ರಾಮನಗರ ಘಟನೆ ಪಕ್ಷದ ವೈಫಲ್ಯ: ಶೆಟ್ಟರ್
Team Udayavani, Nov 4, 2018, 6:30 AM IST
ಹುಬ್ಬಳ್ಳಿ: ರಾಮನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿವೃತ್ತಿ ಘೋಷಿಸಿರುವುದು ಇಡೀ ಪಕ್ಷದ ವೈಫಲ್ಯವಾಗಿದ್ದು, ಯಾರೊಬ್ಬರನ್ನು ದೂರುವಂತಿಲ್ಲ. ಇದರಿಂದ ನಾವು ಪಾಠ ಕಲಿತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂತಹ ಘಟನೆ ಎಂದೂ ನಡೆದಿರಲಿಲ್ಲ. ರಾಷ್ಟ್ರೀಯ ಪಕ್ಷವಾಗಿ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಇದು ವಿಶ್ವಾಸದ ಪ್ರಶ್ನೆಯಾಗಿದ್ದು, ಪಕ್ಷ ಒಬ್ಬರನ್ನು ನಂಬಿ ಟಿಕೆಟ್ ನೀಡಿರುತ್ತದೆ. ಕೊನೇ ಕ್ಷಣದಲ್ಲಿ ಕಣದಿಂದ ಹಿಂದೆ ಸರಿಯುವ ಮೂಲಕ ನಂಬಿಕೆ ದ್ರೋಹವಾಗಿದೆ. ನಂಬಿ ಕೆಟ್ಟಿದ್ದೇವೆ. ಇದೊಂದು ರಾಜಕೀಯ ಕುತಂತ್ರ. ಒಳಒಪ್ಪಂದ ಮಾಡಿಕೊಂಡು ಕಣದಿಂದ ಹಿಂದೆ ಸರಿದಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ ಮೇಲೆ ಗೆಲ್ಲಬೇಕೆಂಬ ಹುಮ್ಮಸ್ಸು ಇರಬೇಕು. ಆದರೆ, ಇದೀಗ ಇಲ್ಲಸಲ್ಲದ ಸಬೂಬು ಹೇಳುತ್ತಿದ್ದಾರೆ.
ಕೇಂದ್ರ ಸಚಿವ ಸದಾನಂದ ಗೌಡ, ಸಿ.ಪಿ. ಯೋಗೀಶ್ವರ ಸೇರಿ ಹಲವು ನಾಯಕರು ಪ್ರಚಾರ ಮಾಡಿದ್ದಾರೆ. ಸಾವಿರಾರು ಬಿಜೆಪಿ ಕಾರ್ಯಕರ್ತರು ಹಗಲಿರುಳು ಪ್ರಚಾರ ಮಾಡುತ್ತಿದ್ದಾರೆ. ಮತ್ತೇನು ಸೌಲಭ್ಯಗಳು ಅವರಿಗೆ ಬೇಕಿದ್ದವು ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ