ಗುರುವಿಗೊಂದು ಸಾರ್ಥಕ ನಮನ ಮಾಂಬಾಡಿ ಶಿಷ್ಯ ಸಮಾವೇಶ


Team Udayavani, Nov 2, 2018, 6:00 AM IST

s-6.jpg

ಅನೇಕ ಹಿಮ್ಮೇಳ ಕಲಾವಿದರನ್ನು ಯಕ್ಷಗಾನಕ್ಕೆ ಒದಗಿಸಿದ ಕೀರ್ತಿ ಮಾಂಬಾಡಿ ನಾರಾಯಣ ಭಾಗವತರ ಪುತ್ರ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಸಲ್ಲುತ್ತದೆ. ದಕ್ಷಿಣ ಕನ್ನಡ ಹಾಗೂ ಕುಂಬಳೆ ಸೀಮೆಯ ನೂರಕ್ಕೂ ಮಿಕ್ಕಿದ ಕೇಂದ್ರಗಳಲ್ಲಿ ಹಿಮ್ಮೇಳ ತರಗತಿ ನಡೆಸಿಕೊಟ್ಟ ಶಿಕ್ಷಕರಿವರು. 1968ರಲ್ಲಿ ಕೀರಿಕ್ಕಾಡು ಮಾಸ್ಟರ್‌ ವಿಷ್ಣು ಭಟ್ಟರ ಪ್ರೇರಣೆಯಿಂದ ದೇಲಂಪಾಡಿ ಗ್ರಾಮದ ಬನಾರಿಯಲ್ಲಿ ತೊಡಗಿದ ಇವರ ಶಿಕ್ಷಣ ಕಾಯಕಕ್ಕೀಗ ಸುವರ್ಣ ಸಂಭ್ರಮ.

 ಭಾಗವತಿಕೆ, ಮದ್ದಳೆ, ಚೆಂಡೆಯನ್ನು ಏಕಪ್ರಕಾರ ಸಾಮರ್ಥ್ಯದಿಂದ ಇದಮಿಥ§ಂ ಎಂದು ಕಲಿಸಬಲ್ಲ ಗುರು ಮಾಂಬಾಡಿಯವರು. ಎಳವೆಯಲ್ಲಿಯೇ ವೃತ್ತಿಪರ ಮೇಳಗಳನ್ನು ಸೇರಿ ಎರಡು ದಶಕಕ್ಕೂ ಮಿಕ್ಕಿ ವಿವಿಧ ಮೇಳಗಳಲ್ಲಿ ತಿರುಗಾಟ ನಡೆಸಿದ ಅನುಭವಿ. ನಿಡೆ ನರಸಿಂಹ ಭಟ್‌, ಕುದ್ರೆಕೋಡು ರಾಮ ಭಟ್‌, ಚಿಪ್ಪಾರು, ಕಡತೋಕ ಭಾಗವತರಂತಹ ದಿಗ್ಗಜರ ಒಡನಾಟದಿಂದ ಪಕ್ವಗೊಂಡ ನಾದ, ಲಯದೊಂದಿಗಿನ ರಂಗಾನುಭವವನ್ನು ಅವರು ಸಮರ್ಪಣಾ ಭಾವದಿಂದ ಧಾರೆಯೆರೆದುದು ತನ್ನ ಶಿಷ್ಯರಿಗೆ. ಮಾಂಬಾಡಿಯವರ ಚೆಂಡೆ ನುಡಿತದ ಸೊಗಸು ಒಂದು ಅವ್ಯಕ್ತ ಅನುಭವ.ಚೆಂಡೆಯೆಂಬುದು ಕೇವಲ ಏರು ಪದ್ಯಗಳಿಗೆ, ಧೂಳೆಬ್ಬಿಸಿ ಕುಣಿಯಲು ಬಾರಿಸಲಿರುವ ಪರಿಕರವಷ್ಟೇ ಎಂಬುದಾಗಿ ಭಾವಿಸುವುದನ್ನು ಹೋಗಲಾಡಿಸುವ ಅನುಭಾವದ ನುಡಿತ ಇವರದು. 

ಮಾಂಬಾಡಿಯವರ ಕೈಂಕರ್ಯದಿಂದಾಗಿ, ಇಂದು ಹಲವಾರು ವೃತ್ತಿಪರ ಹಿಮ್ಮೇಳವಾದಕರು, ಹವ್ಯಾಸಿ ಕಲಾವಿದರು ರೂಪುಗೊಂಡಿ¨ªಾರೆ. ಶಿಷ್ಯರಿಗೆ ತನ್ನಲ್ಲಿರುವ ಅಭಿಮಾನ, ಅವರ ಯಶಸ್ಸೇ ತನಗೆ ಸಿಕ್ಕಿದ ಪ್ರಶಸ್ತಿಯೆಂದು ವಿನಯದಿಂದ ಹೇಳುವ ಸುಬ್ರಹ್ಮಣ್ಯ ಭಟ್ಟರು, ಸ್ವಾಭಿಮಾನಿ ಕಲಾವಿದರಿಗೊಬ್ಬ ಮಾದರಿಯಾಗಬಲ್ಲ ವ್ಯಕ್ತಿತ್ವ ರೂಢಿಸಿಕೊಂಡವರು.  

ಮಾಂಬಾಡಿಯವರ ಹಿಮ್ಮೇಳ ಶಿಕ್ಷಣ ಕಾಯಕ ಐವತ್ತು ವಸಂತಗಳನ್ನು ಕಂಡ ಸವಿನೆನಪಿಗಾಗಿ, ಇವರ ಶಿಷ್ಯರೆಲ್ಲ ಸೇರಿ ನ.4ರಂದು ಮಂಗಳೂರು ಪುರಭವನದಲ್ಲಿ ಸಮಾವೇಶವೊಂದನ್ನು ಆಯೋಜಿಸಿದ್ದು, ವಿವಿಧ ಯಕ್ಷಗಾನ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಳ್ಳಲಿದೆ. ಎಲ್ಲಾ ಕಾರ್ಯಕ್ರಮಗಳನ್ನೂ ಮಾಂಬಾಡಿಯವರ ಶಿಷ್ಯರೇ ನಡೆಸಿಕೊಡುವುದು ಈ ಕಾರ್ಯಕ್ರಮದ ವಿಶೇಷತೆ. ಬೆಳಗ್ಗೆ 9ರಿಂದ ತೊಡಗುವ ಕಾರ್ಯಕ್ರಮದಲ್ಲಿ ಪೂರ್ವರಂಗ, ತಾಳಮದ್ದಳೆ, ಹವ್ಯಾಸಿ ಹಾಗೂ ವೃತ್ತಿಪರ ಭಾಗವತರಿಂದ ಗಾನವೈವಿಧ್ಯ, ಗಣ್ಯರ ಉಪಸ್ಥಿತಿಯಲ್ಲಿ ಗುರುವಂದನೆ ನಡೆಯಲಿದೆ. ದಾಖಲಾತಿಯ ದೃಷ್ಟಿಯಿಂದ ಮಾಂಬಾಡಿಯವರು ಹಾಡಿರುವ ಪೂರ್ವರಂಗದ ಹಾಡುಗಳು,ಅವರೇ ಚೆಂಡೆ ನುಡಿಸಿರುವ ಪ್ರಸಂಗ ಪೀಠಿಕೆಯ ಧ್ವನಿ ಸುರುಳಿಯ ಬಿಡುಗಡೆಯೂ ನಡೆಯಲಿದೆ. ಈ ಧ್ವನಿಸುರುಳಿಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್‌, ದೇಲಂತಮಜಲು ಸುಬ್ರಹ್ಮಣ್ಯ ಭಟ್‌ ಹಾಗೂ ನೆಕ್ಕರೆಮೂಲೆ ಗಣೇಶ ಭಟ್ಟರು ಸಾಥ್‌ ನೀಡಿದ್ದಾರೆ. ಕೊನೆಯಲ್ಲಿ, ಮಾಂಬಾಡಿಯವರಲ್ಲಿ ಹಿಮ್ಮೇಳ ಕಲಿತು ಮುಮ್ಮೇಳ ಕಲಾವಿದರಾಗಿ ಖ್ಯಾತನಾಮರಾದ ಕಲಾವಿದರಿಂದ ಯಕ್ಷಗಾನ ಬಯಲಾಟ ಪ್ರದರ್ಶನವಿದೆ. 

ಶಂ.ನಾ.ಬಾಯಾರು

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.