ಜನಪದ ಸಂಸ್ಕೃತಿ ಬೆಳಗುವ ದೀಪಾವಳಿ


Team Udayavani, Nov 5, 2018, 4:14 PM IST

5-november-16.gif

ಹಾವೇರಿ: ರೈತಾಪಿ ವರ್ಗವೇ ಪ್ರಮುಖವಾಗಿರುವ ಜಿಲ್ಲೆಯಲ್ಲಿ ದೀಪಾವಳಿಯೇ ‘ದೊಡ್ಡ ಹಬ್ಬ’. ಈ ಹಬ್ಬವನ್ನು ರೈತರು ವಿಶಿಷ್ಟವಾಗಿ ಹಾಗೂ ಸಾಂಪ್ರದಾಯಿಕವಾಗಿ ಮೂರು ದಿನ ಆಚರಿಸುತ್ತ ಬಂದಿದ್ದು, ದೊಡ್ಡ ಹಬ್ಬದ ತಯಾರಿ ಬಲು ಜೋರಾಗಿಯೇ ನಡೆದಿದೆ. ಅಪ್ಪಟ ಜನಪದ ಸಂಸ್ಕೃತಿಯ ಪ್ರತಿಬಿಂಬಿಸುವ ದೀಪಾವಳಿ ಹಬ್ಬಕ್ಕಾಗಿ ಒಂದು ತಿಂಗಳಿಂದಲೇ ಸಡಗರದ ಸಿದ್ಧತೆ ಆರಂಭವಾಗಿದ್ದು, ಈಗ ಹಬ್ಬದಾಚರಣೆಗಾಗಿ ದಿನಗಣನೆ ಶುರುವಾಗಿದೆ. ಈ ಬಾರಿ ನ. 6, 7 ಹಾಗೂ 8ರಂದು ಹಬ್ಬದಾಚರಣೆ ನಡೆಯಲಿದ್ದು, ಮನೆ ಮನೆಗಳಲ್ಲಿ ಹಣತೆಗಳು ಬೆಳಗಲಿವೆ.

ದೀಪಾವಳಿಯ ಮೊದಲ ದಿನವನ್ನು ಹಳ್ಳಿಗಳಲ್ಲಿ ‘ನೀರು ತುಂಬುವ ಹಬ್ಬ’ ಅಥವಾ ‘ಎರೆದುಕೊಳ್ಳುವ ಹಬ್ಬ’ ಎಂದು ಆಚರಿಸುತ್ತಾರೆ. ಅಂದು ಗ್ರಾಮಸ್ಥರು ಶಿವಲಿಂಗಾಕೃತಿಯ ಕಾಯಿಗಳನ್ನು ಹೊಂದಿರುವ ಮಾಲಿಂಗನ ಬಳ್ಳಿಯನ್ನು ಹುಡುಕಿ ತರುತ್ತಾರೆ. ನೀರು ಕಾಯಿಸುವ ಹಂಡೆಯನ್ನು ಕೆಮ್ಮಣ್ಣು ಹಚ್ಚಿ ಸಿಂಗರಿಸುತ್ತಾರೆ. ಜತೆಗೆ ಈ ಹಂಡೆಯ ಮೇಲೆ ಸುಣ್ಣದಿಂದ ಜನಪದ ಸೊಗಡು, ಸಂಸ್ಕೃತಿ ಬಿಂಬಿಸುವ ಚಿತ್ತಾರ ಬಿಡಿಸುತ್ತಾರೆ. ಹೀಗೆ ಅಲಂಕೃತಗೊಂಡ ಹಂಡೆಗೆ ಮಾಲಿಂಗನ ಬಳ್ಳಿ ಸುತ್ತಿ ಅಭ್ಯಂಗ ಸ್ನಾನ ಮಾಡುತ್ತಾರೆ. ಮನೆ ಗೋಡೆ, ಬಾಗಿಲು, ಹೊಸ್ತಿಲು ಎಲ್ಲದರ ಮೇಲೂ ಹಳ್ಳಿ ರೈತ ಜೀವನದ ಚಿತ್ರಗಳನ್ನು ಕೆಮ್ಮಣ್ಣು, ಸುಣ್ಣದಿಂದ ಚಿತ್ರಿಸುತ್ತಾರೆ. 

ಮರುದಿನ ಅಮವಾಸ್ಯೆ. ಅಮವಾಸೆ ದಿನ ಲಕ್ಷ್ಮೀ ಪೂಜೆ ಮಾಡುತ್ತಾರೆ. ವ್ಯಾಪಾರಸ್ಥರಿಗೆ ಇದು ಮಹಾಲಕ್ಷ್ಮೀಯನ್ನು ವಿಶೇಷವಾಗಿ ಪೂಜಿಸಿ ಒಲಿಸಿಕೊಳ್ಳುವ ಹಬ್ಬ. ಅಂಗಡಿಕಾರರು ಈ ಅಮವಾಸ್ಯೆ ದಿನ ಲಕ್ಷ್ಮೀಗೆ ಚಿನ್ನಾಭರಣಗಳಿಂದ ಸಿಂಗರಿಸಿ, ಸೀರೆಯುಡಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಈ ಲಕ್ಷ್ಮೀ ಹಬ್ಬ ನಗರದ ಅಂಗಡಿಗಳಲ್ಲಿ ಹೆಚ್ಚು ಸಂಭ್ರಮ- ಸಡಗರದಿಂದ ನಡೆಯುತ್ತದೆ. ಸಂಜೆ ಹೊತ್ತು ಎತ್ತ ನೋಡಿದರತ್ತ ಬಣ್ಣ ಬಣ್ಣದ ಬೆಳಕು ಕಣ್ಣು ತುಂಬಿಕೊಳ್ಳುತ್ತದೆ. ಪಟಾಕಿ ಸದ್ದು ಮುಗಿಲು ಮುಟ್ಟಿರುತ್ತದೆ. ಇನ್ನು ಮನೆಗಳಲ್ಲಿಯೂ ಲಕ್ಷ್ಮೀ ಪೂಜೆ ಮಾಡುತ್ತಾರೆ.

ಹಟ್ಟಿ ಲಕ್ಕವ್ವ ಪೂಜೆ: ಮೂರನೇ ದಿನ ಬಲಿಪಾಡ್ಯ. ಈ ದಿನವೇ ಹಳ್ಳಿಗರಿಗೆ ನಿಜವಾದ ದೀಪಾವಳಿ. ಸಗಣಿಯಲ್ಲಿ ಪಾಂಡವರನ್ನು ಮಾಡಿ, ಚೆಂಡು ಹೂವಿನ ಐದು ಗಿಡಗಳ ನಡುವೆ ಪ್ರತಿಷ್ಠಾಪಿಸುತ್ತಾರೆ. ಇದರ ನಡುವೆ ಸಗಣಿಯಲ್ಲಿಯೇ ಲಕ್ಷ್ಮೀಯನ್ನೂ ಮಾಡಿ ಪ್ರತಿಷ್ಠಾಪಿಸುತ್ತಾರೆ. ಈ ಲಕ್ಷ್ಮೀಗೆ ‘ಹಟ್ಟಿ ಲಕ್ಕವ್ವ’ ಎಂದು ಗ್ರಾಮೀಣ ಜನತೆ ಕರೆಯುತ್ತಾರೆ. ಮನೆ, ಕೊಟ್ಟಿಗೆ, ವ್ಯಾಪಾರ, ಉದ್ಯೋಗಕ್ಕೆ ಬಳಸುವ ಎಲ್ಲ ವಸ್ತುಗಳ ಸಮೀಪವೂ ಅರಿಶಿಣ-ಕುಂಕುಮ, ಹೂಗಳಿಂದ ಸಿಂಗರಿಸಿದ ಸಗಣಿಯ ಉಂಡೆಗಳನ್ನು ಇಟ್ಟು ಪೂಜಿಸುತ್ತಾರೆ. ಈ ದೀಪಾವಳಿ ಆಚರಣೆಯ ಬಳಿಕವೇ ಗ್ರಾಮಗಳಲ್ಲಿ ಸಗಣಿಯ (ಬೆರಣಿ)ಕುಳ್ಳುಗಳನ್ನು ತಯಾರಿಸುವುದು ಸಂಪ್ರದಾಯ. ಇದೇ ಅಲ್ಲಲ್ಲಿ ಹೋರಿಗಳನ್ನು ಬೆದರಿಸಿ, ಸಂಭ್ರಮಿಸುತ್ತಾರೆ.

ಜಾನುವಾರುಗಳಿಗೆ ಸಿಂಗಾರ: ಕೊಟ್ಟಿಗೆಯಲ್ಲಿನ ದನ-ಕರುಗಳ ಮೈ ತೊಳೆದು ಹೊಸದಾಗಿ ಮಾರುಕಟ್ಟೆಯಿಂದ ತಂದ ಹಗ್ಗ, ರಿಬ್ಬನ್‌, ಗಂಟೆ, ಗೆಜ್ಜೆಗಳನ್ನು ಕಟ್ಟಿ ಸಿಂಗರಿಸುತ್ತಾರೆ. ಎತ್ತುಗಳ ಕೊರಳಿಗೆ ಕೊಬ್ಬರಿ ಸರವನ್ನೂ ಕಟ್ಟುತ್ತಾರೆ. ಎತ್ತಿನ ಗಾಡಿಯನ್ನೂ ಬಣ್ಣ ಹಚ್ಚಿ ಸಿಂಗರಿಸಿ ಪೂಜಿಸುತ್ತಾರೆ. ಪೂಜೆಯ ಬಳಿಕ ಅವುಗಳನ್ನು ಹೊರಗೆ ಬಿಡುತ್ತಾರೆ.

ಸಂಜೆ ಸೂರ್ಯ ಮುಳುಗುವ ಹೊತ್ತಿಗೆ ಹಟ್ಟಿ ಲಕ್ಕವ್ವನನ್ನು ಪ್ರತಿಷ್ಠಾಪಿಸಿದ ಸ್ಥಳದಿಂದ ಹೊರ ಅಂಗಳದ ವರೆಗೆ ಕೆಮ್ಮಣ್ಣು ಹಾಗೂ ಸುಣ್ಣದಿಂದ ಆಕಳಿನ ಹೆಜ್ಜೆ ಬಿಡಿಸುತ್ತಾರೆ. ಈ ಹೆಜ್ಜೆಗಳ ಮೇಲೆಯೇ ಆಕಳನ್ನು ಮನೆಯೊಳಗೆ ತರುವ ಆಚರಣೆ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಜೀವಂತವಿದೆ. ಹಬ್ಬದ ಮೂರೂ ದಿನ ಹೋಳಿಗೆ, ಕಡಬು ಸೇರಿದಂತೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ನೈವೇದ್ಯ ಮಾಡಿ, ಊಟ ಮಾಡುವ ಮೂಲಕ ಸಂಭ್ರಮಿಸುತ್ತಾರೆ. ಒಟ್ಟಾರೆ ಗ್ರಾಮೀಣ ಜನಪದ ಸಂಸ್ಕೃತಿಯ ಪ್ರತೀಕವಾಗಿ ದೀಪಾವಳಿ ಹಬ್ಬವೈಶಿಷ್ಟ್ಯಪೂರ್ಣವಾಗಿ ಆಚರಿಸಿಕೊಂಡು ಬರಲಾಗಿದೆ.

ಇಂದಿನ ಆಧುನಿಕತೆಯ ಬಿರುಗಾಳಿಯಲ್ಲಿ ಹಲವು ಹಬ್ಬಗಳ ಅನೇಕ ಸಂಪ್ರದಾಯ, ಆಚರಣೆಗಳು ಕಣ್ಮರೆಯಾಗುತ್ತಿವೆ. ಕೆಲವೊಂದು ಕಡೆಗಳಲ್ಲಿ ಸಂಪ್ರದಾಯಗಳನ್ನು ಶಾಸ್ತ್ರಕ್ಕೆ ಎಂಬಂತೆ ಚುಟುಕಾಗಿ ನಡೆಯುತ್ತಿವೆ. ಆದರೆ, ದೀಪಾವಳಿ ಹಬ್ಬವನ್ನು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬಹಳ ವೈಶಿಷ್ಟ್ಯ ಪೂರ್ಣವಾಗಿ, ಸಂಪ್ರದಾಯ ಬದ್ಧವಾಗಿ ಈಗಲೂ ಆಚರಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ. ತನ್ಮೂಲಕ ದೀಪಾವಳಿ ಹಬ್ಬವು ಜನಪದ ಸಂಸ್ಕೃತಿಯ ರಕ್ಷಣೆ ಮಾಡಿದಂತಾಗಿದೆ.
 . ನಿಂಗಪ್ಪ ದೊಡ್ಡ ತಳವಾರ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.