ಶಂಕಿತ ಅಗ್ರ 9 ಮಂದಿ ಕ್ರಿಕೆಟಿಗರ ವಿರುದ್ಧ ಫಿಕ್ಸಿಂಗ್‌ ವಿಚಾರಣೆ?


Team Udayavani, Nov 3, 2018, 6:00 AM IST

v-19.jpg

ನವದೆಹಲಿ: ಭಾರತ ಕ್ರಿಕೆಟ್‌ನಲ್ಲಿ ಮತ್ತೂಮ್ಮೆ ಸಂಚಲನ ಸೃಷ್ಟಿಯಾಗುವ ಸಾಧ್ಯತೆ ದಟ್ಟವಾಗಿದೆ. ಇದುವರೆಗೆ ಬೂದಿ ಮುಚ್ಚಿದ ಕೆಂಡದಂತಿರುವ ಸ್ಪಾಟ್‌ಫಿಕ್ಸಿಂಗ್‌ ಪ್ರಕರಣ ಮತ್ತೆ ಮುನ್ನೆಲೆಗೆ ಬರುವ ಪರಿಸ್ಥಿತಿಯೊಂದು ತೆರೆದುಕೊಂಡಿದೆ. 2013ರ ಐಪಿಎಲ್‌ ಸ್ಪಾಟ್‌ಫಿಕ್ಸಿಂಗ್‌ ಪ್ರಕರಣದ ತನಿಖೆ ನಡೆಸಿದ್ದ ಮುಕುಲ್‌ ಮುದ್ಗಲ್‌ ಸಮಿತಿ 2014ರಲ್ಲಿ ವರದಿ ನೀಡಿತ್ತು. ಅದರಲ್ಲಿ ದೇಶದ 9 ಕ್ರಿಕೆಟಿಗರ
ಹೆಸರೂ ಇದೆ. ಇದುವರೆಗೆ ರಹಸ್ಯವಾಗಿರುವ ಆ ಹೆಸರನ್ನು ನಮಗೆ ನೀಡಿ, ನಾವು ವಿಚಾರಣೆ ನಡೆಸುತ್ತೇವೆಂದು ಬಿಸಿಸಿಐ ಆಡಳಿತಾಧಿಕಾರಿಗಳು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಒಂದು ವೇಳೆ ನ್ಯಾಯಾಲಯ ಈ ಮನವಿಗೆ
ಒಪ್ಪಿಗೆಯಿತ್ತರೆ ವಿಶ್ವಾದ್ಯಂತ ಭಾರೀ ಸುದ್ದಿಯಾಗುವ ಸಾಧ್ಯತೆಯಿದೆ.

2014ರಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ನೀಡಿದ್ದ ವರದಿಯಲ್ಲಿ ಒಟ್ಟು 13 ಮಂದಿಯ ಹೆಸರಿತ್ತು. ಅದರಲ್ಲಿ 4 ಮಂದಿ ಅಧಿಕಾರಿಗಳು ಸ್ಥಾನ ಪಡೆದಿದ್ದರು. ನ್ಯಾಯಾಲಯ ನಾಲ್ವರ ಹೆಸರನ್ನು ಬಹಿರಂಗ ಮಾಡಿ, ಕ್ರಿಕೆಟಿಗರ ಹೆಸರನ್ನು ಮಾತ್ರ ಬಚ್ಚಿಟ್ಟಿತ್ತು. ಸಾಕ್ಷ್ಯಾಧಾರದ ಕೊರತೆಯಿರುವುದರಿಂದ ಕ್ರಿಕೆಟಿಗರ ಜೀವನ ಹಾಳು ಮಾಡಬಾರದೆನ್ನುವ ದೃಷ್ಟಿಯಿಂದ ನ್ಯಾಯಪೀಠ ಈ ಕ್ರಮ ಕೈಗೊಂಡಿತ್ತು.
ಆದರೆ 2015ರಲ್ಲಿ ಬಿಸಿಸಿಐಗೆ ಆಡಳಿತಾತ್ಮಕ ಸುಧಾರಣೆ ಮಾಡಲು ನೇಮಿಸಲ್ಪಟ್ಟಿದ್ದ ಲೋಧಾ ಸಮಿತಿಗೆ ಆಸಕ್ತಿಯಿದ್ದರೆ ಈ ಬಗ್ಗೆ ಗಮನಹರಿಸುವಂತೆ ನ್ಯಾಯಪೀಠ ಸೂಚಿಸಿತ್ತು. ಇದೇ ವಿಚಾರವನ್ನು ನ್ಯಾಯಪೀಠಕ್ಕೆ ತಿಳಿಸಿರುವ ಬಿಸಿಸಿಐ ಮುಖ್ಯ ಆಡಳಿತಾಧಿಕಾರಿ ವಿನೋದ್‌ ರಾಯ್‌, ಮುದ್ಗಲ್‌ ಸಮಿತಿಯಲ್ಲಿ ಹೆಸರಿಸಲ್ಪಟ್ಟಿರುವ ಕ್ರಿಕೆಟಿಗರು ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಈ ಉದ್ದೇಶದಿಂದ ಸರ್ವೋಚ್ಚ ನ್ಯಾಯಾಲಯ ಮುದ್ಗಲ್‌ ವರದಿಯ ಉಳಿದ ಭಾಗಗಳನ್ನು ಬಿಸಿಸಿಐ
ಭ್ರಷ್ಟಾಚಾರ ನಿಗ್ರಹದಳಕ್ಕೆ ನೀಡಬೇಕು ಎಂದು ಹೇಳಿದ್ದಾರೆ.

ಈಗ ಪ್ರಕರಣ ಸುದ್ದಿಯಾಗಲು ಕಾರಣ?: ಕೆಲ ದಿನಗಳ ಹಿಂದೆ ಇಂಡಿಯನ್‌ ಎಕ್ಸ್‌ಪ್ರೆಸ್‌ ಪತ್ರಿಕೆಗೆ ಸಂದರ್ಶನ ನೀಡಿದ್ದ ಮಾಜಿ ಐಪಿಎಸ್‌ ಅಧಿಕಾರಿ, ಮುದ್ಗಲ್‌ ಸಮಿತಿಯ ಮುಖ್ಯ ವಿಚಾರಣಾಧಿಕಾರಿ ಬಿ.ಬಿ.ಮಿಶ್ರಾ ಭಾರತದ ಅಗ್ರ ಕ್ರಿಕೆಟಿಗರೊಬ್ಬರಿಗೆ ಬುಕಿಯ ಸಂಪರ್ಕವಿತ್ತು. ಸಮಯಾವಕಾಶ ಕಡಿಮೆಯಿದ್ದಿದ್ದರಿಂದ ಆ ವಿಚಾರಣೆಯನ್ನು ಮುಗಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದರು. ನಾವು 13 ಮಂದಿಯನ್ನು ಶಂಕಿತರ ಪಟ್ಟಿಗೆ ಸೇರಿಸಿದ್ದೆವು. ಈ ಪೈಕಿ 9 ಕ್ರಿಕೆಟಿಗರ ಹೆಸರನ್ನು ಬಿಟ್ಟು ಉಳಿದ ನಾಲ್ವರು ಅಧಿಕಾರಿಗಳ ಹೆಸರನ್ನು ಮಾತ್ರ ಬಹಿರಂಗಗೊಳಿಸಲಾಗಿದೆ. ನಾವು ನೀಡಿದ ಪಟ್ಟಿಯಲ್ಲಿರುವುದು ಒಬ್ಬಿಬ್ಬರು ಕ್ರಿಕೆಟಿಗರಲ್ಲ, 9 ಮಂದಿ. ಆದ್ದರಿಂದ ಅವರನ್ನು ವಿಚಾರಣೆ ನಡೆಸಲೇಬೇಕು ಎಂದು ಮಿಶ್ರಾ ಹೇಳಿದ್ದರು. ಇದಾದ ಬಳಿಕ ಮತ್ತೂಮ್ಮೆ ಈ ಪ್ರಕರಣ ಮಹತ್ವ
ಪಡೆದುಕೊಂಡಿದೆ.

2014ರಲ್ಲಿ ಮುದ್ಗಲ್‌ ಸಮಿತಿ ವರದಿ ಸಲ್ಲಿಸಿದ್ದಾಗ, ಬಿಸಿಸಿಐ ಅಂದಿನ ಅಧ್ಯಕ್ಷ ಎನ್‌.ಶ್ರೀನಿವಾಸನ್‌, ಅಂದಿನ ಐಪಿಎಲ್‌ ಸಿಒಒ ಸುಂದರ್‌ ರಾಮನ್‌, ರಾಜಸ್ಥಾನ್‌ ರಾಯಲ್ಸ್‌ ತಂಡದ ಮಾಜಿ ಸಹ ಮುಖ್ಯಸ್ಥ ರಾಜ್‌ ಕುಂದ್ರಾ, ಚೆನ್ನೈ ಕಿಂಗ್ಸ್‌ ಮಾಜಿ ಮುಖ್ಯಸ್ಥ ಗುರುನಾಥ್‌ ಮೈಯಪ್ಪನ್‌ರನ್ನು ಸರ್ವೋಚ್ಚ ನ್ಯಾಯಾಲಯ ವಿಚಾರಣೆಗೊಳಪಡಿಸಿತ್ತು. ಈ ಪೈಕಿ ಶ್ರೀನಿವಾಸನ್‌, ಸುಂದರ್‌ ರಾಮನ್‌ ನಿರ್ದೋಷಿಗಳೆಂದು ಹೇಳಲಾಗಿದ್ದರೆ, ರಾಜ್‌ ಕುಂದ್ರಾ ಮತ್ತು ಗುರುನಾಥ್‌ ತಪ್ಪಿತಸ್ಥರು ಎಂದು ಸಾಬೀತಾಗಿತ್ತು. ಕುಂದ್ರಾ ಮತ್ತು ಮೈಯಪ್ಪನ್‌ರನ್ನು ಕ್ರಿಕೆಟ್‌ ಚಟುವಟಿಕೆಗಳಿಂದ ಆಜೀವ ನಿಷೇಧಿಸಲಾಗಿದೆ. ಗಲಾಟೆಯೆಬ್ಬಿಸಿದ್ದ 2013ರ ಐಪಿಎಲ್‌ ಫಿಕ್ಸಿಂಗ್‌ 2013ರ ಐಪಿಎಲ್‌ ಆವೃತ್ತಿಯಲ್ಲಿ ಸ್ಪಾಟ್‌ಫಿಕ್ಸಿಂಗ್‌ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಸ್ಥಾನ್‌ ರಾಯಲ್ಸ್‌ 
ಆಟಗಾರರಾದ ಎಸ್‌.ಶ್ರೀಶಾಂತ್‌, ಅಂಕಿತ್‌ ಚವಾಣ್‌, ಅಜಿತ್‌ ಚಂಡೀಲಾರನ್ನು ಪೊಲೀಸರು ಬಂಧಿಸಿದ್ದರು. ನಂತರ ವಿಚಾರಣೆ ನಡೆಸಿದ್ದ ದೆಹಲಿ ವಿಶೇಷ ನ್ಯಾಯಾಲಯ, ಸಾಕ್ಷ್ಯಾಧಾರದ ಕೊರತೆಯಿಂದ ಎಲ್ಲ ಆರೋಪಿಗಳನ್ನು ನಿರ್ದೋಷಿಗಳೆಂದು ಹೇಳಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಮುದ್ಗಲ್‌ ಸಮಿತಿಯನ್ನು ನೇಮಿಸಿ ವಿಚಾರಣೆ ನಡೆಸಲು ಆದೇಶ ನೀಡಿತ್ತು. ಈ ವರದಿ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಹಲವು ಪ್ರಮುಖ ವ್ಯಕ್ತಿಗಳು ತಮ್ಮ ಸ್ಥಾನ ಕಳೆದುಕೊಳ್ಳಲು
ಕಾರಣವಾಗಿತ್ತು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.