15 ಲ. ರೂ. ದರೋಡೆ; ತನಿಖೆ ನಡೆಸಿದಾಗ ಸಿಕ್ಕಿದ್ದು 1.75 ಕೋ. ರೂ.


Team Udayavani, Nov 6, 2018, 9:04 AM IST

0511mlr25-2.jpg

ಮಂಗಳೂರು: ನಗರದಲ್ಲಿ ಒಂದು ವಾರದ ಹಿಂದೆ ತನ್ನನ್ನು ಅಪಹರಣ ಮಾಡಿ 15 ಲ.ರೂ. ದರೋಡೆ ಮಾಡಿದ್ದಾರೆ ಎಂದು ಮುಂಬಯಿಯಿಂದ ಮಂಗಳೂರಿಗೆ ಬಂದ ಚಿನ್ನ ವಹಿವಾಟು ಉದ್ಯಮಿಯೊಬ್ಬರ ಸಿಬಂದಿ ನೀಡಿದ್ದ ದೂರಿಗೆ ಸಂಬಂಧಿಸಿದ ಪ್ರಕರಣವನ್ನು  ಪೊಲೀಸರು ಭೇದಿಸಿದ್ದಾರೆ.
 
ಪೊಲೀಸರಿಗೆ ಸುಮಾರು 1.75 ರೂ. ಪತ್ತೆಯಾಗಿದ್ದು, ಹೀಗಾಗಿ, ದರೋಡೆ  ದೂರು ನೀಡಿದ್ದ  ಸಿಬಂದಿ ಮತ್ತು ಉದ್ಯಮಿಯೇ ಸಂಕಷ್ಟಕ್ಕೆ ಸಿಲುಕುವಂತಾಗಿದೆ. 

ತನಿಖೆ ನಡೆಸಿರುವ ಪೊಲೀಸರು  ಇಬ್ಬರನ್ನು ಬಂಧಿಸಿದ್ದು, ಅವರಿಂದ ಒಟ್ಟು 1.75 ಕೋ. ರೂ. ವಶಪಡಿಸಿಕೊಂಡಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಮತ್ತಷ್ಟು ಹಣದ ವ್ಯವಹಾರ ನಡೆದಿರುವ ಸಂಶಯ ಪೊಲೀಸರಿಗೆ ಮೂಡಿದ್ದು, ಸುಮಾರು 2.35 ಕೋ. ರೂ.ಗಳ ವ್ಯವಹಾರ ಇದಾಗಿತ್ತು ಎನ್ನುವ ಸುಳಿವು ಕೂಡ ಸಿಕ್ಕಿದೆ. ಹೀಗಾಗಿ, ಚಿನ್ನ ಸಾಗಾಟ ಸಿಬಂದಿ ಅಪಹರಣ ಹಾಗೂ 15 ಲ.ರೂ. ದರೋಡೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ದೂರುದಾರರೇ ಪೊಲೀಸರ ತನಿಖೆ ಎದುರಿಸುವಂತಾಗಿದೆ.  ಈ ಪ್ರಕರಣದಲ್ಲಿ ಬಹುಕೋಟಿ ರೂ. ವಿನಿಮಯ ಆಗಿರುವ ಹಿನ್ನೆಲೆಯಲ್ಲಿ ನಗರ ಪೊಲೀಸರು  ಆದಾಯ ತೆರಿಗೆ ಇಲಾಖೆಗೆ ತಿಳಿಸ‌ಲು ನಿರ್ಧರಿಸಿದ್ದಾರೆ. 

ಪ್ರಕರಣದ ವಿವರ
ಮಂಜುನಾಥ ಗಣಪತಿ ಪಾಲಂಕರ್‌ ಅವರು ಅ.23ರಂದು ಮಧ್ಯಾಹ್ನ 12.20ಕ್ಕೆ ಮುಂಬಯಿಯಿಂದ ಖಾಸಗಿ ಬಸ್ಸಿನಲ್ಲಿ ಬಂದು ನಗರದ ಲೇಡಿಹಿಲ್ ಬಸ್‌ಸ್ಟಾಪ್‌ನಲ್ಲಿ ಇಳಿದು ಕಾರ್‌ಸ್ಟ್ರೀಟ್‌ಗೆ ತೆರಳಲೆಂದು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದಾಗ ಇಬ್ಬರು  ಅವರನ್ನು ತಡೆದು ನಿಲ್ಲಿಸಿ  ಸಮೀಪದಲ್ಲಿದ್ದ ಇನ್ನೋವಾ ಕಾರಿನಲ್ಲಿ  ಅಪಹರಿಸಿ ಕುಂಟಿಕಾನ ಕಾವೂರು ಮೂಲಕ ಬಜಪೆ ಪೇಟೆಯಿಂದ ಸುಮಾರು 1ಕಿ.ಮೀ. ಮುಂದೆ ಕರೆದೊಯ್ದರು. ಅಲ್ಲಿನ ಜನಸಂಚಾರವಿಲ್ಲದ ಸ್ಥಳದಲ್ಲಿ ಅವರಿಂದ 15 ಲ.ರೂ. ಹಾಗೂ 2 ಮೊಬೈಲ್ ಫೋನ್‌ಗಳಿದ್ದ ಬ್ಯಾಗನ್ನು ಕಸಿದು   ಕಾರಿನಿಂದ ಕೆಳಗೆ ದೂಡಿ ಪರಾರಿಯಾಗಿದ್ದರು. ಈ ಬಗ್ಗೆ ಉರ್ವ ಠಾಣೆಯಲ್ಲಿ ಅ. 26ರಂದು ಪ್ರಕರಣ ದಾಖಲಾಗಿತ್ತು.  
ಎಸಿಪಿ ಎಂದು  ಬೆದರಿಸಿದ್ದರು
ಲೇಡಿಹಿಲ್‌ನಿಂದ ಅಪಹರಿಸಿ ಕೊಂಡು ಹೋಗುವಾಗ ಕಾರಿನಲ್ಲಿ ಒಟ್ಟು 6 ಮಂದಿ ಇದ್ದರು. ಅವರು ಮಂಜುನಾಥ ಅವರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯನ್ನು ತೋರಿಸಿ “ಅವರು  ಎಸಿಪಿ ಮಂಜುನಾಥ ಶೆಟ್ಟಿ. ಅವರು ಏನು ಮಾಡ್ತಾರೆ ನೋಡಿ’ ಎಂದು ಬೆದರಿಸಿದ್ದರು. 

ವಿಶೇಷ  ತನಿಖಾ ತಂಡ ರಚನೆ 
ಪ್ರಕರಣದ ಪತ್ತೆಗಾಗಿ  ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದ್ದು, ಇವು ಇಬ್ಬರನ್ನು ಬಂಧಿಸಿ 1.75 ಕೋ.ರೂ.  ಮತ್ತು ಇನ್ನೋವಾ ಕಾರನ್ನು ವಶಪಡಿಸಿಕೊಂಡಿದೆ  ಎಂದು   ಕಮಿಷನರ್‌ ಟಿ. ಆರ್‌. ಸುರೇಶ್‌ ಅವರು ಸೋಮವಾರ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಡಿಸಿಪಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್‌   ಉಪಸ್ಥಿತರಿದ್ದರು. 

ಚಿನ್ನಾಭರಣ ಮಾಲಕರ ಹಣ 
ವಶಪಡಿಸಿಕೊಂಡಿರುವ ಹಣವು ಮಂಗಳೂರಿನ ಕಾರ್‌ ಸ್ಟ್ರೀಟ್‌ನ  ವೈಷ್ಣವಿ ಜುವೆಲರಿ ಮಾಲಕ ಸಂತೋಷ್‌ ಅವರಿಗೆ ಸೇರಿದ್ದಾಗಿರುತ್ತದೆ. ವೈಷ್ಣವಿ ಜುವೆಲರಿಗೆ  ಮುಂಬಯಿಯಲ್ಲೂ ಒಂದು ಶಾಖೆಯಿದೆ. ಕಾರ್‌ಸ್ಟ್ರೀಟ್‌ ಮಳಿಗೆಯಿಂದ ಮುಂಬಯಿ ಶಾಖೆಗೆ ಚಿನ್ನಾಭರಣಗಳನ್ನು ಕೊಂಡೊಯ್ದು  ಅಲ್ಲಿಂದ ಮಂಗಳೂರಿಗೆ  ನಗದು ಹಣ ಸಾಗಿಸಲು ಕೆಲವರನ್ನು ನೇಮಿಸಿದ್ದು, ಅವರಲ್ಲಿ ಮಂಜುನಾಥ ಗಣಪತಿ ಪಾಲಂಕರ್‌  ಒಬ್ಬರಾಗಿದ್ದಾರೆ.  

ವೈಷ್ಣವಿ ಜುವೆಲರಿಯ ಉದ್ಯೋಗಿ  ಮಂಜುನಾಥ ಗಣಪತಿ ಪಾಲಂಕರ್‌ ಮುಂಬಯಿಯಿಂದ ಹಣವನ್ನು ತೆಗೆದುಕೊಂಡು  ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಆರೋಪಿಗಳು ಲೇಡಿಹಿಲ್‌ನಲ್ಲಿ ಕಾದು ನಿಂತು   ಸುಲಿಗೆ  ಮಾಡಿದ್ದಾರೆ ಎಂದು ಟಿ.ಆರ್‌.ಸುರೇಶ್‌ ವಿವರಿಸಿದರು. 

ಐಟಿ  ಇಲಾಖೆಗೆ ಮಾಹಿತಿ
ವೈಷ್ಣವಿ ಜುವೆಲರಿ ನಡೆಸುತ್ತಿರುವ ಈ  ವ್ಯವಹಾರದ  ತನಿಖೆ ಮುಂದು ವರಿಯಲಿದೆ.  ಇದು ಅಧಿಕೃತ ವ್ಯವಹಾರವೇ ಅಥವಾ ಅನಧಿಕೃತವೇ ಎಂದು ತನಿಖೆ ನಡೆಸಬೇಕಾಗಿದೆ. ಮಂಜುನಾಥ ಪಾಲಂಕರ್‌ಗೆ ತಾನು ಸಾಗಿಸುತ್ತಿದ್ದ ಹಣದಲ್ಲಿ ಎಷ್ಟು  ಹಣ ಇದೆ ಎಂಬುದು ತಿಳಿದಿರಲಿಲ್ಲವೇ ಎಂಬ ಸಂಶಯವೂ ಇದೆ. ಆದ್ದರಿಂದ ಒಟ್ಟು  ವ್ಯವಹಾರದ ಬಗ್ಗೆ ಆದಾಯ ತೆರಿಗೆ ಇಲಾಖೆಯ ಗಮನಕ್ಕೆ ತರಲಾಗುವುದು ಎಂದರು. 

ಹೊಸ ತಿರುವು 
ಆರೋಪಿಗಳನ್ನು ವಿಚಾರಿಸಿದಾಗ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮಂಜುನಾಥ ಗಣಪತಿ ಪಾಲಂಕರ್‌  ನೀಡಿದ್ದ ದೂರಿನಲ್ಲಿ  15 ಲ.ರೂ.  ಮತ್ತು ಮೊಬೈಲ್‌ ಫೋನ್‌ ಮಾತ್ರ ಸುಲಿಗೆ ಮಾಡಲಾಗಿತ್ತು ಎಂಬುದಾಗಿ ತಿಳಿಸಿದ್ದರು. ಅಲ್ಲದೆ ಅಪಹರಣ ಮತ್ತು ಸುಲಿಗೆ ನಡೆದದ್ದು ಅ. 23 ರಂದು.   ಪೊಲೀಸರಿಗೆ ದೂರು ನೀಡಿದ್ದು ಅ. 26ರಂದು. ಆರೋಪಿಗಳನ್ನು ತನಿಖೆಗೆ ಒಳಪಡಿಸಿದಾಗ ತಮ್ಮ ಜತೆ ಇನ್ನೂ ನಾಲ್ವರು ಸಹಚರರಿದ್ದರು ಎಂಬುದಾಗಿ ಬಾಯ್ಬಿಟ್ಟಿದ್ದಾರೆ. ಸುಲಿಗೆಗೆ ಒಳಗಾದ ವ್ಯಕ್ತಿಯ ಬ್ಯಾಗಿನಲ್ಲಿ ಒಟ್ಟು  2.35 ಕೋ. ರೂ.ಗಳಿದ್ದವು. ಈ ಪೈಕಿ 1.75 ಕೋ.ರೂ. ತಮ್ಮ ಬಳಿ ಇದ್ದು ಇನ್ನುಳಿದ ಹಣ (60 ಲ. ರೂ.) ಆ ನಾಲ್ವರ ಬಳಿಯಿದೆ ಎಂದು ತಿಳಿ ಸಿದ್ದಾರೆ. ಹಾಗಾಗಿ ಇತರ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಕಮಿಷನರ್‌ ವಿವರಿಸಿದರು. 

 ತನಿಖಾ ತಂಡದ ವಿವರ
ವಿಶೇಷ ತನಿಖಾ ತಂಡದಲ್ಲಿ  ಸಿಸಿಬಿ ಇನ್ಸ್‌ಪೆಕ್ಟರ್‌ ಶಾಂತಾರಾಂ, ಪಿಎಸ್‌ಐ ಶ್ಯಾಮ್‌ ಸುಂದರ್‌, ಸಿಬಂದಿ ಚಂದ್ರಶೇಖರ್‌, ರಾಮಣ್ಣ, ರಾಜ, ಚಂದ್ರ ಅಡೂರು, ಚಂದ್ರಹಾಸ ಸನಿಲ್‌, ಸೀನಪ್ಪ ಪೂಜಾರಿ, ರಾಜೇಂದ್ರ; ಉರ್ವ ಠಾಣೆಯ ಇನ್ಸ್‌ ಪೆಕ್ಟರ್‌ ರವೀಶ್‌ ಎಸ್‌. ನಾಯಕ್‌ ಹಾಗೂ ಸಿಬಂದಿ ಇದ್ದರು. 

ಬಂಧಿತರು
ಬಿ.ಸಿ. ರೋಡ್‌ ಸಮೀಪದ ತಲಪಾಡಿ ಕೆ.ಬಿ.ರಸ್ತೆಯ ಅಬ್ದುಲ್‌ ಮನ್ನಾನ್‌ (29) ಮತ್ತು ಮಂಗಳೂರಿನ ಪಡೀಲ್‌ ಅಳಪೆ ಬಸ್‌ ನಿಲ್ದಾಣ ಬಳಿಯ ರಾಝಿ (26) ಬಂಧಿತರು. ಅಬ್ದುಲ್‌ ಮನ್ನಾನ್‌ ಹಳೆ ಆರೋಪಿಯಾಗಿದ್ದು, ಉಳ್ಳಾಲ  ಠಾಣೆಯಲ್ಲಿ 7 ಹಾಗೂ ಕೊಣಾಜೆ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ. ಈ ಪೈಕಿ 3 ಕೊಲೆ ಪ್ರಕರಣಗಳಾಗಿವೆ.

ಟಾರ್ಗೆಟ್‌ ಗ್ರೂಪ್‌ನ ತದ್ರೂಪ
ಟಾರ್ಗೆಟ್‌ ಗ್ರೂಪ್‌ನ ಇಲ್ಯಾಸ್‌ ನಡೆಸುತ್ತಿದ್ದ ವ್ಯವಹಾರದ ಮಾದರಿಯಲ್ಲೇ ಇಲ್ಲಿ ವ್ಯವಹಾರ ನಡೆಯುತ್ತಿತ್ತು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಕಮಿಷನರ್‌ ಹೇಳಿದರು.  ವಶಪಡಿಸಿದ ಹಣದಲ್ಲಿ 2 ಸಾ. ರೂ. ಮುಖ ಬೆಲೆಯ 7,250 ನೋಟುಗಳು (1.45 ಕೋ. ರೂ.) ಮತ್ತು 500 ರೂ.ಮುಖ ಬೆಲೆಯ 6,000 ನೋಟುಗಳು (30 ಲಕ್ಷ ರೂ.) ಇವೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.