ಬೋಗಸ್ ಮತ: ರುದ್ರೇಶ್ ಆರೋಪ
Team Udayavani, Nov 5, 2018, 6:00 AM IST
ರಾಮನಗರ: ವಿಧಾನಸಭಾ ಕ್ಷೇತ್ರಕ್ಕೆ ಶನಿವಾರ ನಡೆದ ಮತದಾನ ಬೆಳಗ್ಗೆಯಿಂದಲೂ ನೀರಸವಾಗಿ ನಡೆಯುತ್ತಿತ್ತು. ಆದರೆ, ಸಂಜೆ 5 ಗಂಟೆ ನಂತರ ಶೇ.20ಕ್ಕೂ ಹೆಚ್ಚು ಮತದಾನವಾಗಿದ್ದು, ಈ ಬಗ್ಗೆ ತಮಗೆ ಅನುಮಾನ ಇದೆ. ಈ ಸಂಬಂಧ ಜಿಲ್ಲಾಡಳಿತ ಸ್ಪಷ್ಟೀಕರಣ ಕೊಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತದಾನದ ಕೊನೆಯ ಒಂದು ಗಂಟೆಯಲ್ಲಿ ಕನಕಪುರದಿಂದ ಬಂದ ಕೆಲವರು ಬೋಗಸ್ ಮತ ಹಾಕಿರುವುದಾಗಿ ಮಾಹಿತಿ ಇದೆ. ನ್ಯಾಯಯುತವಾಗಿ ಮತದಾನ ನಡೆದಿಲ್ಲ ಎಂದು ಆರೋಪಿಸಿದರು. ಮತದಾನಕ್ಕೆ ಎರಡು ದಿನ ಇದ್ದಾಗ ತಮ್ಮ ಪಕ್ಷದ ಅಭ್ಯರ್ಥಿ ಎಲ್.ಚಂದ್ರಶೇಖರ್ ಕಣದಿಂದ ಹೊರ ನಡೆದಿರುವುದರ ಹಿಂದೆ ಎಷ್ಟು ಡೀಲ್ ಆಗಿದೆ ಎಂಬುದರ ಬಗ್ಗೆ ತಮಗೆ ಮಾಹಿತಿ ಇದೆ.
ಸಚಿವ ಡಿ.ಕೆ.ಶಿವಕುಮಾರ್ ಅವರು ಬಳ್ಳಾರಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದು, ಚಂದ್ರಶೇಖರ್ ಅವರ ವಿಚಾರದಲ್ಲಿ ಡೀಲ್ ಇತ್ಯರ್ಥಗೊಳಿಸಿರುವ ಬಗ್ಗೆಯೂ ಮಾಹಿತಿ ಇದೆ. ಆದರೆ, ಡಿಕೆಶಿ ಅವರು ಬಳ್ಳಾರಿಯಲ್ಲಿ ತಮಗೇನು ಗೊತ್ತೇ ಇಲ್ಲ ಎಂಬಂತೆ ವರ್ತಿಸಿದ್ದಾರೆ. ರಾಜ್ಯದ ಜನತೆಗೆ ಸುಳ್ಳು ಹೇಳಿದ್ದಾರೆ. ಡೀಲ್ ಆಗಿಲ್ಲ ಎಂಬುದಕ್ಕೆ ರಾಮನಗರದ ಜಾಮುಂಡೇಶ್ವರಿ ಅಮ್ಮನವರ ಬಳಿ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು. ಈ ಎಲ್ಲಾ ವಿಚಾರಗಳ ಬಗ್ಗೆ ರಾಜ್ಯ ನಾಯಕರ ಮಾರ್ಗದರ್ಶನ ಪಡೆದು ಕಾನೂನು ಹೋರಾಟ ಆರಂಭಿಸುವುದಾಗಿ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ