ಐದು ಕ್ಷೇತ್ರಗಳ ಭವಿಷ್ಯ ಇಂದು ನಿರ್ಧಾರ


Team Udayavani, Nov 3, 2018, 6:00 AM IST

v-9.jpg

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಐದು ಕ್ಷೇತ್ರಗಳ ಉಪ ಚುನಾವಣೆಗೆ ಶನಿವಾರ ಮತದಾನ ನಡೆಯಲಿದೆ. ರಾಜ್ಯ ರಾಜಕಾರಣದಲ್ಲಿ ಮತ್ತೂಂದು ಹಂತದ ಧ್ರುವೀಕರಣ ತರಲಿದೆ ಎಂದೇ ಬಿಂಬಿತವಾಗಿರುವ ಚುನಾವಣೆಯ ಫ‌ಲಿತಾಂಶವನ್ನು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಹಾಗೂ ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಮತದಾನದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಹೀಗಾಗಿ, ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರವೂ ಶುಕ್ರವಾರ ಅಭ್ಯರ್ಥಿಗಳು ಹಾಗೂ ಸ್ಥಳೀಯ ನಾಯಕರು ಮನೆ, ಮನೆಗೆ ತೆರಳಿ ಮತದಾರರ ಕೃಪೆಗಾಗಿ ಅಂತಿಮ ಹಂತದ ಕಸರತ್ತು ನಡೆಸಿದರು.

ಐದು ಕ್ಷೇತ್ರಗಳಲ್ಲಿ ಒಟ್ಟು 30 ಮಂದಿ ಕಣದಲ್ಲಿದ್ದಾರೆ. ಪ್ರಮುಖವಾಗಿ ಶಿವಮೊಗ್ಗ ಹಾಗೂ ಬಳ್ಳಾರಿ ಲೋಕಸಭೆ, ಜಮಖಂಡಿ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ದಿ.ಎಸ್‌. ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ, ಬಳ್ಳಾರಿಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಎಸ್‌.ಉಗ್ರಪ್ಪ, ಶಾಸಕ ಶ್ರೀರಾಮುಲು ಸಹೋದರಿ ಶಾಂತಾ, ಜಮಖಂಡಿಯಲ್ಲಿ ಮಾಜಿ ಸಚಿವ ದಿ.ಸಿದ್ದು ನ್ಯಾಮಗೌಡ ಪುತ್ರ ಆನಂದ್‌ ನ್ಯಾಮಗೌಡ, ಬಿಜೆಪಿಯ ಶ್ರೀಕಾಂತ ಕುಲಕರ್ಣಿ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. 

ಈ ಮಧ್ಯೆ, ಯುದ್ಧ ಭೂಮಿಯಲ್ಲಿ ಶಸ್ತ್ರ ಉತ್ಯಾಗ ಎಂಬಂತೆ ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದ್ರಶೇಖರ್‌ ಅವರು ನಿವೃತ್ತಿ ಘೋಷಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯುಂಟಾಗಿದೆ. ಅಲ್ಲಿ ಮತದಾನ “ಒನ್‌ ಸೈಡೆಡ್‌’ ಎಂಬಂತಾಗಿದೆ. ಇನ್ನು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದಿಂದ ಎಲ್‌.ಆರ್‌. ಶಿವರಾಮೇಗೌಡ ಹಾಗೂ ಬಿಜೆಪಿಯ ಸಿದ್ದರಾಮಯ್ಯ ನಡುವೆ ನೇರ ಹಣಾಹಣಿಯಿದೆ.

ಮತದಾನ ಸಮಯ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ.

ಲೋಕಸಭಾ ಕ್ಷೇತ್ರಗಳು

ಬಳ್ಳಾರಿ
ಅಭ್ಯರ್ಥಿಗಳು
ಜೆ.ಶಾಂತಾ (ಬಿಜೆಪಿ).
ವಿ.ಎಸ್‌.ಉಗ್ರಪ್ಪ (ಕಾಂಗ್ರೆಸ್‌)
ಡಾ| ಟಿ.ಆರ್‌.ಶ್ರೀನಿವಾಸ್‌,
ಪಂಪಾಪತಿ. (ಪಕ್ಷೇತರ )

ಮತದಾರರು
ಪುರುಷರು: 8,45,561
ಮಹಿಳೆಯರು: 8,54,561
ಇತರರು: 215
ಒಟ್ಟು: 1708266

ಕ್ಷೇತ್ರವ್ಯಾಪ್ತಿ
ಬಳ್ಳಾರಿ ನಗರ, ಬಳ್ಳಾರಿ
ಗ್ರಾಮಾಂತರ, ವಿಜಯನಗರ, ಕಂಪ್ಲಿ,
ಸಂಡೂರು, ಕೂಡ್ಲಿಗಿ, ಹಗರಿ
ಬೊಮ್ಮನಹಳ್ಳಿ, ಹೂವಿನಹಡಗಲಿ
ವಿಧಾನಸಭಾ ಕ್ಷೇತ್ರಗಳು

ಶಿವಮೊಗ್ಗ
ಅಭ್ಯರ್ಥಿಗಳು
ಬಿ.ವೈ.ರಾಘವೇಂದ್ರ (ಬಿಜೆಪಿ),
ಮಧು ಬಂಗಾರಪ್ಪ (ಜೆಡಿಎಸ್‌),
ಮಹಿಮಾ ಪಟೇಲ್‌ (ಜೆಡಿಯು).

ಮತದಾರರು
ಪುರುಷರು: 8,17,942
ಮಹಿಳೆಯರು: 8,27,109
ಇತರರು: 460
ಒಟ್ಟು: 16,45,511

ಕ್ಷೇತ್ರವ್ಯಾಪ್ತಿ
ಶಿವಮೊಗ್ಗ ನಗರ, ಗ್ರಾಮಾಂತರ,
ಭದ್ರಾವತಿ, ತೀರ್ಥಹಳ್ಳಿ, ಸಾಗರ,
ಸೊರಬ, ಶಿಕಾರಿಪುರ ಮತ್ತು
ಉಡುಪಿ ಜಿಲ್ಲೆಯ ಬೈಂದೂರು
ವಿಧಾನಸಭೆ ಕ್ಷೇತ್ರ.

ಮಂಡ್ಯ
ಅಭ್ಯರ್ಥಿಗಳು
ಶಿವರಾಮೇಗೌಡ- (ಜೆಡಿಎಸ್‌)
ಡಾ.ಸಿದ್ದರಾಮಯ್ಯ- (ಬಿಜೆಪಿ)
ಏಳು ಪಕ್ಷೇತರರು

ಮತದಾರರು
ಪುರುಷರು: 8,43,335
ಮಹಿಳೆಯರು: 8,40,971
ಸೇವಾ ಮತದಾರರು: 676
ಇತರರು: 140
ಒಟ್ಟು: 16,84,446

ಕ್ಷೇತ್ರವ್ಯಾಪ್ತಿ
ಮಳವಳ್ಳಿ, ಮದ್ದೂರು, ಮಂಡ್ಯ,
ನಾಗಮಂಗಲ, ಶ್ರೀರಂಗಪಟ್ಟಣ,
ಕೆ.ಆರ್‌.ಪೇಟೆ, ಮೇಲುಕೋಟೆ
ಹಾಗೂ ಕೆ.ಆರ್‌.ನಗರ ವಿಧಾನಸಭಾ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.