ಕರ್ನಾಟಕದ ಪ್ರಗತಿಗಾಗಿ ಕೇಂದ್ರ ಸರಕಾರಕ್ಕೆ ಆಗ್ರಹ
Team Udayavani, Nov 6, 2018, 10:12 AM IST
ಮಲ್ಪೆ: ಕೇಂದ್ರ ಸರಕಾರ ನನೆಗುದಿಯಲ್ಲಿರುವ ರಾಜ್ಯದ ಯೋಜನೆಗಳನ್ನು ಶೀಘ್ರದಲ್ಲಿ ಜಾರಿಗೊಳಿಸಿ ಕರ್ನಾಟಕ ಅಭಿವೃದ್ಧಿಯತ್ತ ಸಾಗುವಂತೆ ಮಾಡಬೇಕೆಂದು ದೆಹಲಿ ಕನ್ನಡಿಗ ತುಳುವೆರ್ ಪತ್ರಿಕೆಗಳ ಸಂಪಾದಕ ಬಾ. ಸಾಮಗ ಆಗ್ರಹಿಸಿದರು.
ಅವರು ಕೊಡವೂರು ಹಳೆವಿದ್ಯಾರ್ಥಿ ಸಂಘ ಮತ್ತು ಯುವಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದಂದು ನಮ್ಮ ನಡಿಗೆ ಕನ್ನಡಕ್ಕಾಗಿ ಮಿಡಿಯುವ ಹಿರಿಯರೆಡೆಗೆ ಕಾರ್ಯಕ್ರಮದಲ್ಲಿ ಹೊರನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುವಲ್ಲಿ ಅಪ್ರತಿಮ ಸೇವೆ ಸಲ್ಲಿಸಿದಕ್ಕಾಗಿ ಕೊಡವೂರು ಲಕ್ಷ್ಮೀ ನಗರದ ಅವರ ಸ್ವಗೃಹದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದರು.
ಕರ್ನಾಟಕ ಸರಕಾರವು ದಿಲ್ಲಿಯಲ್ಲಿ ಕರ್ನಾಟಕ ಸಂಸ್ಕೃತಿ ಕೇಂದ್ರ ಜನಸಾಮಾನ್ಯರಿಗೆ ಅತಿಥಿಗೃಹ, ಮಹಿಳೆಯರ ಹಾಸ್ಟೆಲ್ ಸ್ಥಾಪಿಸಬೇಕೆಂದು ಮನವಿ ಮಾಡಿದರು.
ಸಾಹಿತಿ ಪೂರ್ಣಿಮಾ ಜನಾರ್ದನ್ ಕನ್ನಡನಾಡು, ನುಡಿಗಾಗಿ ಬಾ. ಸಾಮಗರು ಸಲ್ಲಿಸಿದ ಅನನ್ಯ ಸೇವೆಯನ್ನು ತಿಳಿಸಿದರು. ಯುವಕ ಸಂಘದ ಅಧ್ಯಕ್ಷ ಪ್ರಭಾತ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯ ವಿಜಯ ಕೊಡವೂರು. ಶಿಕ್ಷಕಿ ಮಲ್ಲಿಕಾ ದೇವಿ, ಪತ್ರಕರ್ತ ಜನಾರ್ದನ್ ಕೊಡವೂರು, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಕೊಡವೂರು, ಸಲಹೆಗಾರರಾದ ಟಿ. ರಾಘವೇಂದ್ರ ರಾವ್, ಅಶೋಕ್ ಉದ್ದಿನಹಿತ್ಲು, ಶೇಖರ್ ಮಾಬ್ಯಾನ್, ಶರತ್ಚಂದರ್ ಉದ್ದಿನಹಿತ್ಲು ಉಪಸ್ಥಿತರಿದ್ದರು.
ಯುವಕ ಸಂಘದ ಕಾರ್ಯದರ್ಶಿ ದೀಕ್ಷಿತ್ ವಿ. ದೇವಾಡಿಗ ಸ್ವಾಗತಿಸಿದರು. ಸತೀಶ್ ಕೊಡವೂರು ನಿರೂಪಿಸಿದರು. ದೀಪಕ್ ವಿ. ದೇವಾಡಿಗ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ