ಫ‌ಲಿತಾಂಶದ ಬಳಿಕ ಆಗುತ್ತಾ ಸಂಪುಟ ವಿಸ್ತರಣೆ?


Team Udayavani, Nov 4, 2018, 6:10 AM IST

vidhana-soudha-750.jpg

ಬೆಂಗಳೂರು:ಉಪ ಚುನಾವಣೆ ಫ‌ಲಿತಾಂಶ ಹೊರಬೀಳುತ್ತಿದ್ದಂತೆ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಚಾಲನೆ ಸಿಗುವ ಸಾಧ್ಯತೆಯಿದ್ದು ಆಕಾಂಕ್ಷಿಗಳು ಈಗಿನಿಂದಲೇ ಲಾಬಿ ಶುರು ಮಾಡಿದ್ದಾರೆ.

ಇನ್ನೇನು ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗುತ್ತದೆ ಎಂದು ಹೇಳಲಾಗಿತ್ತಾದರೂ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದರಿಂದ ಮುಂದೂಡಲು ಸಬೂಬು ಸಿಕ್ಕಂತಾಗಿತ್ತು.

ಎಲ್ಲವೂ ಅಂದುಕೊಂಡಂತೆ ಆದರೆ ಉಪ ಚುನಾವಣೆ ಫ‌ಲಿತಾಂಶ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಪರ ಬಂದರೆ ನವೆಂಬರ್‌ 10 ಅಥವಾ 11 ರಂದು ಸಂಪುಟ ವಿಸ್ತರಣೆ ಸೂಸೂತ್ರವಾಗಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.ಬೆಳಗಾವಿ ವಿಧಾನಮಂಡಲ ಅಧಿವೇಶನದ ನಂತರ ವಿಸ್ತರಣೆ ಮಾಡುವುದು ಸೂಕ್ತ ಎಂಬ ಮಾತುಗಳು ಇದೆ.  ಈಗ ಸಂಪುಟ ವಿಸ್ತರಣೆ ಆಗದಿದ್ದರೆ ಲೋಕಸಭೆ ಚುನಾವಣೆ ಮುಗಿಯುವವರೆಗೂ ಕಷ್ಟ ಎಂಬ ಸತ್ಯ ಅರಿತಿರುವ ಆಕಾಂಕ್ಷಿಗಳು ನವೆಂಬರ್‌ 6 ರ ಡೆಡ್‌ಲೈನ್‌ ನೀಡಿ ಕಾಯುತ್ತಿದ್ದಾರೆ.

ಕಾಂಗ್ರೆಸ್‌ ಕೋಟಾದಡಿ ಆರು ಸ್ಥಾನಗಳಿಗೆ ಎಂ.ಬಿ.ಪಾಟೀಲ್‌, ಬಿ.ಸಿ.ಪಾಟೀಲ್‌ , ಶ್ಯಾಮನೂರು ಶಿವಶಂಕರಪ್ಪ, ಶಿವಳ್ಳಿ, ಎಂ.ಟಿ.ಬಿ.ನಾಗರಾಜ್‌,ರಾಮಲಿಂಗಾರೆಡ್ಡಿ, ಎಚ್‌.ಕೆ.ಪಾಟೀಲ್‌, ರೋಷನ್‌ಬೇಗ್‌, ತನ್ವೀರ್‌ ಸೇs…, ರಹೀಂ ಖಾನ್‌, ಎಂ.ಕೃಷ್ಣಪ್ಪ, ಡಾ.ಸುಧಾಕರ್‌, ನಾಗೇಂದ್ರ, ತುಕಾರಾಂ, ರೂಪಾ ಶಶಿಧರ್‌, ಧರ್ಮಸೇನಾ ಆಕಾಂಕ್ಷಿಗಳಾಗಿದ್ದಾರೆ.

ಅದರಲ್ಲೂ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಸಹ ಬಿಜೆಪಿಯವರು ಉಪ ಮುಖ್ಯಮಂತ್ರಿ ಆಫ‌ರ್‌ ನೀಡಿದ್ದರು ಎಂದು ಹೇಳುವ ಮೂಲಕ ಪರೋಕ್ಷವಾಗಿ ತಾನೂ ಆಕಾಂಕ್ಷಿ ಎಂಬ ಬಯಕೆ ಹೊರ ಹಾಕಿದ್ದಾರೆ.
ಜೆಡಿಎಸ್‌ ಕೋಟಾದಡಿ ಎರಡು ಸ್ಥಾನಗಳಿದ್ದು ಸಿರಾ ಸತ್ಯನಾರಾಯಣ, ಶ್ರೀನಿವಾಸಗೌಡ, ಬಿ.ಎಂ.ಫ‌ರೂಕ್‌, ಬಸವರಾಜ ಹೊರಟ್ಟಿ, ಎಚ್‌.ವಿಶ್ವನಾಥ್‌, ಎಚ್‌.ಕೆ.ಕುಮಾರಸ್ವಾಮಿ, ಎ.ಟಿ.ರಾಮಸ್ವಾಮಿ ಆಕಾಂಕ್ಷಿಗಳಾಗಿದ್ದಾರೆ.
ಎನ್‌.ಮಹೇಶ್‌ ರಾಜೀನಾಮೆಯಿಂದ ತೆರವಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸ್ಥಾನದ ಮೇಲೆ ಬಸವರಾಜ ಹೊರಟ್ಟಿ ಹಾಗೂ ಎಚ್‌.ವಿಶ್ವನಾಥ್‌ ಕಣ್ಣಿಟ್ಟಿದ್ದಾರೆ.

ಈ ಮಧ್ಯೆ, ಶಿವಮೊಗ್ಗ ಉಪ ಚುನಾವಣೆ ಪ್ರಚಾರದ ವೇಳೆ ಹಿರಿಯ ನಾಯಕರ ಕಾಗೋಡು ತಿಮ್ಮಪ್ಪ ಅವರು ಒಪ್ಪಿದರೆ ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಿ ಸಚಿವರಾಗಿ ಸಂಪುಟಕ್ಕೆ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿರುವುದು ಜೆಡಿಎಸ್‌ ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದೆ.  ಹೀಗಾಗಿ, ಯಾರಿಗೆಲ್ಲಾ ಅದೃಷ್ಟ ಖುಲಾಯಿಸಲಿದೆ ಕಾದು ನೋಡಬೇಕಾಗಿದೆ.

ಆಶ್ವಾಸನೆ
ಈ ನಡುವೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರು ಕೆಲವರಿಗೆ ಸಚಿವಗಿರಿ ಭರವಸೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್‌ಪರ ಫ‌ಲಿತಾಂಶ ಬಂದರೆ ಕೊಟ್ಟ ಮಾತಿನಂತೆ ಭರವಸೆ ಈಡೇರಿಸಬೇಕಾಗುತ್ತದೆ. ಆಗ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಲೂಬಹುದು. ತೀವ್ರ ಪೈಪೋಟಿ ಉಂಟಾದರೆ ಮತ್ತೆ ರಾಹುಲ್‌ಗಾಂಧಿ ಸಮ್ಮುಖದಲ್ಲೇ ಸಂಪುಟ ವಿಸ್ತರಣೆ ಇತ್ಯರ್ಥವಾಗಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.

ನಿಗಮ ಮಂಡಳಿ “ಅಸ್ತ್ರ’
ಸಂಪುಟ ವಿಸ್ತರಣೆಯಲ್ಲಿ ಅಸಮಾಧಾನ ತಣಿಸಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ನಿಗಮ ಮಂಡಳಿ ಅಧ್ಯಕ್ಷರ ನೇಮಕ “ಅಸ್ತ್ರ’ ಸಹ ಸಿದ್ಧಮಾಡಿಟ್ಟುಕೊಂಡಿದ್ದಾರೆ. ಸುಮಾರು 30 ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಲು ಚಿಂತನೆ ನಡೆಸಲಾಗಿದೆ. ಕಾಂಗ್ರೆಸ್‌ಗೆ 20 ಹಾಗೂ ಜೆಡಿಎಸ್‌ಗೆ 10 ಸ್ಥಾನ ಸಿಗಲಿದ್ದು ಬಹುತೇಕ ಶಾಸಕರಿಗೆ ಬಂಪರ್‌ ಹೊಡೆಯುವ ಸಾಧ್ಯತೆಯಿದೆ. ನಿಗಮ ಮಂಡಳಿ ನೇಮಕದ ಜತೆಗೆ 10 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ದಾರಿ ಸಹ ಹುಡುಕಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.