ಶೂ-ಸಮವವಸ್ತ್ರಕ್ಕೆ ಪ್ರಮಾಣಪತ್ರ ಕಡ್ದಾಯ


Team Udayavani, Nov 3, 2018, 4:57 PM IST

3-november-19.gif

ಕೊಪ್ಪಳ: ಜಿಲ್ಲೆಯಲ್ಲಿ ಶಾಲಾ ಸಮವಸ್ತ್ರ ಹಾಗೂ ಶೂ ಖರೀದಿಯಲ್ಲಿ ಭರ್ಜರಿ ಆಟವಾಡುತ್ತಿದ್ದ ಏಜೆನ್ಸಿಗಳಿಗೆ ಜಿಲ್ಲಾ ಪಂಚಾಯಿತಿ ಈ ಬಾರಿ ಶಾಕ್‌ ನೀಡಿದೆ. ಯಾವುದೇ ಏಜೆನ್ಸಿ ಶಾಲೆಗಳಿಗೆ ಬಟ್ಟೆ ಪೂರೈಕೆ ಮಾಡುವ ಮುನ್ನ ಗುಣಮಟ್ಟದ ಪ್ರಮಾಣ ಪತ್ರವನ್ನು ತೋರಿಸುವುದು ಕಡ್ಡಾಯ ಮಾಡಿದೆ. ಇದು ಏಜೆನ್ಸಿಗಳಿಗೆ ನುಂಗಲಾರದ ತುಪ್ಪದಂತಾಗಿದೆ.

ಹೌದು. ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಸರ್ಕಾರದಿಂದ ವಿತರಣೆ ಮಾಡುವ ಸಮವಸ್ತ್ರ ಪೂರೈಕೆಗೆ ಪ್ರಭಾವಿಗಳ ಆಟ ಭರ್ಜರಿಯಾಗಿ ನಡೆಯುತ್ತಿತ್ತು. ವಿಶೇಷವೆಂದರೆ, ರಾಜ್ಯ ಶಿಕ್ಷಣ ಇಲಾಖೆಯಿಂದ ಆಯಾ ಶಾಲೆ- ಎಸ್‌ ಡಿಎಂಸಿ ಖಾತೆಗೆ ಅನುದಾನ ನೇರವಾಗಿ ಜಮಾ ಮಾಡುವ ವ್ಯವಸ್ಥೆಯಿದ್ದರೂ ಸಮವಸ್ತ್ರ, ಶೂ ಖರೀದಿಯಲ್ಲಿ ಆಂತರಿಕ ರಾಜಕಾರಣವೇ ಜೋರಾಗಿ ನಡೆಯುತ್ತಿತ್ತು. ಮೇಲ್ನೋಟಕ್ಕೆ ಬಿಇಒ, ಡಿಡಿಪಿಐ ಹಸ್ತಕ್ಷೇಪ ಇಲ್ಲ ಎಂದರೂ ಪರೋಕ್ಷವಾಗಿ ಸೂಚನೆ ನೀಡುವ ಮಾತುಗಳು ಕೇಳಿ ಬರುತ್ತಿದ್ದವು.

ಇನ್ನೂ ಜಿಲ್ಲಾದ್ಯಂತ ಎಲ್ಲೆಂದರಲ್ಲಿ ತಲೆ ಎತ್ತಿದ್ದ ಏಜೆನ್ಸಿಗಳು ಆಯಾ ಶಾಲೆಗೆ ಭೇಟಿ ನೀಡಿ ಶಾಲಾ ಸಮವಸ್ತ್ರ ನಾವು ಪೂರೈಸುತ್ತೇವೆ ಎಂದು ದುಂಬಾಲು ಬೀಳುತ್ತಿದ್ದವು. ಇದರಿಂದ ಎಸ್‌ಡಿಎಂಸಿ ಆಟವೂ ಜೋರಾಗಿ ನಡೆಯುತ್ತಿತ್ತು. ಶಾಲಾ ಮುಖ್ಯ ಶಿಕ್ಷಕರು ಏಜೆನ್ಸಿಗಳ ಜೊತೆ ಒಪ್ಪಂದ ಮಾಡಿಕೊಂಡು ಸಮವಸ್ತ್ರ ಪಡೆಯುತ್ತಿದ್ದರು. ಆದರೆ, ಆ ಸಮವಸ್ತ್ರಗಳು ಸಹ ಗುಣಮಟ್ಟ ಇಲ್ಲದಿರುವ ಕುರಿತು ಆಪಾದನೆಗಳು ಕೇಳಿ ಬರುತ್ತಿದ್ದವು. ಇದು ವ್ಯಾಪಕ ಚರ್ಚೆಗೆ ಎಡೆಮಾಡಿಕೊಡುತ್ತಿತ್ತು. ಏಜೆನ್ಸಿಗಳಿಗೆ ಬ್ರೆಕ್‌ ಹಾಕಬೇಕೆನ್ನುವ ಕೂಗು ಎಲ್ಲೆಡೆ ಕೇಳಿ ಬಂದಿತ್ತು. ಇದರಿಂದ ಎಚ್ಚೆತ್ತಿರುವ ಜಿಪಂ ಗುಣಮಟ್ಟದ ಕುರಿತು ಮಾತನ್ನಾಡಿದೆ.

ಪ್ರಮಾಣಪತ್ರ ಅವಶ್ಯ: ಇನ್ಮುಂದೆ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಸಮವಸ್ತ್ರ ಹಾಗೂ ಶೂ ವಿತರಣೆ ಮಾಡುವೆವು ಎನ್ನುವ ಏಜೆನ್ಸಿಗಳು ಸಮವಸ್ತ್ರಗಳ ಪೂರೈಕೆಯ ಕುರಿತು ಬೆಂಗಳೂರಿನಿಂದ ಗುಣಮಟ್ಟದ ಪ್ರಮಾಣಪತ್ರ ತರುವುದು ಅವಶ್ಯವಾಗಿದೆ. ಅದನ್ನು ಶಾಲೆಗಳಲ್ಲಿ ತೋರಿಸಿ ಸಮವಸ್ತ್ರ ಶೂಗಳನ್ನು ಪೂರೈಕೆ ಮಾಡಬಹುದಾಗಿದೆ. ಒಂದು ವೇಳೆ ಗುಣಮಟ್ಟದ ಪ್ರಮಾಣಪತ್ರವನ್ನು ಶಾಲಾ ಮುಖ್ಯ ಶಿಕ್ಷಕರು ನೋಡದೇ ಬಟ್ಟೆಗಳನ್ನು ಖರೀದಿ ಮಾಡಿದರೆ ಆಯಾ ಶಾಲೆಗಳ ಮುಖ್ಯ ಶಿಕ್ಷಕರೇ ಇದಕ್ಕೆ ಹೊಣೆಯಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಖಡಕ್ಕಾಗಿ ಸೂಚನೆ ನೀಡಿದೆ.

ಇನ್ನೂ ಜಿಲ್ಲೆಯಲ್ಲಿನ ಹಲವು ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರದಿಂದ ಲಕ್ಷಾಂತರ ಮೊತ್ತದ ಅನುದಾನ ಎಸ್‌ಡಿಎಂಸಿ ಖಾತೆಗೆ ಜಮೆಯಾಗಲಿದೆ. ಈ ಅನುದಾನದ ಮೊತ್ತ ಲಕ್ಷ ರೂ. ದಾಟಿದರೆ ಶಾಲೆ ಮುಖ್ಯ ಶಿಕ್ಷಕರು ಟೆಂಡರ್‌ ಕರೆದು ಸಮವಸ್ತ್ರಗಳ ಖರೀದಿ ಮಾಡಬೇಕು. ದೊಡ್ಡ ಮೊತ್ತದ ಹಣವನ್ನು ಟೆಂಡರ್‌ ಕರೆಯದೇ ಬಟ್ಟೆಗಳ ಖರೀದಿಸುವಂತಿಲ್ಲ.

ಇದರಲ್ಲೂ ಶೂ-ಸಮವಸ್ತ್ರಗಳ ಗುಣಮಟ್ಟದ ಪರಿಶೀಲನೆ ಅವಶ್ಯವಾಗಿ ನಡೆಯಲಿದೆ. ಇಲ್ಲಿ ದೂರುಗಳು ಕೇಳಿ ಬಂದರೆ ಜಿಲ್ಲಾ, ತಾಲೂಕು ಹಂತದ ಸಮಿತಿ ತನಿಖೆ ನಡೆಸಲಿವೆ ಎನ್ನುವ ಸಂದೇಶವನ್ನು ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೀಡಿದೆ. ಒಟ್ಟಾರೆ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ದರಕ್ಕೆ ಬಟ್ಟೆ ಖರೀದಿಸಿ ಮಕ್ಕಳಿಗೆ ಪೂರೈಕೆ ಮಾಡುತ್ತಿರುವುದಕ್ಕೆ ಜಿಪಂ ಈ ಬಾರಿ ಮೊದಲೇ ಖಡಕ್‌ ಸೂಚನೆ ನೀಡಿದೆ. ಗುಣಮಟ್ಟದ ಪ್ರಮಾಣ ಪತ್ರ ತೋರಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಏಜೆನ್ಸಿಗಳು ಸಮವಸ್ತ್ರ-ಶೂ ಪೂರೈಕೆ ಮಾಡುವ ಮುನ್ನ ಶಾಲಾ ಮುಖ್ಯ ಶಿಕ್ಷಕರಿಗೆ ಗುಣಮಟ್ಟದ ಪ್ರಮಾಣಪತ್ರ ತೋರಿಸಬೇಕು. ನಂತರ ಶಾಲೆಗಳಿಗೆ ಪೂರೈಕೆ ಮಾಡಬೇಕು. ಪ್ರಮಾಣಪತ್ರ ಇಲ್ಲದೇ ಸಮವಸ್ತ್ರ ಖರೀದಿ ಮಾಡುವಂತಿಲ್ಲ. ಖರೀದಿ ಮಾಡಿದರೆ ಅಂತಹ ಶಾಲೆಗಳ ಮುಖ್ಯ ಶಿಕ್ಷಕರೇ ಹೊಣೆಯಾಗಲಿದ್ದಾರೆ. ಈ ಕುರಿತು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದೇವೆ.
·ವೆಂಕಟರಾಜಾ, ಜಿಪಂ ಸಿಇಒ ಕೊಪ್ಪಳ

„ದತ್ತು ಕಮ್ಮಾರ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.