2019ರ ಚುನಾವಣೆ ಗೆಲ್ಲಲು ಬಿಜೆಪಿಗೆ ಶ್ರೀರಾಮ ನೆರವಾಗಲಾರ: ಫಾರೂಕ್
Team Udayavani, Nov 1, 2018, 4:09 PM IST
ಹೊಸದಿಲ್ಲಿ : ಅಯೋಧ್ಯೆಯಲ್ಲಿ ರಾಮ ಮಂದಿ ನಿರ್ಮಿಸುವ ಕುರಿತಾದ ವಿವಾದ ಸಾಗುತ್ತಿರುವ ನಡುವೆಯೇ ಬಿಜೆಪಿ ವಿರುದ್ಧ ವಾಕ್ ದಾಳಿ ನಡೆಸಿರುವ ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲ ಅವರು “2019ರ ಲೋಕಸಭಾ ಚುನಾವಣೆಯನ್ನು ಗೆಲ್ಲುವುದಕ್ಕೆ ಬಿಜೆಪಿಗೆ ಶ್ರೀರಾಮನು ಸಹಾಯ ಮಾಡುವುದಿಲ್ಲ’ ಎಂದು ಟೀಕಿಸಿದ್ದಾರೆ.
2019ರ ಲೋಕಸಭಾ ಚುನಾವಣೆಗೆ ಮುನ್ನ ದೇಶವನ್ನು ರಾಮ ಮಂದಿರ – ಬಾಬರಿ ಮಸೀದಿ ವಿಷಯದಲ್ಲಿ ವಿಭಜಿಸುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ ಎಂದು ಅನೇಕ ವಿರೋಧ ಪಕ್ಷಗಳು ಆರೋಪಿಸುತ್ತಿರುವ ನಡುವೆಯೇ ಫಾರೂಕ್ ಅಬ್ದುಲ್ಲ ಅವರು ಈ ಮಾತನ್ನು ಆಡಿರುವುದು ಗಮನಾರ್ಹವಾಗಿದೆ.
“ಚುನಾವಣೆಯಲ್ಲಿ ಮತ ಚಲಾಯಿಸುವವರು ಜನರೇ ವಿನಾ ಭಗವಾನ್ ರಾಮ ಅಥವಾ ಅಲ್ಲಾಹು ಅಲ್ಲ; ಅಂತೆಯೇ ಬಿಜೆಪಿಗೆ ಚುನಾವಣೆಯನ್ನು ಗೆಲ್ಲುವುದಕ್ಕೆ ಶ್ರೀರಾಮ ನೆರವಾಗುವುದಿಲ್ಲ’ ಎಂದು ಫಾರೂಕ್ ಹೇಳಿದರು.
ಕಳೆದ ವಾರ ಸುಪ್ರೀಂ ಕೋರ್ಟ್ ರಾಮಜನ್ಮ ಭೂಮಿ – ಬಾಬರಿ ಮಸೀದಿ ಪ್ರಕರಣದ ವಿಚಾರಣೆಯನ್ನು 2019ರ ಜನವರಿಗೆ ಮುಂದೂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್