ಗುಜರಾತ್ ಸಚಿವಾಲಯ ಹೊಕ್ಕ ಚಿರತೆ!
Team Udayavani, Nov 6, 2018, 6:50 AM IST
ಗಾಂಧಿನಗರ: ಗುಜರಾತ್ನ ಗಾಂಧಿನಗರದಲ್ಲಿನ ಸಚಿವಾಲಯಕ್ಕೆ ಸೋಮವಾರ ವಿಶೇಷ ಅತಿಥಿಯ ಆಗಮನವಾಗಿತ್ತು. ಆದರೆ ಈ ಅತಿಥಿಯನ್ನು ಹೊರಗೆ ಕಳುಹಿಸುವವರೆಗೂ ಸಚಿವಾಲಯ ದೊಳಕ್ಕೆ ಪ್ರವೇಶಿಸಲು ಯಾರಿಗೂ ಅನುಮತಿ ನೀಡಿರಲಿಲ್ಲ!
ಮಧ್ಯರಾತ್ರಿ 2 ಗಂಟೆಗೆ ಚಿರತೆಯೊಂದು ಸಚಿವಾಲಯದ ಮುಂದಿನ ಗೇಟ್ನ ಕೆಳಗಿನಿಂದ ಒಳಗೆ ಪ್ರವೇಶಿಸಿರುವುದು ಸಿಸಿಟಿವಿಯಲ್ಲಿ ಕಂಡುಬಂದಿತ್ತು. ಅದು ತಿಳಿಯುತ್ತಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಇಲಾಖೆ ಸಿಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ಸಚಿವಾಲಯದ ಸಮೀಪದಲ್ಲೇ ಅರಣ್ಯ ಇದ್ದುದರಿಂದ, ಅಲ್ಲಿಂದಲೇ ಇದು ಪ್ರವೇಶಿಸಿರಬೇಕು ಎಂದು ಊಹಿಸಲಾಗಿದೆ.
ಸುಮಾರು 200 ಸಿಬಂದಿ ಸತತ 12 ತಾಸು ಕಾರ್ಯಾಚರಣೆ ನಡೆಸಿ ಸೋಮವಾರ ಮಧ್ಯಾಹ್ನ ಚಿರತೆಯನ್ನು ಬೋನಿಗೆ ಹಾಕಿದ್ದಾರೆ. ಚಿರತೆಯನ್ನು ಹಿಡಿಯುವವರೆಗೂ ಸಚಿವಾಲಯದೊಳಕ್ಕೆ ತೆರಳಲು ಯಾರಿಗೂ ಅವಕಾಶ ಮಾಡಿಕೊಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ