ಮರಕ್ಕೆ ಕಲ್ಲು ಹೊಡೆದು ಕೀಟ ಹಿಡ್ಯೋದೇ ಕೆಲ್ಸ!


Team Udayavani, Nov 6, 2018, 4:00 AM IST

marakke.jpg

ಅಪ್ಪ ಅಮ್ಮ ಹೊಲದಲ್ಲಿ ದುಡಿಯುತ್ತಿದ್ದರೆ, ನಾನು ಗಿರಿಜಿಂಬೆಗಾಗಿ ಹುಡುಕಾಡುತ್ತಿದ್ದೆ. ಗಿರಿಜಿಂಬೆ ಸಿಕ್ಕರೆ ಅದನ್ನು ಬಂಧಿಸಿ ಸಾಯಂಕಾಲ ಮನೆಗೆ ತರುತ್ತಿದ್ದೆ. ಗೆಳೆಯರಿಗೆಲ್ಲ ಅದರ ಶಬ್ದ, ಬಣ್ಣ, ಹಾರುವ ಪರಿಯನ್ನು ಕಂಡು ಆನಂದವಾಗುತ್ತಿತ್ತು.
 
ನಾನಾಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದೆ. ಆಗ ಅಪ್ಪ-ಅಮ್ಮ ಬೆಳಗ್ಗೆ ಬೇಗ ಎದ್ದು, ನಮಗೆ ಉಪಾಹಾರ ಮಾಡಿ ಕೊಟ್ಟು, ಹೊಲಕ್ಕೆ ಹೋಗುತ್ತಿದ್ದರು. ಶಾಲೆಗೆ ರಜಾ ಸಿಕ್ಕರೆ ನನಗೆ ಖುಷಿಯೋ ಖುಷಿ. ಅಪ್ಪ ಅಮ್ಮನ ಜೊತೆ ಹೊಲಕ್ಕೆ ಹೋಗಬಹುದಲ್ಲ ಎಂದು. ಅವರು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ, ನಾನು ನನ್ನದೇ ಲೋಕದಲ್ಲಿರುತ್ತಿದ್ದೆ.

ಜಮೀನಿನ ಬದುವಿನ ಮೇಲಿದ್ದ ಮರದ ಕೊಂಬೆಗಳನ್ನು ಸೂಕ್ಷ್ಮವಾಗಿ ಹುಡುಕಾಡಿ, ಗಿರಿಜಿಂಬೆ ಕೀಟಗಳನ್ನು ಹಿಡಿಯುತ್ತಿದ್ದೆ. ಗಿರಿಜಿಂಬೆಗಳು, ಮುಳ್ಳಿನ ಮರದ ಎಲೆಗಳನ್ನು ಕಾಲಿನಲ್ಲಿ ಹಿಡಿದು ಕುಳಿತಿರುತ್ತಿದ್ದವು. ಮುಳ್ಳಿನ ಮರ ಹತ್ತಲಾಗದಿದ್ದರಿಂದ, ಗಿರಿಜಿಂಬೆ ಕುಳಿತಿದ್ದ ಕೊಂಬೆಗೆ ಕಲ್ಲು ಎಸೆಯುತ್ತಿದ್ದೆ. ಮೂರ್ನಾಲ್ಕು ಕಲ್ಲುಗಳಲ್ಲಿ ಯಾವುದಾದರೊಂದು ಕಲ್ಲು ಕೊಂಬೆಗೆ ಬಿದ್ದರೂ ಗಿರಿಜಿಂಬೆ ನೆಲಕ್ಕೆ ಬೀಳುತ್ತಿತ್ತು. ಆಗ ಅದನ್ನು ಹಿಡಿದು ಕೊರಳಿಗೆ ದಾರ ಕಟ್ಟಿಬಿಡುತ್ತಿದ್ದೆ.

ಆ ದಾರದ ತುದಿಯನ್ನು  ಹಿಡಿದರೆ, ಅದು ನನ್ನಿಂದ ತಪ್ಪಿಸಿಕೊಳ್ಳಲು, ನುಣುಪಾಗಿದ್ದ ಹಸಿರು ರೆಕ್ಕೆಗಳನ್ನು ಆಗಲಿಸಿ ಹಾರಿಹೋಗಲು ಪ್ರಯತ್ನಿಸುತ್ತಿತ್ತು. ಅದರೆ ದಾರ ಸ್ವಲ್ಪವೇ ಉದ್ದವಿದ್ದುದರಿಂದ ಗಿರ್‌ ಗಿರ್‌… ಎಂದು ಶಬ್ದ ಮಾಡುತ್ತಾ ಕೈ ಸುತ್ತ ಹಾರುತ್ತಾ, ನನ್ನ ಮೇಲೆ ಕುಳಿತುಕೊಳ್ಳುತ್ತಿತ್ತು. ಆ ಶಬ್ದ ಕೇಳಲೇ ಏನೋ ಖುಷಿ. ನಂತರ ಅದಕ್ಕೆ ಬೇಕಾಗುವ ಆಹಾರ ಸಂಗ್ರಹಿಸಬೇಕಿತ್ತು.

ಗಿರಿಜಿಂಬೆ ಇದ್ದ ಮರದಲ್ಲಿಯೇ, ಜೋತು ಬಿದ್ದ ಕೊಂಬೆಗಳಿಂದ ಎಲೆಗಳನ್ನು ಕಿತ್ತುಕೊಂಡು ಒಂದು ಕೈಯಲ್ಲಿ ಗಿರಿಜಿಂಬೆ ಮತ್ತೂಂದು ಕೈಯಲ್ಲಿ ಎಲೆ ಹಿಡಿದು ಖಾಲಿ ಬೆಂಕಿಪೊಟ್ಟಣಕ್ಕೆ ಹುಡುಕಾಡುತ್ತಿದ್ದೆ. ಬೆಂಕಿಪೊಟ್ಟಣ ಸಿಕ್ಕರೆ  ಅದರೊಳಗೆ ಗಿರಿಜಿಂಬೆ ಮತ್ತು ಮರದ ಎಲೆಯನ್ನು ಹಾಕಿ ಮುಚ್ಚಿ ಜೇಬಿನಲ್ಲಿ ಹಾಕಿಕೊಳ್ಳುತ್ತಿದ್ದೆ. ಸಾಯಂಕಾಲ ಅಪ್ಪ ಅಮ್ಮನ ಜೊತೆ ಜಮೀನಿನಿಂದ ಮನೆಗೆ ಬಂದೊಡನೆ, ಅಕ್ಕಪಕ್ಕದ ಗೆಳೆಯರಿಗೆಲ್ಲ ಅದನ್ನು ತೋರಿಸುತ್ತಿದ್ದೆ.

ಅವರೂ ಅಚ್ಚರಿಯಿಂದ, ಗಿರ್‌..ಗಿರ್‌ ಶಬ್ದ ಕೇಳಿ ಖುಷಿಪಡುತ್ತಿದ್ದರು. ಪಾಪ, ನಮಗೆ ಖುಷಿಯಾದರೆ, ಅದಕ್ಕೆ ಹಿಂಸೆ ಆಗುತ್ತಿತ್ತು. ಅದನ್ನೆಲ್ಲ ಅರ್ಥ ಮಾಡಿಕೊಳ್ಳುವ ವಯಸ್ಸಾಗಿರಲಿಲ್ಲ ನನ್ನದು. ಗಿರಿಜಿಂಬೆಯ ತಲೆಯ ಭಾಗ ಕಂದು ಬಣ್ಣವಾದರೆ, ಹಿಂಭಾಗ ಹಸಿರು ಬಣ್ಣದಿಂದ ಮಿಂಚುತ್ತಿತ್ತು. ರಾತ್ರಿ, ಹೊಲದಿಂದ ತಂದಿದ್ದ ಎಲೆಯ ಜೊತೆಗೆ ಅದನ್ನು ಮತ್ತೆ ಬೆಂಕಿಪೊಟ್ಟಣದಲ್ಲಿ ಹಾಕಿ ಮುಚ್ಚಿಡುತ್ತಿದ್ದೆ.

ಬೆಳಗ್ಗೆ ಎದ್ದು ಬೆಂಕಿಪೊಟ್ಟಣ ತೆರೆದು ನೋಡಿದರೆ, ಅದಕ್ಕೆ ಹಾಕಿದ್ದ ಮರದ ಎಲೆಗಳನ್ನು ಒಂದು ಚೂರೂ ಅದು ತಿಂದಿರುತ್ತಿರಲಿಲ್ಲ. ಕೊನೆಗೆ, ಗಿರಿಜಿಂಬೆಯನ್ನು ಹೊರ ತೆಗೆದು ದಾರದ ತುದಿಯನ್ನು ಹಿಡಿದು ಹಾರಾಡಲೆಂದು ಬಿಡುತ್ತಿದ್ದೆ. ಮೊದಲಿನಂತೆ ಅದಕ್ಕೆ ಹಾರಲಾಗುತ್ತಿರಲಿಲ್ಲ. ಬದಲಿಗೆ ಕಟ್ಟಿದ್ದ ದಾರದಲ್ಲಿ ನೇತಾಡುತ್ತಿತ್ತು. ಪಾಪ, ಅದಕ್ಕೆ ಸುಸ್ತಾಗಿರಬಹುದೇನೋ ಅಂತನಿಸಿ, ಮನೆಯ ಸುತ್ತ ಇದ್ದ ಯಾವುದಾದರೊಂದು ಗಿಡದ ಎಲೆಯ ಮೇಲೆ ಬಿಟ್ಟು ಬಿಡುತ್ತಿದ್ದೆ. ಸ್ವಲ್ಪ ಸಮಯದ ನಂತರ ಹೋಗಿ ನೋಡಿದರೆ ಅಲ್ಲಿ ಗಿರಿಜಿಂಬೆ ಇರುತ್ತಿರಲಿಲ್ಲ.

* ಸಣ್ಣಮಾರಪ್ಪ, ದೇವರಹಟ್ಟಿ 

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.