾರವೂ ನಡೆಸಿಲ್ಲ ಎಂದಿದ್ದಾರೆ.
ನಾನು ಮೂಲತಃ ಕಾಂಗ್ರೆಸಿಗ ಮತ್ತೆ ಮಾತೃ ಪಕ್ಷವನ್ನು ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಎಲ್ ಚಂದ್ರಶೇಖರ್ ಅವರಿಗೆ ಬಿಜೆಪಿ ಬಿ ಫಾರಂ ನೀಡಿತ್ತು.
ಬಿಜೆಪಿಗೆ ಭಾರೀ ಶಾಕ್
ಈ ವಿದ್ಯಮಾನ ಬಿಜೆಪಿಗೆ ಭಾರೀ ಆಘಾತ ನೀಡಿದ್ದು, ನಾಯಕರು ತಲೆಕೆಡಿಸಿಕೊಳ್ಳುವಂತಾಗಿದೆ. ಫಲಿತಾಂಶಕ್ಕೂ ಮುನ್ನ ಭಾರೀ ಮುಖಭಂಗ ಅನುಭವಿಸಬೇಕಾಗಿದೆ. ತಳಮಟ್ಟದ ಕಾರ್ಯಕರ್ತರ ವಿರೋಧವನ್ನು ಎದುರಿಸುವ ಪರಿಸ್ಥಿತಿ ಒದಗಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ