ಮತದಾನ ಶಾಂತಿಯುತ, ಫ‌ಲಿತಾಂಶದತ್ತ ಎಲ್ಲರ ಚಿತ್ತ


Team Udayavani, Nov 4, 2018, 6:00 AM IST

181103kpn33.jpg

ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸೇರಿ ಐದು ಕ್ಷೇತ್ರಗಳ ಉಪ ಚುನಾವಣೆಗೆ ಶನಿವಾರ ನಡೆದ ಮತದಾನ ಶಾಂತಿಯುತವಾಗಿ ನಡೆದಿದ್ದು, ಶೇ.65.56ರಷ್ಟು ಮತದಾನವಾಗಿದೆ.

ಲೋಕಸಭಾ ಕ್ಷೇತ್ರಗಳ ಪೈಕಿ ಶಿವಮೊಗ್ಗ ಕ್ಷೇತ್ರದಲ್ಲಿ ಅತಿ ಹೆಚ್ಚು, ಶೇ.61.05ರಷ್ಟು ಮತದಾನವಾಗಿದ್ದರೆ, ಮಂಡ್ಯ ಕ್ಷೇತ್ರದಲ್ಲಿ ಅತಿ ಕಡಿಮೆ, ಶೇ.53.93 ರಷ್ಟು ಮತದಾನವಾಗಿದೆ. ಉಳಿದಂತೆ ಬಳ್ಳಾರಿ ಕ್ಷೇತ್ರದಲ್ಲಿ ಶೇ.63.85 ರಷ್ಟು ಮತದಾನವಾಗಿದೆ. ವಿಧಾನಸಭಾ ಕ್ಷೇತ್ರಗಳ ಪೈಕಿ ರಾಮನಗರ ಕ್ಷೇತ್ರದಲ್ಲಿ ಅತಿ ಹೆಚ್ಚು, ಶೇ.71.88 ರಷ್ಟು ಮತದಾನವಾಗಿದ್ದರೆ, ಜಮಖಂಡಿ ಕ್ಷೇತ್ರದಲ್ಲಿ ಶೇ.77.17 ರಷ್ಟು ಮತದಾನವಾಗಿದೆ.

ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ಕ್ಕೆ ಮುಕ್ತಾಯವಾಯಿತು. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ದಿ.ಎಸ್‌.ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ, ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಎಸ್‌.ಉಗ್ರಪ್ಪ, ಶಾಸಕ ಶ್ರೀರಾಮುಲು ಸಹೋದರಿ ಶಾಂತಾ, ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿಯವರ ರಾಜಕೀಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ನ.6ರಂದು ಮತಗಳ ಎಣಿಕೆ ನಡೆಯಲಿದೆ.

ಮತದಾನ ಆರಂಭದಲ್ಲಿ ನೀರಸವಾಗಿತ್ತು. 9 ಗಂಟೆ ಹೊತ್ತಿಗೆ ಗ್ರಾಮೀಣ ಪ್ರದೇಶಗಳಲ್ಲಿ ಒಂದಷ್ಟು ಬಿರುಸು ಕಂಡಿತ್ತಾದರೂ ನಗರ ಪ್ರದೇಶಗಳಲ್ಲಿ ಮಾತ್ರ ಮತದಾನ ಮಂದಗತಿಯಲ್ಲಿತ್ತು. ಮಹಿಳೆಯರಿಗಾಗಿ ಸ್ಥಾಪಿಸಿದ್ದ ಸಖೀ ಪಿಂಕ್‌ ಮತಗಟ್ಟೆಗಳಲ್ಲೂ ವನಿತೆಯರು ಇರಲಿಲ್ಲ. ಸಂಜೆ ಮುಕ್ತಾಯದ ವೇಳೆಗೆ ಕೆಲವೆಡೆ ಉತ್ತಮ ಪ್ರತಿಕ್ರಿಯೆ ಕಂಡು ಬಂತು. ಎಂದಿನಂತೆ ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗದ ಮತದಾರರು ತಮ್ಮ ಹಕ್ಕು ಚಲಾಯಿಸುವಲ್ಲಿ ಉತ್ಸಾಹ ತೋರಿದರು.

ಈ ಮಧ್ಯೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಅರೆ ಸೇನಾಪಡೆಯ ಯೋಧರನ್ನು ನಿಯೋಜಿಸಲಾಗಿತ್ತು. ಇದೇ ವೇಳೆ, ಬಳ್ಳಾರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹರಿಶ್ಚಂದ್ರನಗರ, ಮಂಡ್ಯ ಜಿಲ್ಲೆ ಭಾರತೀನಗರದ 182ನೇ ಮತಗಟ್ಟೆ, ಕರಡಕೆರೆ ಸೇರಿ ಕೆಲವೆಡೆ ಮತಯಂತ್ರಗಳಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮತದಾನ ವಿಳಂಬವಾಗಿ ಆರಂಭವಾದರೆ, ಮೂಲಭೂತ ಸೌಕರ್ಯಗಳಿಗಾಗಿ ಒತ್ತಾಯಿಸಿ ಬಳ್ಳಾರಿ ತಾಲೂಕಿನ ಹರಗಿನಡೋಣಿ, ಹಗರಿಬೊಮ್ಮನಹಳ್ಳಿ ತಾಲೂಕಿನ ಮುತೂRರ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದರಗುಂಡಿ ಸೇರಿ ಕೆಲವೆಡೆ ಮತದಾನ ಬಹಿಷ್ಕರಿಸಿದ ಘಟನೆ ವರದಿಯಾಗಿದೆ.

ಲೋಕಸಭಾ ಕ್ಷೇತ್ರ    
ಶಿವಮೊಗ್ಗ    ಶೇ.61.05
ಮಂಡ್ಯ        ಶೇ.53.93
ಬಳ್ಳಾರಿ        ಶೇ.63.85
ವಿಧಾನಸಭಾ ಕ್ಷೇತ್ರ    
ರಾಮನಗರ        ಶೇ.71.88
ಜಮಖಂಡಿ        ಶೇ.77.17

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.