61 ವರ್ಷಗಳ ಹಿಂದಿನ ಪರಪ್ಪು ಸೇತುವೆಗೆ ಬೇಕಿದೆ ಮುಕ್ತಿ


Team Udayavani, Nov 6, 2018, 9:32 AM IST

parappu.jpg

ಕಾರ್ಕಳ: ಕಾರ್ಕಳ ಮುಖ್ಯ ಪೇಟೆಯಿಂದ ಪಳ್ಳಿ-ರಂಗನಪಲ್ಕೆ ಭಾಗಕ್ಕೆ ಸಂಪರ್ಕಿಸುವ ಕಿರಿದಾಗಿರುವ ಪರಪ್ಪು ಸೇತುವೆಯಲ್ಲಿ ಪ್ರತಿನಿತ್ಯವೂ ಸಂಚಾರಕ್ಕೆ ತೊಂದರೆ ಉಂಟಾಗುತಿದೆ. ಸುಮಾರು 61 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ಸದ್ಯದ ಅಧಿಕ ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ.

ಈ ಕಿರು ಸೇತುವೆ ನಿರ್ಮಾಣಗೊಂಡಾಗ ಅಂದಿನ ರಸ್ತೆಗೆ ಪೂರಕವಾಗಿ ನಿರ್ಮಾಣಗೊಂಡಿದೆ. ಆದರೆ ಅನಂತರ ಸೇತುವೆಯ ಎರಡೂ ಭಾಗದ ರಸ್ತೆಗಳು ಅಗಲಗೊಂಡಿವೆ. ವಾಹನ ಸಂಚಾರ ಅಧಿಕವಾಗಿದೆ. ಹೀಗಾಗಿ ಸೇತುವೆ ತೀರ ಇಕ್ಕಟ್ಟಾಗಿ ವಾಹಗಳ ಸುಗಮ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಎರಡೂ ಕಡೆಯಿಂದ ವಾಹನಗಳು ಬಂದರೆ ಒಂದರ ಅನಂತರ ಮತ್ತೂಂದು ಸಂಚರಿಸಬೇಕಾಗುತ್ತದೆ.

ಉಡುಪಿಗೆ 6 ಕಿ.ಮೀ. ಸಮೀಪ..|
ಕಾರ್ಕಳದಿಂದ ಉಡುಪಿ ನಗರಕ್ಕೆ ಪರಪ್ಪು ಸೇತುವೆಯ ಮೂಲಕ ರಂಗನಪಲ್ಕೆ, ಪಳ್ಳಿಯಿಂದ ತೆರಳಲು ಸಾಧ್ಯವಿದೆ. ಅಲ್ಲದೇ ಬೈಲೂರು, ಹಿರಿಯಡ್ಕ ಮಾರ್ಗವಾಗಿ ಉಡುಪಿ ಸಂಚರಿಸುವುದಕ್ಕಿಂತ 6 ಕಿ.ಮೀ. ಸಂಪರ್ಕವೂ ಹತ್ತಿರವಾಗುತ್ತದೆ. ಸದ್ಯ ಬೈಲೂರು ಭಾಗದ ಮುಖ್ಯ ರಸ್ತೆ ಅಲ್ಲಲ್ಲಿ ಹೊಂಡಗುಂಡಿಗಳಿಂದ ತುಂಬಿದೆ. ಹೀಗಾಗಿ ಹಲವು ಖಾಸಗಿ ವಾಹನಗಳು ಈ ಸೇತುವೆ ಅವಲಂಬಿಸಿ ರಂಗನಪಲ್ಕೆ ಮೂಲಕ ಉಡುಪಿ ತೆರಳುತ್ತದೆ.

ಅಡಿಭಾಗ ಬಿರುಕು…
ಸುಮಾರು 61 ವರ್ಷಗಳ ಹಿಂದಿನ ಸೇತುವೆ ಇದಾಗಿದ್ದು, ಶಿಥಿಲಗೊಳ್ಳುತ್ತಿದೆ. ಸೇತುವೆ ಅಡಿಭಾಗದ ಕೆಲವು ಕಡೆ ಬಿರುಕುಬಿಟ್ಟಿದ್ದು, ಅಪಾಯ ಆಹ್ವಾನಿಸುತ್ತಿದೆ. ಕೆಲವೊಂದು ವಾಹನಗಳು ಸೇತುವೆಗೆ ಢಿಕ್ಕಿ ಹೊಡೆದ ಉದಾಹರಣೆಗಳೂ ಇವೆ.

ಕಾರ್ಕಳ ನಗರದ ಪ್ರತಿಯೊಂದು ಶಾಲೆಯ ವಾಹನಗಳು ಈ ಸೇತುವೆ ಮೂಲಕ ಸಂಚರಿಸುತ್ತಿವೆ. 
ಸಮೀಪದಲ್ಲೇ ಗೇರುಬೀಜ ಕಾರ್ಖಾನೆ, ಕಲ್ಲುಗಣಿಗಾರಿಕೆ ಇರುವುದರಿಂದ ಘನವಾಹನಗಳು ತೆರಳುತ್ತವೆ. ಹಲವು ಬಾರಿ ಅಪಘಾತಗಳೂ ಸಂಭವಿಸಿ ಗಾಯಗೊಂಡಿದ್ದಾರೆ.  ಹೀಗಾಗಿ ಇಲ್ಲಿ ಅಗಲವಾಗಿ ಹೊಸ ಸೇತುವೆ ನಿರ್ಮಾಣ ಆಗಬೇಕು ಎನ್ನುವುದು ಸ್ಥಳೀಯರ ಆಗ್ರಹವಿದೆ.

ಮನವಿ ಮಾಡಲಾಗಿದೆ 
ಪರಪ್ಪು ಹೊಸ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಶಾಸಕರಿಗೆ ಪ್ರಸ್ತಾವನೆ ಮಾಡಲಾಗಿದೆ. ಘನ ವಾಹನಗಳು ಸೇರಿದಂತೆ ಪ್ರತೀದಿನ ಸಾವಿರಾರು ವಾಹನಗಳು ಈ ಸೇತುವೆಯನ್ನು ಅವಲಂಭಿಸಿವೆ. ಸೇತುವೆಯ ಸುತ್ತಮುತ್ತಲು ಪೊದೆಗಳು ತುಂಬಿತ್ತು. ಅದನ್ನು ತೆಗೆಯುವ ಕಾರ್ಯ ಮಾಡಲಾಗಿದೆ.
ರಾಜೇಶ್‌ ರಾವ್‌ ಕುಕ್ಕುಂದೂರು ಗ್ರಾ.ಪಂ. ಉಪಾಧ್ಯಕ್ಷ.

 ಸೇತುವೆ ನಿರ್ಮಾಣವಾಗಲಿ
ರಸ್ತೆಗೆ ಸರಿಯಾಗಿ ಅಗಲವಾದ ಸೇತುವೆ ನಿರ್ಮಾಣಗೊಂಡರೆ ಸಾಕಷ್ಟು ರೀತಿಯಲ್ಲಿ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ಈ ಭಾಗದಲ್ಲಿ ಪ್ರತಿದಿನ ಅಧಿಕ ಸಂಖ್ಯೆಯಲ್ಲಿ ವಾಹನಗಳು ತೆರಳುತ್ತವೆ. ರಸ್ತೆ ಅಗಲವಾಗಿದ್ದು, ಸೇತುವೆ ಕಿರಿದಾಗಿದೆ. ಹೀಗಾಗಿ ಕೆಲವೊಂದು ಅಪಘಾತಗಳೂ ಕೂಡ ಹೀಗಾಗಲೇ ಸಂಭವಿಸಿದೆ.
 ಸಂದೀಪ್‌ ಪೂಜಾರಿ,  ಪರಪ್ಪು.

ಜಿವೇಂದ್ರ ಶೆಟ್ಟಿ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.