ಹೆಗಡೆಯವರಿಗೆ ಚಿಟ್ಟಾಣಿ- ಮಲ್ಯರಿಗೆ ಟಿ.ವಿ.ರಾವ್‌ ಪ್ರಶಸ್ತಿ 


Team Udayavani, Nov 2, 2018, 6:00 AM IST

s-9.jpg

ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಜರಗುತ್ತಿರುವ ಚಿಟ್ಟಾಣಿ ಸಂಸ್ಮರಣ ಯಕ್ಷಗಾನ ಸಪ್ತಾಹ-2018ರ ಸಮಾರೋಪ ಸಮಾರಂಭದಂದು ಯಕ್ಷಗಾನ ಹಿರಿಯ ಕಲಾವಿದ ಕಪ್ಪೆಕೆರೆ ಮಾಧವ ಹೆಗಡೆಯವರಿಗೆ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಪ್ರಶಸ್ತಿಯನ್ನೂ, ಚಿಟ್ಟಾಣಿ ಅಭಿಮಾನಿ ಬಳಗದ ಗೌರವಾಧ್ಯಕ್ಷರಾಗಿದ್ದ ಟಿ.ವಿ.ರಾವ್‌ ನೆನಪಿನಲ್ಲಿ ನೀಡುವ ಪ್ರಶಸ್ತಿಯನ್ನು ಹಿರಿಯ ಹವ್ಯಾಸಿ ಕಲಾವಿದ ಮಧುಕರ ಮಲ್ಯ ಅವರಿಗೆ ಪ್ರದಾನ ಮಾಡಲಾಗುವುದು. 

ಮಾಧವ ಹೆಗಡೆ 
1950ರಲ್ಲಿ ಹೊನ್ನಾವರ ತಾಲೂಕಿನ ಹಡಿನಬಾಳದ ಕಪ್ಪೆಕೆರೆಯಲ್ಲಿ ಜನಿಸಿದ ಹೆಗಡೆಯವರು ಓದಿದ್ದು ಹತ್ತನೇ ತರಗತಿಯವರೆಗೆ. ಇವರಿಗೆ ಯಕ್ಷಗಾನ ಅನುವಂಶೀಯವಾಗಿ ಬಂದ ಬಳುವಳಿ. ತಾಯಿಯ ತಂದೆ ಯಕ್ಷಗಾನ ಕಲಾವಿದರು. ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಪ್ರಸಿದ್ಧ ಭಾಗವತರು. ಸುಬ್ರಾಯ ಹೆಗಡೆಯವರೇ ಇವರಿಗೆ ಯಕ್ಷಗಾನದ ಗುರು. ಕೆರೆಮನೆ ಮಹಾಬಲ ಹೆಗಡೆಯವರ ಗರಡಿಯಲ್ಲಿ ಪಳಗಿ ಗುಂಡುಬಾಳ, ಕಮಲಶಿಲೆ, ಅಮೃತೇಶ್ವರಿ, ಇಡಗುಂಜಿ, ಶಿರಸಿ, ಪಂಚಲಿಂಗ ಹಾಗೂ ಮಂದಾರ್ತಿ ಮೇಳಗಳಲ್ಲಿ ನಾಲ್ಕು ದಶಕಗಳ ಕಲಾಸೇವೆಗೈದಿರುತ್ತಾರೆ. 

ನಾಯಕ-ಪ್ರತಿನಾಯಕ ಎರಡೂ ರೀತಿಯ ಪಾತ್ರಗಳಲ್ಲಿ ಕಲಾಪ್ರೌಢಿಮೆ ಮೆರೆದು ಕಲಾರಸಿಕರ ಮನಗೆದ್ದಿದ್ದಾರೆ. ಭೀಷ್ಮ, ವಲಲ, ಭೀಮ, ಸುಗ್ರೀವ, ವಾಲಿ, ಶ್ರೀರಾಮ, ಶತ್ರುಘ್ನ, ಮಹೋಗ್ರ, ಜಮದಗ್ನಿ, ರಾವಣ, ಮಾಗಧ, ಹರಿಶ್ಚಂದ್ರ, ವಿಶ್ವಾಮಿತ್ರ, ಮೊದಲಾದ ಪಾತ್ರಗಳು ಇವರಿಗೆ ಪ್ರಸಿದ್ಧಿ ತಂದಿವೆ.  ಮಧುಕರ ಮಲ್ಯ 

 ಮಧುಕರ ಮಲ್ಯರು ಶಿಕ್ಷಕರಾಗಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಈಗ ನಿವೃತ್ತರು. ವಿದ್ಯಾರ್ಥಿಯಾಗಿರುವಾಗಲೇ ಯಕ್ಷಗಾನ ಹಾಗು ಇನ್ನಿತರ ಕಲಾಪ್ರಕಾರಗಳನ್ನು ಆಸಕ್ತರಾಗಿ ಅಭ್ಯಾಸ ನಡೆಸಿದರು. ಕಟಪಾಡಿಯಲ್ಲಿದ್ದ ಸಮಯದಲ್ಲಿ ಟಿ.ವಿ.ರಾವ್‌ ನೇತೃತ್ವದ ಮಂಜುಳಾ ಯಕ್ಷಗಾನ ಸಂಘದಲ್ಲಿ ಅತ್ಯುತ್ತಮ ಅರ್ಥಧಾರಿಯಾಗಿ ಹವ್ಯಾಸಿ ವೇಷಧಾರಿಯಾಗಿ ಮೂಡಿಬಂದರು. ಸ್ತ್ರೀಪಾತ್ರದ ಅರ್ಥಗಾರಿಕೆಯಲ್ಲಿ ಅಪೂರ್ವ ಸಿದ್ಧಿ ಪಡೆದ ಅವರು ಅನೇಕ ಪೌರಾಣಿಕ ಸ್ತ್ರೀಪಾತ್ರಗಳನ್ನು ವಾಗ್ವೆ„ಖರಿಯಿಂದ ಅನನ್ಯವಾಗಿ ಕಟ್ಟಿಕೊಟ್ಟಿದಾರೆ. ಹಿರಿಯರ ಕೂಟಗಳಲ್ಲಿ ಘಟಾನುಘಟಿಗಳೊಂದಿಗೆ ಸಮದಂಡಿಯಾಗಿ ಅರ್ಥಗಾರಿಕೆ ಮೆರೆದಿದ್ದಾರೆ. ಏಸುಕ್ರಿಸ್ತ ಮಹಾತ್ಮೆಯಲ್ಲಿ ಏಸು ಮತ್ತು ಅಂತೋನಿ ಪಾತ್ರಗಳನ್ನು ಮನೋಜ್ಞವಾಗಿ ನಿರ್ವಹಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. 

ನಾರಾಯಣ ಎಂ.ಹೆಗಡೆ 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.