ಕಾಗದ ರಹಿತ ವಿಧಾನ ಮಂಡಲಕ್ಕೆ ಇ ವಿಧಾನ್
Team Udayavani, Nov 3, 2018, 6:00 AM IST
ಬೆಂಗಳೂರು: ವಿಧಾನಮಂಡಲದ ಅಧಿವೇಶನ ಒಳಗೊಂಡಂತೆ ಶಾಸಕಾಂಗದ ಎಲ್ಲ ಪತ್ರ ವ್ಯವಹಾರ ಗಣಕೀಕರಣ ಗೊಳಿಸಲು ಹಾಗೂ ಕಾಗದ ರಹಿತ ಶಾಸಕಾಂಗ ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರ ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ ಇ ವಿಧಾನ್ ಅಪ್ಲಿಕೇಷನ್ ಎಂಬ ಮಿಷನ್ ಮೂಡ್ ಯೋಜನೆ ಜಾರಿಗೆ ತರಲು ನಿರ್ದೇಶಿಸಿದೆ. ಇ ವಿಧಾನ್ ಯೋಜನೆಯನ್ನು ಹಿಮಾಚಲ ಪ್ರದೇಶದಲ್ಲಿ ಪ್ರಥಮವಾಗಿ ಜಾರಿಗೆ ತರಲಾಗಿದ್ದು, ಇದರಿಂದ ಪ್ರೇರಿತಗೊಂಡ ಕೇಂದ್ರ ಸರ್ಕಾರ ಒನ್ ನೇಷನ್ ಒನ್ ಅಪ್ಲಿಕೇಷನ್ ಶೀರ್ಷಿಕೆಯಡಿ ಎಲ್ಲ ರಾಜ್ಯಗಳಲ್ಲೂ ಇ ವಿಧಾನ್ ಯೋಜನೆ ಜಾರಿಗೆ ತರಲು ಯೋಜನೆ ರೂಪಿಸಿದೆ.
ಶುಕ್ರವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ರ್ಯಕ್ರಮದಲ್ಲಿ ಇ ವಿಧಾನ್ ಪ್ರಶಿಕ್ಷಣ ಕಾರ್ಯಾಗಾರ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿ, ಈ ಯೋಜನೆ ಒಂದು ಮೈಲಿಗಲ್ಲಾಗಿದೆ. ಈ ಯೋಜನೆ ಪ್ರಾಮಾಣಿಕವಾಗಿ ಜಾರಿಗೆ ತರಲು ಎಲ್ಲ ಅಧಿಕಾರಿ ವರ್ಗದವರು ಶ್ರಮಿಸಬೇಕು ಎಂದು ಹೇಳಿದರು.
ಸಂಸದೀಯ ವ್ಯವಹಾರಗಳ ಮಂತ್ರಾಲಯದ ಅಧಿಕಾರಿಗಳು ರಾಜ್ಯ ವಿಧಾನಸಭೆ ಸಚಿವಾಲಯದ ಅಧಿಕಾರಿ/ ನೌಕರರಿಗೆ ಮೊದಲ ಹಂತದಲ್ಲಿ ವಿಧಾನಮಂಡಲದ ಮಾಹಿತಿಗಳನ್ನು ಸದಸ್ಯರಿಗೆ ಅಂತರ್ಜಾಲ ಹಾಗೂ ಮೊಬೈಲ್ಗಳಲ್ಲಿ ಹೇಗೆ ಒದಗಿಸಬೇಕೆಂಬ ಬಗ್ಗೆ ತರಬೇತಿ ಸಹ ನೀಡಿದರು.
ವಿಧಾನಸಭೆ ಉಪಾಧ್ಯಕ್ಷ ಕೆ.ಎಂ.ಕೃಷ್ಣಾರೆಡ್ಡಿ, ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!